Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುಂದೆ ಬಿಜೆಪಿ ಗಲ್ಲಿ ಗಲ್ಲಿಯಲ್ಲಿ ಇಬ್ಭಾಗವಾಗುತ್ತೆ : ಈಶ್ವರಪ್ಪ ಎಚ್ಚರಿಕೆ

Facebook
Twitter
Telegram
WhatsApp

 

ಶಿವಮೊಗ್ಗ: ಬಿಜೆಪಿ ನಾಯಕರು ಬೆಳಗಾವಿಯಲ್ಲಿ ಸಭೆ ನಡೆಸಿದ್ದಾರೆ. ಈ ಸಂಬಂಧ ಕೆ.ಎಸ್.ಈಶ್ವರಪ್ಪ ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಾಯಕರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ.

 

ಶಿವಮೊಗ್ಗದಲ್ಲಿ ಮಾತನಾಡಿದ ಈಶ್ವರಪ್ಪ ಅವರು, ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಸಭೆ ನಡೆಸಿದ್ದು ಆತಂಕ ತಂದಿದೆ. ಅವರು ಪಕ್ಷದಲ್ಲಿ ಏನೇನು ನಡೆದಿದೆ ಎಂಬುದನ್ನು ಹೇಳಿಕೊಂಡಿಲ್ಲ. ಪಾದಯಾತ್ರೆ ನಡೆಸುವುದಾಗಿ ಹೇಳಿಕೊಂಡಿದ್ದಾರೆ. ಒಂದು ವೇಳೆ ಇದು ನಡೆದಿದ್ದೇ ನಿಜವಾದರೆ ಬಿಜೆಪಿ ಗಲ್ಲಿ ಗಲ್ಲಿಯಲ್ಲಿ, ತಾಲೂಕು ಮಟ್ಟದಲ್ಲಿ ಇಬ್ಭಾಗವಾಗಲಿದೆ. ಸಭೆ ಸೇರಿದ ನಾಯಕರಲ್ಲಿ ಹಲವರು ಆರ್ ಎಸ್ ಎಸ್ ನಲ್ಲಿ ಇದ್ದವರು. ಬಿಜೆಪಿಯನ್ನು ಕಟ್ಟಿದವರು. ಪಕ್ಷದಲ್ಲಿ ತಮಗೆ ಆದ ನೋವನ್ನು ಅವರು ಹೇಳಿಕೊಂಡಿಲ್ಲ.

ಪಕ್ಷದ ಸಿದ್ಧಾಂತದ ಅಡಿ ಕೆಲಸ‌ಮಾಡಿದರು ಸಹ ಅವರು ನೋವು ತಿಂದಿದ್ದಾರೆ. ಗಣೇಶ ಚತುರ್ಥಿ ಬಳಿಕ ಪಾದಯಾತ್ರೆ ಮಾಡುವುದಾಗಿ ಹೇಳಿದ್ದಾರೆ. ಕೇಂದ್ರ ನಾಯಕರು ಸಭೆ ನಡೆಸಿದ ನಾಯಕರನ್ನು ಕಡೆಗಣಿಸಬಾರದು. ಹನ್ನೆರಡು ಜನ ಮಾತ್ರ ಸಭೆ ನಡೆಸಿದ್ದಾರೆ. ಕೇಂದ್ರದ ನಾಯಕರು ತಾತ್ಸಾರ ಮಾಡಬಾರದು. ಪಾದಯಾತ್ರೆ ನಡೆಸಿದ್ದೇ ಆದಲ್ಲಿ ಗಲ್ಲಿ ಗಲ್ಲಿಯಲ್ಲೂ ಪಕ್ಷ ಎರಡು ಹೋಳಾಗುತ್ತದೆ.

ಯಡಿಯೂರಪ್ಪ ಪುತ್ರ ವುಜಯೇಂದ್ರ ಅವರನ್ನು ರಾಜ್ಯಾಧ್ಯಜ್ಷರನ್ನಾಗಿ‌ಮಾಡಿದ್ದೇ ಎಲ್ಲರಿಗೂ ಆಶ್ಚರ್ಯವಾಗಿತ್ತು. ಯಡಿಯೂರಪ್ಪ ಕುಟುಂಬಕ್ಕೆ ಅಧಿಕಾರ ನೀಡಿದ್ದೆ ಲೋಕಸಭೆಯಲ್ಲಿ ಬಿಜೆಪಿ 25ರಿಂದ 17 ಸ್ಥಾನಕ್ಕೆ ಇಳಿದಿದ್ದು. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಪಕ್ಷ ಬಲ ಹೊಂದಿತ್ತು.ಚಾಗ ಹೆಚ್ಚು ಸ್ಥಾನ ಗಳಿಸಿತ್ತು. ಆದರೆ ಅದು ಈಗ ಸಾಧ್ಯವಾಗಲಿಲ್ಲ. ಯಡಿಯೂರಪ್ಪ ಅವರ ಕುಟುಂಬದ ಕೈಯಲ್ಲಿ ಪಾರ್ಟಿ ಕೊಡಲು ಕೃಂದ್ರದ ನಾಯಕರಿಗೆ ಯಾಕಿಷ್ಟು ಮೋಹ ಎಂದು ಈಶ್ವರಪ್ಪ ಪ್ರಶ್ನೆ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!