Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟು  ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

Facebook
Twitter
Telegram
WhatsApp

ಚಿತ್ರದುರ್ಗ. ಆಗಸ್ಟ್.16:  ಗುರುವಾರ ಸುರಿದ ಮಳೆ ವಿವರದನ್ವಯ ಹೊಸದುರ್ಗ ತಾಲ್ಲೂಕಿನಲ್ಲಿ 22.9 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯಲ್ಲಿ ಸುರಿದ ಅಧಿಕ ಮಳೆಯಾಗಿದೆ.

ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 18.8 ಮಿ.ಮೀ, ಹಿರಿಯೂರು ತಾಲ್ಲೂಕು 4.3 ಮಿ.ಮೀ, ಹೊಳಲ್ಕೆರೆ ತಾಲ್ಲೂಕು 6.5 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 10.30 ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 1.3 ಮಿ.ಮೀ ಮಳೆಯಾಗಿದೆ.

ಹೋಬಳಿವಾರು ಮಳೆ ವಿವರ: ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 17.9 ಮಿ.ಮೀ, ನಾಯಕನಹಟ್ಟಿ 18.2 ಮಿ.ಮೀ, ಪರಶುರಾಂಪುರ 22.5 ಮಿ.ಮೀ, ತಳಕು 16.7 ಮಿ.ಮೀ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗದಲ್ಲಿ 9.8 ಮಿ.ಮೀ, ಭರಮಸಾಗರ 7 ಮಿ.ಮೀ, ಹಿರೇಗುಂಟನೂರು 16.6 ಮಿ.ಮೀ, ತುರುವನೂರು 9.8 ಮಿ.ಮೀ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 3.8 ಮಿ.ಮೀ, ಐಮಂಗಲ 2.9 ಮಿ.ಮೀ, ಧರ್ಮಪುರ 8.6 ಮಿ.ಮೀ, ಜೆ.ಜೆ.ಹಳ್ಳಿ 2 ಮಿ.ಮೀ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 3.7 ಮಿ.ಮೀ, ಬಿ.ದುರ್ಗ 15.2 ಮಿ.ಮೀ, ರಾಮಗಿರಿ 1.3 ಮಿ.ಮೀ, ತಾಳ್ಯ 6.5 ಮಿ.ಮೀ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 4.4 ಮಿ.ಮೀ, ಮಾಡದಕೆರೆ 7 ಮಿ.ಮೀ, ಮತ್ತೋಡು 49.6 ಮಿ.ಮೀ, ಶ್ರೀರಾಂಪುರ 46.2 ಮಿ.ಮೀ ಮಳೆಯಾಗಿದೆ.

ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮುರುನಲ್ಲಿ 1 ಮಿ.ಮೀ ಹಾಗೂ ದೇಮಸಮುದ್ರದಲ್ಲಿ 1.6 ಮಿ.ಮೀ ಮಳೆಯಾಗಿದೆ.

21 ಮನೆಗಳು ಭಾಗಶಃ ಹಾನಿ: ಗುರುವಾರ ಸುರಿದ ಮಳೆಗೆ ಜಿಲ್ಲೆಯಾದ್ಯಂತ ಒಟ್ಟು 21 ಮನೆಗಳು ಭಾಗಶಃ ಹಾನಿಯಾಗಿವೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 15 ಮನೆಗಳು ಭಾಗಶಃ ಹಾನಿ ಹಾಗೂ 1 ಹಸು ಮೃತಪಟ್ಟಿದೆ. ಹೊಳಲ್ಕೆರೆಯಲ್ಲಿ 5 ಮನೆಗಳು ಭಾಗಶಃ ಹಾನಿಯಾಗಿವೆ ಹಾಗೂ ಮೊಳಕಾಲ್ಮುರ ತಾಲ್ಲೂಕಿನಲ್ಲಿ 1 ಮನೆ ಭಾಗಶಃ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!