ಸುದ್ದಿಒನ್, ಮೊಳಕಾಲ್ಮೂರು, ಆಗಸ್ಟ್. 18 : ಮುಂದೆ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲ್ಲೂಕಿನ
ನಾಗಸಮುದ್ರ ಗೇಟ್ ಬಳಿ ಇಂದು(ಭಾನುವಾರ) ಬೆಳಗಿನ ಜಾವ ಸುಮಾರು 3:30 ರ ವೇಳೆಯಲ್ಲಿ ನಡೆದಿದೆ.
ಬಳ್ಳಾರಿ – ಬೆಂಗಳೂರು ಹೆದ್ದಾರಿಯಲ್ಲಿ ರಾಯಚೂರಿನಿಂದ ಬೆಂಗಳೂರು ಕಡೆಗೆ ದ್ವಿಚಕ್ರ ವಾಹನದಲ್ಲಿ ಹೊರಟಿದ್ದ ಇಬ್ಬರು ವ್ಯಕ್ತಿಗಳು ನಾಗಸಮುದ್ರ ಗೇಟ್ ಸಮೀಪ ಮುಂದೆ ಹೋಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಚಾಲನೆ ಮಾಡುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೈಕ್ ನಲ್ಲಿದ್ದ ಮತ್ತೋರ್ವ ವ್ಯಕ್ತಿಗೆ ಗಂಭೀರವಾದ ಗಾಯಗಳಾಗಿದ್ದು ಸಮೀಪದ ರಾಂಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೂ ಮೃತ ಬೈಕ್ ಸವಾರನ ಗುರುತು ಪತ್ತೆ ಆಗಿಲ್ಲ. ಮತ್ತು ಲಾರಿಯೂ ಪತ್ತೆಯಾಗಿಲ್ಲ.

ಸ್ಥಳಕ್ಕೆ ರಾಂಪುರ PSI ಮಹೇಶ ಹೊಸಪೇಟ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








