Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಗಸ್ಟ್ 17ರಂದು ಎಚ್ಚರ : ಭೂಮಿಗೆ ಹತ್ತಿರವಾಗುವ ಕ್ಷುದ್ರಗ್ರಹದ ಬಗ್ಗೆ ನಾಸಾ ಹೇಳಿದ್ದೇನು..?

---Advertisement---

 

 

ಬಾಹ್ಯಾಕಾಶ ಸಂಸ್ಥೆಯಾದ ನಾಸಾ ಜನರಿಗೆ ಕ್ಷುದ್ರಗ್ರಹದ ಬಗ್ಗೆ ಎಚ್ಚರಿಕೆಯನ್ನು ನೀಡಿದೆ. ಆಗಸ್ಟ್ 17 ರಂದು ಕ್ಷುದ್ರಗ್ರಹ ಭೂಮಿಗೆ ಹತ್ತಿರವಾಗಲಿದ್ದು, ಅದನ್ನು ತಡೆಯುವ ಸಿದ್ಧತೆಗಳಿಲ್ಲ ಎಂಬ ಎಚ್ಚರಿಕೆಯನ್ನು ನೀಡಿದೆ. ಈ ಗ್ರಹ ಭೂಮಿಗೆ ಅಪ್ಪಳಿಸುವ ಶೇ72 ರಷ್ಟು ಸಾಧ್ಯತೆಯನ್ನು ಹೊಂದಿದೆ. ಈ ಕ್ಷುದ್ರ ಗ್ರಹವನ್ನು ವಿಮಾನದ ಗಾತ್ರಕ್ಕೆ ಹೋಲಿಕೆ ಮಾಡಲಾಗಿದೆ. ನಾಸಾ ಹೇಳಿರುವಂತೆ 110 ಅಡಿ ವ್ಯಾಸವನ್ನು ಹೊಂದಿರುವ ಕ್ಷುದ್ರಗ್ರಹ 2024 OY2 ಇದಾಗಿದೆ.

ಇನ್ನು ನಾಸಾ ಹೆಸರಿಸಿರುವಂತೆ ಕ್ಷುದ್ರಗ್ರಹ 2024 OY2 ಸೂರ್ಯನನ್ನು ಸುತ್ತುವ ಮತ್ತು ಭೂಮಿಯ ಕಕ್ಷೆಗೆ ಸಮೀಪವಿರುವ ವಸ್ತುಗಳ ಗುಂಪಿಗೆ ಸೇರಿದೆ. ಇದು ಅಸಾಮಾನ್ಯವಾಗಿದ್ದು, ವಿಜ್ಞಾನಿಗಳಿಗೆ ಇದರ ಡೇಟಾ ಸಂಗ್ರಹಿಸುವುದೇ ಬಹುಮುಖ್ಯ ಕೆಲಸವಾಗಿದೆ. ಕ್ಷುದ್ರಗ್ರಹ 2024 OY2 ಭೂಮಿಯ ಸಮೀಪವಾಗಿ ಸರಿ ಸುಮಾರು 1.02 ಮಿಲಿಯನ್ ಮೈಲುಗಳ ದೂರದಲ್ಲಿ ಹಾರಲಿದೆ ಎಂಬ ನಿರೀಕ್ಷೆ ಇದೆ.

ಆದರೆ ಖಗೋಳದ ಭಾಷೆಯಲ್ಲಿ ಭೂಮಿಯ ಸಮೀಪವಾಗಿ ಹಾದು ಹೋದಂತೆ ಕಾಣಲಿದೆ. ಅಂದ ಹಾಗೆಯೇ ಇದು ಪ್ರತಿ ಗಂಟೆಗೆ ಸುಮಾರು 32 ಸಾವಿರ ಕಿಲೋ ಮೀಟರ್ ವೇಗದಲ್ಲಿ ಚಲಿಸಲಿದೆ ಎಂದು ನಾಸಾ‌ ಲೆಕ್ಕಚಾರ ಮಾಡಿದೆ. ಕ್ಷುದ್ರ ಗ್ರಹ 2024 OY2 ಭೂಮಿಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ನಾಸಾ ಭರವಸೆ ನೀಡಿದೆ. ಆದರೂ ಈ ಬಗ್ಗೆ ವಿಜ್ಞಾನಿಗಳು ಪರಿಶೀಲಿಸುತ್ತಿದ್ದಾರೆ. ಇನ್ನು ಕ್ಷುದ್ರಗ್ರಹ 2024 OY2 ಹಾದಿಯಲ್ಲಿ ಸ್ವಲ್ಪ ವ್ಯತ್ಯಾಸ ಕಂಡರು ಭವಿಷ್ಯದಲ್ಲಿ ವಿಭಿನ್ನ ಫಲಿತಾಂಶ ನೀಡಬಹುದು. ಹೀಗಾಗಿ ನಾಸಾ ಕ್ಷುದ್ರಗ್ರಹದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment