Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅರೆಕಾಲಿಕ ಉಪನ್ಯಾಸಕರಿಗೆ ಗೌರವ ಧನ ಹೆಚ್ಚಳ…!

Facebook
Twitter
Telegram
WhatsApp

 

ಬೆಂಗಳೂರು: ವೇತನ ಪರಿಷ್ಕರಣೆ ವರದಿ ಆಧರಿಸಿ ಸರ್ಕಾರಿ ಎಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಅರೆಕಾಲಿಕ ಉಪನ್ಯಾಸಕರಿಗೆ ಗೌರವ ಧನ ಹೆಚ್ಚಳ ಮಾಡಿ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಶಿಕ್ಷಣ ಇಲಾಖೆಯ ಮಹತ್ವದ ಆದೇಶದಿಂದ ಉಪನ್ಯಾಸಕರು ಖುಷಿಯಾಗಿದ್ದಾರೆ.

ಅರೆಕಾಲಿಕ ಉಪನ್ಯಾಸಕರಿಗೆ 5 ಸಾವಿರದಿಂದ 8 ಸಾವಿರ ರೂಪಾಯಿಯ ತನಕ ಗೌರವಧನ ಹೆಚ್ಚಳ ಮಾಡಿದ್ದಾರೆ. ಎಐಸಿಟಿಯು ಮಾನದಂಡ ಇರುವವರಿಗೆ ಸರ್ಕಾರಿ ಕಾಲೇಜುಗಳಲ್ಲಿ 5 ವರ್ಷ ಮೇಲ್ಪಟ್ಟವರಿಗೆ 32 ಸಾವಿರ. ಪಾಲಿಟೆಕ್ನಿಕ್ ಗಳಲ್ಲಿ 28 ಸಾವಿರ ರೂಪಾಯಿ ಗೌರವ ಧನ ಹಾಗೂ 5 ವರ್ಷಕ್ಕಿಂತ ಕೆಳಪಟ್ಟವರಿಗೆ ಕ್ರಮವಾಗಿ 30 ಸಾವಿರ ನೀಡಲಾಗುವುದು. ಪಾಲಿಟೆಕ್ನಿಕ್ ನಲ್ಲಿ 26 ಸಾವಿರ ರೂಪಾಯಿಯನ್ನು ನಿಗಧಿ ಮಾಡಲಾಗಿದೆ.

 

ಉನ್ನತ ಶಿಕ್ಷಣ ಇಲಾಖೆಯ ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು, ಸರ್ಕಾರಿ ಪಾಲಿಟೆಕ್ನಿಕ್‌ಗಳು ಮತ್ತು ಸರ್ಕಾರಿ ಕಿರಿಯ ತಾಂತ್ರಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುವ ಅರೆಕಾಲಿಕ ಉಪನ್ಯಾಸಕರುಗಳಿಗೆ ಕ್ರಮವಾಗಿ ಹಾಲಿ ವಾರಕ್ಕೆ ಗರಿಷ್ಠ 8/9/9 ಗಂಟೆಗಳ ಕಾರ್ಯಭಾರಕ್ಕೆ ಬದಲಾಗಿ, ವಾರಕ್ಕೆ ಗರಿಷ್ಠ 15/17/14 ಗಂಟೆಗಳ ಕಾರ್ಯಭಾರವನ್ನು ನಿಗದಿಪಡಿಸಿದ್ದು, ಅವರ ಮಾಸಿಕ ಗೌರವಧನವನ್ನು ಭವಿಷ್ಯವರ್ತಿಯಾಗಿ ಅಂದರೆ ಈ ಆದೇಶ ಹೊರಡಿಸಿದ ದಿನಾಂಕದಿಂದ ಜಾರಿಗೆ ಬರುವಂತೆ ಷರತ್ತುಗಳಿಗೊಳಪಟ್ಟು ನಿಗದಿಪಡಿಸಿ ಉನ್ನತ ಶಿಕ್ಷಣ ಇಲಾಖೆ (ತಾಂತ್ರಿಕ) ಸರ್ಕಾರದ ಅಧೀನ ಕಾರ್ಯದರ್ಶಿ ಮಹಾಂತಪ್ಪ ಎಸ್. ತುರಕನೂರ ಆದೇಶ ಹೊರಡಿಸಿದ್ದಾರೆ. ಈ ಸುದ್ದಿ ಅರೆಕಾಲಿಕ ಉಪನ್ಯಾಸಕರಿಗೆ ಸಿಹಿ ಸುದ್ದಿ ನೀಡಿದೆ. ಸರ್ಕಾರದ ಈ ಮಹತ್ವದ ಆದೇಶಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!