Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದ ಶಿರೂರು ಬಿಟ್ಟು ಕೇರಳದ ವಯನಾಡಿಗೆ ಸ್ಪಂದಿಸುತ್ತಿದೆ ಸರ್ಕಾರ : ಪ್ರಣವಾನಂದ ಸ್ವಾಮೀಜಿ ಬೇಸರ

Facebook
Twitter
Telegram
WhatsApp

ಕಾರವಾರ: ರಾಜ್ಯದಲ್ಲಿ ಸುರಿದ ಮಳೆಯಿಂದಾಗಿ ಬಹಳಷ್ಟು ಅನಾಹುತ ಸಂಭವಿಸಿದೆ. ಶಿರೂರು ಗುಡ್ಡ ಕುಸಿತದಿಂದ ಅದೆಷ್ಟೋ ಜನ ಪ್ರಾಣ ಕಳೆದುಕೊಂಡಿದ್ದಾರೆ. ಅದೆಷ್ಟೋ‌ಜನರ ಬದುಕು ಬೀದಿಗೆ ಬಂದಿದೆ. ಈ ಬಗ್ಗೆ ರಾಜ್ಯ ಸರ್ಕಾರದ ನಡೆಗೆ ಪ್ರಣವಾನಂದ ಸ್ವಾಮೀಜಿ ಬೇಸರ ಹೊರ ಹಾಕಿದ್ದಾರೆ.

ಕಾರವಾರದಲ್ಲಿ ಮಾತನಾಡಿದ ಸ್ವಾಮೀಜಿ, ವಯನಾಡಿನಲ್ಲಿ 100 ಮನೆಗಳನ್ನು ಕಟ್ಟಿಕೊಡಲು ರಾಜ್ಯ ಸರ್ಕಾರ ಮುಂದಾಗಿದೆ. ಆದರೆ ಶಿರೂರು ದುರಂತದಿಂದ ಉಳುವರೆ ಗ್ರಾಮದಲ್ಲಿ ಮನೆ ಕಳೆದುಕೊಂಡವರ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ. ಉಳುವರೆ ಗ್ರಾಮದಲ್ಲಿ ಮನೆ ಕಳೆದುಕೊಂಡವರಿಗೆ ಕೇವಲ 1 ಲಕ್ಷದ 20 ಸಾವಿರ ಹಣ ಮಾತ್ರ ನೀಡಿದೆ. ವಯನಾಡಿನ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿನಿಧಿಸುವ ಕ್ಷೇತ್ರ. ರಾಹುಲ್ ಗಾಂಧಿಯನ್ನು ಓಲೈಕೆ ಮಾಡುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಹೀಗಾಗಿಯೇ ಅಲ್ಲಿ ಮನೆಗಳನ್ನು ಕಟ್ಟಿಸಿಕೊಡಲು ಮುಂದಾಗಿದೆ.

 

ಬೇರೆ ರಾಜ್ಯದ ಜನ ಕಷ್ಟದಲ್ಲಿದ್ದಾಗ ಪರಿಹಾರ ಕೊಡುವುದು ತಪ್ಪಲ್ಲ. ಆದರೆ ತಮ್ಮ ಪಕ್ಷದ ನಾಯಕನ ಮುಖ ನೋಡಿ ಪರಿಹಾರ ಕೊಡುವ ಇವರಿಗೆ ನಮ್ಮ ರಾಜ್ಯದ ಜನ ಬೀದಿ ಪಾಲಾಗಿರುವುದು ಕಣ್ಣಿಗೆ ಕಾಣುವುದಿಲ್ಲವಾ..? ಉಳುವರೆ ಗ್ರಾಮದಲ್ಲಿ ಮನೆ ಕಳೆದುಕೊಂಡವರಿಗೆ ಯಾಕೆ ಮನೆ ಕಟ್ಟಿ ಕೊಡುತ್ತಿಲ್ಲ. ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ತಮ್ಮ ರಾಜಕೀಯ ಲಾಭ ಪಡೆದುಕೊಳ್ಳುವಲ್ಲಿ ಬ್ಯುಸಿ ಆಗಿದ್ದಾರೆ. ತಾವೂ ಕಬಳಿಸಿದ ಆಸ್ತಿಯ ಸುರಕ್ಷತೆಗಾಗಿ ಹೋರಾಟ ಮಾಡುತ್ತಿದ್ದಾರೆ. ಆದರೆ ಶಿರೂರು ದುರಂತದ ಬಗ್ಗೆ ಕಿಂಚಿತ್ತು ಕಾಳಜಿ ವಹಿಸುತ್ತಿಲ್ಲ. ಅಧಿವೇಶನದ ಉದ್ಧಕ್ಕೂ ಆರೋಪ ಪ್ರತ್ಯಾರೋಪಗಳೇ ಆಯ್ತು ಎಂದು ಸರ್ಕಾರದ ವಿರುದ್ಧ ಸ್ವಾಮೀಜಿ ಹರಿಹಾಯ್ದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!