Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಮಳೆಗೆ ಮನೆ ಕುಸಿತ

---Advertisement---

 

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 18 : ತಾಲ್ಲೂಕಿನ  ಬೊಮ್ಮೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ  ವಾಸದ ಮನೆಯೊಂದು ಶನಿವಾರ ರಾತ್ರಿ ಸುರಿದ ಮಳೆಗೆ ಕುಸಿದು ಬಿದ್ದಿದೆ.

ಬೊಮ್ಮೇನಹಳ್ಳಿ ನಿವಾಸಿ ಶ್ರೀಮತಿ ಕೊಲ್ಲಮ್ಮ ಚೌಡಪ್ಪ ಎಂಬುವರ ಮನೆ ಶನಿವಾರ ಸುರಿದ ಮಳೆಗೆ ಸಂಪೂರ್ಣವಾಗಿ ನೆಲೆಸಮವಾಗಿದೆ. ಇದರಿಂದಾಗಿ ಮನೆಯೊಡತಿ ಕಂಗಾಲಾಗಿದ್ದಾರೆ. ಇಷ್ಟೇ ಅಲ್ಲದೇ ಗ್ರಾಮದಲ್ಲಿ ಇನ್ನೂ ಐದು ಮನೆಗಳ ಗೋಡೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿರುವುದಿಲ್ಲ.

ವಿಷಯ ತಿಳಿದ ನಂತರ ಬೊಮ್ಮೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಸುಮಲತಾ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಮಾತನಾಡಿದ ಈ ದುರ್ಘಟನೆ ನಡೆಯಬಾರದಾಗಿತ್ತು ನಡೆದಿದೆ. ಶನಿವಾರ ರಾತ್ರಿ ವಿಪರೀತ ಮಳೆ ಬಂದು ಮನೆಗಳು ಬಿದ್ದಿವೆ. ಈ ವಿಷಯವನ್ನು ಶಾಸಕರಾದ ಕೆ.ಸಿ. ವೀರೇಂದ್ರ ಪಪ್ಪಿ ಅವರ ಗಮನಕ್ಕೂ ತರಲಾಗಿದೆ. ಗ್ರಾಮ ಪಂಚಾಯತಿ ವತಿಯಿಂದ ಸಿಗುವ ಎಲ್ಲಾ ಸೌಲಭ್ಯವನ್ನು ಒದಗಿಸುವಂತೆ ಸಂಬಂಧ ಪಟ್ಟ ಅಧಿಕಾರಿಗಳೆಗೆ ಸೂಚಿಸುತ್ತೇವೆ ಎಂದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಮಂಜುನಾಥ ಎನ್.,  ಗೋಪಿನಾಥ್, ವೆಂಕಟೇಶ್   ಶಿವಕುಮಾರ್ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...