Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ | ಬಿಸಿಯೂಟ ತಯಾರಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎ.ಐ.ಟಿ.ಯು.ಸಿ. ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 17 : ಬಿಸಿಯೂಟ ತಯಾರಕರಿಗೆ ಏಪ್ರಿಲ್ ಮತ್ತು ಮೇ ತಿಂಗಳ ವೇತನವನ್ನು ಕೂಡಲೆ ಬಿಡುಗಡೆಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿ ಕಚೇರಿ ಎದುರು ಎ.ಐ.ಟಿ.ಯು.ಸಿ. ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.

ದಾವಣಗೆರೆ ರಸ್ತೆಯಲ್ಲಿರುವ ಕಮ್ಯುನಿಸ್ಟ್ ಕಚೇರಿಯಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಬಿಸಿಯೂಟ ತಯಾರಕರಿಗೆ ಕನಿಷ್ಟ ವೇತನ ನೀಡದ ಸರ್ಕಾರದ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

ಮುಖ್ಯ ಅಡುಗೆಯವರಿಗೆ ತಿಂಗಳಿಗೆ 3700 ರೂ. ಹಾಗೂ ಸಹಾಯಕರಿಗೆ 3600 ರೂ.ಗಳನ್ನು ನೀಡುತ್ತಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜೀವನ ಮಾಡುವುದು ಕಷ್ಟವಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮೂರು ದಿನಗಳ ಕಾಲ ಧರಣಿ ನಡೆಸಿ ಸರ್ಕಾರವನ್ನು ಒತ್ತಾಯಿಸಿ ನಾಲ್ಕು ತಿಂಗಳುಗಳಾಗಿದ್ದರು ಕನಿಷ್ಟ ವೇತನ ಜಾರಿಯಾಗಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಮಕ್ಕಳ ಹಾಜರಾತಿ ಕಡಿಮೆಯಿದೆಯೆಂದು ಬಿಸಿಯೂಟ ತಯಾರಕರನ್ನು ಕೆಲಸದಿಂದ ತೆಗೆಯುವ ಬದಲು ಸಂಬಂಧಪಟ್ಟ ಅಧಿಕಾರಿಗಳ ಸಭೆ ನಡೆಸಿ ಸಮಸ್ಯೆಯನ್ನು ಪರಿಹರಿಸಬೇಕು. ಬಿಸಿಯೂಟ ತಯಾರಕರು ನಿವೃತ್ತಿಯಾದರೆ ಎರಡು ಲಕ್ಷ ರೂ. ಇಡಿಗಂಟು ನೀಡಬೇಕು. ಬಿಸಿಯೂಟ ತಯಾರಕರು ಕೆಲಸ ಮಾಡುವಾಗ ಸಾವಿಗೀಡಾದರೆ ಹತ್ತು ಲಕ್ಷ ರೂ.ಗಳ ಪರಿಹಾರ ಘೋಷಿಸಿ ಇ.ಎಸ್.ಐ. ಮತ್ತು ಪಿ.ಎಫ್. ಜಾರಿಗೊಳಿಸುವಂತೆ ಒತ್ತಾಯಿಸಿದರು.

ಎ.ಐ.ಟಿ.ಯು.ಸಿ. ರಾಜ್ಯ ಸಂಚಾಲಕ ಸಿ.ವೈ.ಶಿವರುದ್ರಪ್ಪ, ರಾಜ್ಯ ಮಂಡಳಿ ಸದಸ್ಯ ಕಾಂ.ಟಿ.ಆರ್.ಉಮಾಪತಿ, ಸಂಘಟನಾ ಕಾರ್ಯದರ್ಶಿ ಕಾಂ.ಕೆ.ಇ.ಸತ್ಯಕೀರ್ತಿ, ಕಾಂ.ಸುವರ್ಣಮ್ಮ, ಕಾಂ.ದೊಡ್ಡುಳ್ಳಾರ್ತಿ ಕರಿಯಣ್ಣ, ಕಾಂ.ಪರ್ವಿನ್‍ಭಾನು, ಕಾಂ.ಮಂಗಳಮ್ಮ, ಕಾಂ.ಶಾಂತಮ್ಮ, ಕಾಂ.ಗಿರಿಜಮ್ಮ, ಕಾಂ.ತಿಪ್ಪಮ್ಮ, ಕಾಂ.ಓಬಕ್ಕ ಸೇರಿದಂತೆ ನೂರಾರು ಬಿಸಿಯೂಟ ತಯಾರಕರು ಹಾಗೂ ಸಹಾಯಕಿಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...