Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತುಂಗಾಭದ್ರಾ ಗೇಟ್ : 2 ದಿನದಿಂದ ಎಷ್ಟು ಲಕ್ಷ ಕ್ಯೂಸೆಕ್ ನೀರು ಪೋಲಾಗಿದೆ ಗೊತ್ತಾ..?

Facebook
Twitter
Telegram
WhatsApp

 

ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ತುಂಗಾಭದ್ರಾ ಜಲಾಶಯ ಕೂಡ ಒಂದು. ಆದರೆ ಕಳೆದ ಎರಡು ದಿನದಿಂದ ಡ್ಯಾಂನಿಂದ ಸಿಕ್ಕಾಪಟ್ಟೆ ನೀರು ಪೋಲಾಗುತ್ತಿದೆ. ಗೇಟ್ ನಂಬರ್19 ಲಾಕ್ ಕಟ್ ಆಗಿದ್ದು, ಇದಕ್ಕೆ ಪ್ರಮುಖ ಕಾರಣವಾಗಿದೆ. ನಿರಂತರವಾಗಿ ನೀರು ಹೊರಗೆ ಹೋಗುತ್ತಿದ್ದು, ಈಗಾಗಲೇ 1,50,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ.

ರೈತರಿಗೆ ಬಳಕೆಯಾಗಬೇಕಾದ ನೀರು ಹೀಗೆ ಪೋಲಾಗುತ್ತಿರುವುದು ಅಲ್ಲಿನ ರೈತರಿಗೆ ಬೇಸರವನ್ನುಂಟು ಮಾಡಿದೆ. ಹಾಗೇ ಗ್ರಾಮಸ್ಥರು ಕೂಡ ಆತಂಕದಲ್ಲಿದ್ದಾರೆ. ನೀರು ಹೊರಗೆ ಹೆಚ್ಚಾಗಿ ಹೋದರೆ, ಪ್ರವಾಹವೇನಾದರೂ ಉಂಟಾದರೆ ಹೇಗೆ ಎಂಬ ಭಯ ಅವರಲ್ಲಿದೆ. ಈಗಾಗಲೇ ಜಲಾಶಯದ ಅಕ್ಕಪಕ್ಕದ, ನದಿ ಪಾತ್ರದ ಜನರಿಗೆ ಸೂಕ್ತ ಸ್ಥಳಕ್ಕೆ ತೆರಳುವಂತೆ ಮನವಿ ಮಾಡಿಕೊಳ್ಳಲಾಗಿದೆ. ಪ್ರವಾಹದ ಎಚ್ಚರಿಕೆಯನ್ನು ನೀಡಲಾಗಿದೆ ಎಂದು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿಯನ್ನು ನೀಡಿದೆ. ಈ ಸಂಬಂಧ ಸೋಷಿಯಲ್ ಮೀಡಿಯಾದಲ್ಲೂ KSNDMC ಮಾಹಿತಿಯನ್ನು ನೀಡಿದೆ.

ಇಂದು ಬೆಳಗ್ಗೆಯಿಂದಾನೇ 1,5,000 ಕ್ಯೂಸೆಕ್ ಒಳಹರಿವು ಹೆಚ್ಚಾಗುತ್ತಿದೆ‌. ನದಿ ಪಾತ್ರದ ಜನರಿಗೆ ಎಚ್ಚರದಿಂದ ಇರಲು ಸೂಚಿಸಲಾಗಿದೆ. ಇನ್ನು ಈಗಾಗಲೇ ಡ್ಯಾಂನ ಪರಿಸ್ಥಿತಿಯನ್ನು ಡಿಸಿಎಂ ಡಿಕೆ ಶಿವಕುಮಾರ್ ಪರಿಶೀಲನೆ ಮಾಡಿ ಹೋಗಿದ್ದಾರೆ. ದುರಸ್ಥಿ ಮಾಡಲು ತಜ್ಞರೊಂದಿಗೆ ಚರ್ಚೆ ನಡೆಸಲಾಗಿದೆ. ತಜ್ಞರ ಜೊತೆಗೆ ಈ ಸಂಬಂಧ ಚರ್ಚೆಯನ್ನು ನಡೆಸಲಾಗಿದೆ. ಆದರೆ ದುರಸ್ಥಿ ಕಾರ್ಯ ಇನ್ನು ಆರಂಭವಾಗಿಲ್ಲ‌ ನೀರಿನ ಹೊರ ಹರಿವಿನ ಪ್ರಮಾಣ ಹೆಚ್ಚಾದ ಹಿನ್ನೆಲೆ ಆನೆಗೊಂದಿಯ ಕೃಷ್ಣದೇವರಾಯ ಸಮಾಧಿಯ ಕಲ್ಲಿನ ಮಂಟಪವೂ ಮುಳುಗುವ ಸ್ಥಿತಿ ನಿರ್ಮಾಣವಾಗಿದೆ. ಒಳಹರಿವು ಹೆಚ್ಚಾದ ಹಿನ್ನೆಲೆ ಜನರಿಗೆ ಎಚ್ಚರಿಕೆ ನೀಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!