Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಳೆಯಿಂದಾಗಿ ಇಂದು ಅಯ್ಯಪ್ಪನ ದರ್ಶನವಿಲ್ಲ..!

Facebook
Twitter
Telegram
WhatsApp

 

ಬೆಂಗಳೂರು : ಎಲ್ಲೆಡೆ ಮಳೆಯ ಅಬ್ಬರ ತಗ್ಗುತ್ತಿಲ್ಲ. ನಿರಂತರ ಮಳೆಯಿಂದಾಗಿ ಹಳ್ಳ ಕೊಳ್ಳಗಳೆಲ್ಲಾ ತುಂಬಿ ತುಳುಕುತ್ತಿವೆ. ನದಿಗಳು ಅಪಾಯಮಟ್ಟ ಮೀರಿವೆ. ಜನ ಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯ ಕಾರಣ ಅಯ್ಯಪ್ಪ ದೇವರ ದರ್ಶನಕ್ಕೆ ಇಂದು ಭಕ್ತರಿಗೆ ಅವಕಾಶವಿಲ್ಲದಂತಾಗಿದೆ.

ಕೇರಳ ರಾಜ್ಯದಲ್ಲಿ ಎಲ್ಲೆಡೆ ಮಳೆಯಾಗುತ್ತಿದೆ. ಹೀಗಾಗಿ ಯಾತ್ರಾತ್ರಿಗಳ ಸುರಕ್ಷತಾ ದೃಷ್ಟಿಯಿಂದ ಅಯ್ಯಪ್ಪನ ದರ್ಶನ ಕ್ಯಾನ್ಸಲ್ ಮಾಡಿದೆ. ಯಾಕಂದ್ರೆ ಪಂಪಾ ನದಿ ಹಾಗೂ ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ. ಕೆಲವು ಸೇತುವೆಗಳು ಕೂಡ ನೀರಿನಲ್ಲಿ ಮುಳುಗಡೆಯಾಗಿದೆ. ಈ ಹಿನ್ನೆಲೆ ಶಬರಿ ಮಲೆ ಅಯ್ಯಪ್ಪನ ದೇಗುಲದ ಆಡಳಿತ ಮಂಡಳಿ ಈ ನಿರ್ಧಾರ ತೆಗೆದುಕೊಂಡಿದೆ.

ಇಂದು ದೇವರ ದರ್ಶನಕ್ಕೆ ಭಕ್ತರಿಗೆ ಪ್ರವೇಶ ನಿಷೇಧಿಸಿದೆ ಅಂತ ಹೇಳಿ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಕಕ್ಕಿ-ಆನತೋಡ್ ಹಾಗೂ ಪಂಪಾ ಅಣೆಕಟ್ಟುಗಳಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ. ಈಗಾಗಲೇ ಬುಕ್ ಮಾಡಿರುವವರಿಗೆ ಪರಿಸ್ಥಿತಿ ತಿಳಿಗೊಂಡ ನಂತರ ಸ್ಲಾಟ್ ಬುಕ್ ಮಾಡಿಕೊಡಲಾಗುತ್ತೆ ಎಂದು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!