Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಗಸ್ಟ್ 19 ರಂದು ನುಲಿಯ ಚಂದಯ್ಯ ಜಯಂತಿ | ನಮ್ಮ ಜನಾಂಗವನ್ನು ಕಡೆಗಣಿಸಲಾಗಿದೆ : ಹೆಚ್.ಎನ್.ರಾಮಚಂದ್ರಪ್ಪ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್ ,18 : ಬೆಂಗಳೂರಿನಲ್ಲಿ ಸೋಮವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಭಾಗಿತ್ವದೊಂದಿಗೆ ನಡೆಯಲಿರುವ ನುಲಿಯ ಚಂದಯ್ಯ ಜಯಂತಿ ಆಚರಣೆಯಲ್ಲಿ ನಮ್ಮ ಜನಾಂಗವನ್ನು ಕಡೆಗಣಿಸಲಾಗಿದೆ ಎಂದು ಅಖಿಲ ಕರ್ನಾಟಕ ಕೊರಚ ಮಹಾ ಸಂಘದ ರಾಜ್ಯಾಧ್ಯಕ್ಷ ಹೆಚ್.ಎನ್.ರಾಮಚಂದ್ರಪ್ಪ ಆಪಾದಿಸಿದರು.

ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕುಳುವ ಮಹಾಸಭಾ ಎಂದು ರಾಜ್ಯ ಮಟ್ಟದಲ್ಲಿ ನೊಂದಾಯಿಸಿಕೊಂಡಿರುವ ಕೆಲವರು ನಮ್ಮ ಜನಾಂಗವನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿರುವುದು ಅತೀವ ನೋವುಂಟಾಗಿದೆ. ಕೊರಚ, ಕೊರಮ, ಕೊರವಂಜಿ, ಕೊರವ, ಯರುಕುಲ ಎಂಬಿತ್ಯಾದಿ ಜಾತಿಗಳು ಒಳಗೊಂಡಂತೆ ರಾಜ್ಯದಲ್ಲಿ ಸುಮಾರು 2 ರಿಂದ 2.50 ಲಕ್ಷದಷ್ಟು ಜನಸಂಖ್ಯೆಯಿದೆ. ಕೊರಚ ಮತ್ತು ಕೊರಮ ಜನಾಂಗಕ್ಕೆ ಸಂಬಂಧಿಸಿದಂತೆ ಯಾವುದೇ ಗೆಜಟ್ ನೋಟಿಫಿಕೇಷನ್‍ನಲ್ಲಿ ಕುಳುವ ಎಂದು ನಮೂದಾಗಿಲ್ಲ. 2018 ನೇ ಸಾಲಿನಲ್ಲಿ ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ನೊಂದಣಿಯಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಿದರು.

ಗುರು ನುಲಿಯ ಜಯಂತಿ ಆಚರಣೆಗೆ ನಮ್ಮನ್ನು ಆಹ್ವಾನಿಸದೆ ಕಡೆಗಣಿಸಲಾಗಿದೆ. ಹಗ್ಗ ನೇಯುವುದು, ಬುಟ್ಟಿ ಎಣೆಯುವುದು, ಬಿದಿರು ತಯಾರಿಕೆ, ಕಣಿ ಹೇಳುವುದು ಕುಲ ಕಸುಬು. ಹಾಗಾಗಿ ಜಯಂತಿಯಲ್ಲಿ ನಮ್ಮ ಕುಲ ಕಸುಬುಗಳಿಗೆ ಸಂಬಂಧಪಟ್ಟಂತೆ ಸ್ಥಬ್ದ ಚಿತ್ರಗಳನ್ನು ಪ್ರದರ್ಶಿಸುವುದು ಪ್ರಮುಖ ವಿಚಾರ. ಕೆಲವೆ ಕೆಲವು ವ್ಯಕ್ತಿಗಳು ನಮ್ಮ ಸಮಾಜವನ್ನು ದಿಕ್ಕುತಪ್ಪಿಸುವ ಕುತಂತ್ರ ಮಾಡುತ್ತಿರುವುದು ಸರಿಯಲ್ಲ. ಮುಂದಿನ ವರ್ಷ ಪ್ರತ್ಯೇಕವಾಗಿ ಗುರು ನುಲಿಯ ಚಂದಯ್ಯ ಜಯಂತಿಯನ್ನು ಆಚರಿಸಲು ಕನ್ನಡ ಮತ್ತು ಸಂಸ್ಕøತಿ ಇಲಾಖೆಗೆ ನಿರ್ದೇಶನ ನೀಡುವಂತೆ ಸರ್ಕಾರದ ಕಾರ್ಯದರ್ಶಿಯವರಲ್ಲಿ ಹೆಚ್.ಎನ್.ರಾಮಚಂದ್ರಪ್ಪ ಮನವಿ ಮಾಡಿದರು.

ಅಖಿಲ ಕರ್ನಾಟಕ ಕೊರಚ ಮಹಾಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ವೈ.ಕುಮಾರ್, ಜಿಲ್ಲಾಧ್ಯಕ್ಷ ತಿಮ್ಮಣ್ಣ, ಮಂಜಪ್ಪ, ಶಿವಾನಂದಪ್ಪ, ಗಾಳೆಪ್ಪ ಇವರುಗಳು ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment