Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭರವಸೆ ಕೊಟ್ಟಂತೆ ನಡೆದುಕೊಳ್ಳಲು ಆಗದಿದ್ದಲ್ಲಿ ರಾಜೀನಾಮೆ ನೀಡಿ : ಕಾಂಗ್ರೆಸ್ ನಾಯಕರಿಗೆ ಸಂಸದ ಕಾರಜೋಳ ಸವಾಲು

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 14 : ಒಂದು ವರ್ಷದ ಕಾಂಗ್ರೆಸ್ ಸರ್೬ ಆಡಳಿತದಲ್ಲಿ ರಾಜ್ಯವನ್ನು 10 ವರ್ಷ ಹಿಂದಕ್ಕೆ ಕೊಂಡೊಯ್ದಿದ್ದಾರೆ. ಕಾಂಗ್ರೆಸ್ ಸರ್ಕಾರ ಭರವಸೆ ಕೊಟ್ಟಂತೆ ನಡೆದುಕೊಳ್ಳಬೇಕು. ಇಲ್ಲವಾದಲ್ಲಿ ರಾಜೀನಾಮೆ ನೀಡಿ ಮನೆಗೆ ಹೋಗಬೇಕು. ಮತ್ತೊಮ್ಮೆ ಚುನಾವಣೆ ಎದುರಿಸಿ ಅಧಿಕಾರಕ್ಕೆ ಬನ್ನಿ ಎಂದು ಸಂಸದ ಗೋವಿಂದ ಕಾರಜೋಳ ಸವಾಲು ಹಾಕಿದ್ದಾರೆ.

ಗ್ಯಾರಂಟಿ ಯೋಜನೆ ಕಡಿತಕ್ಕೆ ಸಚಿವರಿಂದ ಒತ್ತಡ ವಿಚಾರಕ್ಕೆ ಬಿಜೆಪಿ ಸಂಸದ ಗೋವಿಂದ ಕಾರಜೋಳ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಪಕ್ಷದ ಮೋಸದಾಟ ನಡೆಯೋದಿಲ್ಲ. ಮೋಸ ಮಾಡಿದರೆ ನಮ್ಮ ಪಕ್ಷ ಹೋರಾಟಕ್ಕೆ ತೀರ್ಮಾನಿಸಲಿದೆ. ಚುನಾವಣೆ ಪೂರ್ವ ಗ್ಯಾರಂಟಿ ಘೋಷಣೆ ವೇಳೆ ಗೊತ್ತಿರಲಿಲ್ಲವೇ ? ಅಭಿವೃದ್ಧಿಗೆ ತೊಂದರೆ ಆಗುತ್ತದೆಂದು ತಿಳಿದಿರಲಿಲ್ಲವೇ ?  ಲೋಕಸಭೆ ಚುನಾವಣೆ ವೇಳೆಯೂ ಮಹಿಳೆಯರಿಗೆ 1 ಲಕ್ಷ ಘೋಷಣೆ ಮಾಡಿದ್ದರು. ಸುಳ್ಳು ಹೇಳುವುದು, ಮೋಸದಾಟ ನಡೆಯೋದಿಲ್ಲ. ಬಡತನದ ಜನ ಸರ್ಕಾರದ ಸವಲತ್ತು ಕೇಳುತ್ತಾರೆ. ಶೋಷಿತರಿಗೆ ಶಿಕ್ಷಣ ಸೇರಿ ವಿವಿಧ ಸವಲತ್ತು ನೀಡಬೇಕಾಗುತ್ತದೆ.  ಹಿಂದುಳಿದ ವರ್ಗದ ಚಾಂಪಿಯನ್ ಎಂದು ಸಿದ್ಧರಾಮಯ್ಯ ಹೇಳಿಕೊಳ್ಳುತ್ತಾರೆ
ಅಹಿಂದ ವರ್ಗದ ಏಳ್ಗೆಗೆ ಕಟಿಬದ್ಧರಾಗಿರಬೇಕು. ಬಡವರ ಪರ ಯಾವುದೇ ಯೋಜನೆ ನಿಲ್ಲಿಸಬಾರದು ಎಂದಿದ್ದಾರೆ.

ಎಸ್ಸಿ, ಎಸ್ಟಿ ಒಳಮೀಸಲಾತಿ ವರ್ಗೀಕರಣ ವಿಚಾರವಾಗಿ ಮಾತನಾಡಿ, ಎಐಸಿಸಿ ಅದ್ಯಕ್ಷ ಖರ್ಗೆ ಗೊಂದಲ ಸೃಷ್ಠಿಸಬಾರದು ಮತಬ್ಯಾಂಕ್ ರಾಜಕಾರಣಕ್ಕಾಗಿ ಅನುಷ್ಠಾನಕ್ಕೆ ತರದಿರಲು ಪ್ರಯತ್ನ ಆಗ್ತಿದೆ. ಶೋಷಿತ ಜನ ಮುಂದುವರೆದರೆ ‘ಕೈ’ ಮತಬ್ಯಾಂಕ್ ಕಡಿತದ ಭಯ ಇದೆ.‌ ಕೆನೆ ಪದರ ಬಗ್ಗೆ ಪ್ರಸ್ತಾಪಿಸಿ ಖರ್ಗೆರಿಂದ ಗೊಂದಲ ಸೃಷ್ಠಿಯಾಗಿದೆ. ಸುಪ್ರೀಂಕೋರ್ಟ್ ಸ್ಪಷ್ಟವಾಗಿ ಒಳ ಮೀಸಲಾತಿ ಜಾರಿಗೆ ಸೂಚಿಸಿದೆ. ಕೆನೆ ಪದರ ಬಗ್ಗೆ ಪ್ರಾಸಂಗಿಕವಾಗಿ ಸಲಹೆ ನೀಡಿದೆ. ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಖರ್ಗೆ ಸೂಚನೆ ನೀಡಲಿ. ಕೂಡಲೇ ಒಳ ಮೀಸಲಾತಿ ಜಾರಿಗೆ ಸೂಚನೆ ನೀಡಲಿ. ಕಾಂಗ್ರೆಸ್ ಸಿಎಂಗಳ ಸಭೆ ಕರೆದು ಈ ಬಗ್ಗೆ ಸೂಚನೆ ನೀಡಲಿ. 101ಜಾತಿಗೆ ಅನುಕೂಲ ಆಗುವ ಕಾರ್ಯ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!