Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅದಿರು ಸಾಗಿಸಲು ಅವಕಾಶ ನೀಡಿ : ಚಿತ್ರದುರ್ಗದಲ್ಲಿ ಲಾರಿ ಮಾಲೀಕರ ಸಂಘದ ಒತ್ತಾಯ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ,ಆಗಸ್ಟ್. 14  : ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಆದ ತೀರ್ಮಾನದಂತೆ ಶೇ.  30 : 70 ಅನುಪಾತದಡಿ ಕಬ್ಬಿಣದ ಅದಿರು ಸಾಗಾಣಿಕೆ ಮಾಡಲು ಅವಕಾಶ ನೀಡದಿರುವ ಹಿರೇಗುಂಟನೂರು ಹೋಬಳಿ ಬೆದರು ಬೊಮ್ಮನಹಳ್ಳಿ ಮತ್ತು ಮೇಗಳಹಳ್ಳಿ ಮಿನರಲ್ ಎಂಟರ್ ಪ್ರೈಸಸ್ ಸೇಸಾ ಗೋವಾ(ವೇದಾಂತ) ಮೈನ್ಸ್ ವಿರುದ್ದ ಚಿತ್ರದುರ್ಗ ಅದಿರು ಮತ್ತು ಸರಕು ಸಾಗಾಣಿಕೆ ಲಾರಿ ಮಾಲೀಕರ ಸಂಘದಿಂದ ಒನಕೆ ಓಬವ್ವ ವೃತ್ತದಲ್ಲಿ ಧರಣಿ ಮುಂದುವರೆದಿದೆ.

ದಿನಾಂಕ : 4-7-2013 ಅಂದಿನ ಜಿಲ್ಲಾಧಿಕಾರಿ ವಿ.ಪಿ.ಇಕ್ಕೇರಿ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಪರಿಸರ ಮತ್ತು ವಾಯು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು, ಗಣಿಗುತ್ತಿಗೆ ಪ್ರತಿನಿಧಿಗಳು ಲಾರಿ ಮಾಲೀಕರ ಸಮುಖ್ಯದಲ್ಲಿ ನಡೆದ ತೀರ್ಮಾನದಂತೆ ಶೇ.70 ರಷ್ಟು ಕಬ್ಬಿಣದ ಅದಿರು ರೈಲು ಮೂಲಕ ಮತ್ತು ಶೇ.30 ಅದಿರನ್ನು ಲಾರಿಗಳ ಮೂಲಕ ಸಾಗಿಸುವಂತೆ ತೀರ್ಮಾನವಾಗಿತ್ತು.

ಆದರೆ ಗಣಿ ಮಾಲೀಕರುಗಳು ಸಭೆಯಲ್ಲಿ ಆದ ತೀರ್ಮಾನದಂತೆ ನಿಯಮ ಪಾಲಿಸದಿರುವುದರಿಂದ ಲಾರಿ ಮಾಲೀಕರುಗಳು ಜೀವನ ಸಾಗಿಸಲು ಆಗದೆ ಬೀದಿಗೆ ಬಿದ್ದಿದ್ದಾರೆ. ನ್ಯಾಯ ಕೇಳಲು ಹೋದರೆ ಗಣಿ ಮಾಲೀಕರುಗಳು ನಮ್ಮ ಮೇಲೆ ದೌರ್ಜನ್ಯವೆಸಗುತ್ತಿದ್ದಾರೆ. ಕಬ್ಬಿಣದ ಅದಿರು ಸಾಗಿಸಲು ಲಾರಿಗಳಿಗೆ ಅವಕಾಶ ನೀಡುವಂತೆ ಪ್ರತಿಭಟನಾನಿರತರು ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಚಿತ್ರದುರ್ಗ ಅದಿರು ಮತ್ತು ಸರಕು ಸಾಗಾಣಿಕೆ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಎಂ.ಡಿ.ಅಶ್ವಕ್‍ಆಲಿ, ಗೌರವಾಧ್ಯಕ್ಷ ಮಹಮದ್ ಇಮ್ರಾನ್, ಕಾರ್ಯದರ್ಶಿ ಡಿ.ನಾಗರಾಜ್, ಸೈಯದ್ ಅನೀಸ್, ಸಾಧಿಕ್, ಶಂಷೀರ್, ಕೊಟ್ರೇಶ್, ಲೋಕೇಶ್, ಫಾರೂಖ್ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!