Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೂಡಾ ಹಗರಣ: ಸಿದ್ದರಾಮಯ್ಯ ಬೆನ್ನಿಗೆ ನಿಂತ ಸುಪ್ರೀಂ ಕೋರ್ಟ್ ವಕೀಲರು ಯಾರು ? ಅವರ‌ ಹಿನ್ನೆಲೆ ಏನು..?

---Advertisement---

 

ಬೆಂಗಳೂರು: ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಹೈವೋಲ್ಟೇಜ್ ಬೆಳವಣಿಗೆ ನಡೆಯುತ್ತಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡುತ್ತಿದ್ದಂತೆ ಸಿದ್ದರಾಮಯ್ಯ ಅವರು ಕಾನೂನು ಹೋರಾಟಕ್ಕೆ ಸಜ್ಜಾಗಿದ್ದಾರೆ. ಪ್ರಾಸಿಕ್ಯೂಷನ್ ಗೆ ನೀಡಿರುವ ಆದೇಶ ರದ್ದುಗೊಳಿಸಲು ಹೈಕೋರ್ಟ್ ಮೊರೆ ಹೋಗಿದ್ದಾರೆ. ಇನ್ನು ಈ ಕಾನೂನು ಹೋರಾಟದಲ್ಲಿ ಸಿಎಂ ಸಿದ್ದರಾಮಯ್ಯ ಪರವಾಗಿ‌ ಸುಪ್ರೀಂ ಕೋರ್ಟ್ ವಕೀಲರು ಬೆಂಬಲವಾಗಿ ನಿಂತಿದ್ದಾರೆ. ಸುಪ್ರೀಂಕೋರ್ಟ್ ನ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಹಾಗೂ ಕಪಿಲ್ ಸಿಬಲ್ ಅವರು ಸಿದ್ದರಾಮಯ್ಯ ಅವರ ಪರ ನಿಂತಿದ್ದು, ರಾಜ್ಯಪಾಲರ ಆದೇಶ ಪ್ರಶ್ನಿಸಿ, ಕೋರ್ಟ್ ನಲ್ಲಿ ವಾದ ಮಂಡಿಸಲಿದ್ದಾರೆ.

ಅಭಿಷೇಕ್ ಮನು ಸಿಂಘ್ವಿ ಅವರು ಭಾರತೀಯ ಹಿರಿಯ ವಕೀಲರು ಹಾಗೂ ರಾಜಕಾರಣಿಯೂ ಆಗಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯ ಕೂಡ.. ಇನ್ನು ಕಪಿಲ್ ಸಿಬಲ್ ಅವರು ಕೂಡ ಭಾರತೀಯ ವಕೀಲ ಹಾಗೂ ರಾಜಕಾರಣಿ. ಪ್ರಸ್ತುತ ಸುಪ್ರೀಂ ಕೋರ್ಟ್ ನ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನೇತೃತ್ವದಲ್ಲಿ ಸಚಿವರಾಗಿ ಹಲವಾರು ವರ್ಗಳಿಂದ ವಿವಿಧ ಖಾತೆಗಳನ್ನು ನಿರ್ವಹಿಸಿದ್ದಾರೆ. ಇನ್ನು ಭಾರತದ ಖ್ಯಾತ ವಕೀಲರಲ್ಲಿ ಇವರು ಒಬ್ಬರು.

ಇನ್ನು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ದೊಡ್ಡ ಹೋರಾಟವೇ ನಡೆಯುತ್ತದೆ. ಬೃಹತ್ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. ಸಿದ್ದರಾಮಯ್ಯ ಅವರು ಕಾನೂನು ಮೂಲಕ ಹೋರಾಟ ನಡೆಸಲು ಸಜ್ಜಾಗಿದ್ದು, ಕ್ಲೀನ್ ಚಿಟ್ ಸಿಕ್ಕರೆ ಈ 40 ವರ್ಷದ ರಾಜಕೀಯ ಜೀವನದಲ್ಲಿ ಕಪ್ಪು ಚುಕ್ಕೆಯ ಮಾರ್ಕ್ ಇರುವುದಿಲ್ಲ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...