Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್….!

---Advertisement---

ಬೆಂಗಳೂರು: ಕಳೆದ ಮೂರ್ನಾಲ್ಕು ದಿನದಿಂದ ಬೆಳಗ್ಗೆಯೆಲ್ಲಾ ಬಿಸಿಲು ಇದ್ದು ರಾತ್ರಿ ವೇಳೆಗೆ ಜೋರು ಮಳೆ ಶುರುವಾಗುತ್ತಿದೆ. ಆಗಸ್ಟ್ 20 ಅಂದ್ರೆ ನಾಳೆವರೆಗೂ ಭರ್ಜರಿ ಮಳೆಯಾಗುವ ಸೂಚನೆ ನೀಡಿದೆ ಹವಮಾನ ಇಲಾಖೆ. ಅದರಲ್ಲೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

 

ಕರ್ನಾಟಕದಲ್ಲಿ ಆಗಸ್ಟ್ 20ರವರೆಗೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಇನ್ನು ವಿಜಯನಗರ, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ ಭಾಗದಲ್ಲೂ ಉತ್ತಮ ಮಳೆಯಾಗಲಿದೆ.

ಇನ್ನು ಮಲೆನಾಡು ಭಾಗ ಹಾಗೂ ಕರಾವಳಿ ಭಾಗದಲ್ಲಿ ನಾಳೆಯಿಂದ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಹಾಗೂ ಕರಾವಳಿ ಜಿಲ್ಲೆಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲು ಗುಡುಗು ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಆಗಸ್ಟ್ 21ರವರೆಗೂ ಭಾರೀ ಮಳೆಯಾಗಲಿದೆ. ಹಾಗೂ ಮಳೆಯ ತೀವ್ರತೆ ಕಡಿಮೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಇಂದು ಗುಡುಗು ಮಿಂಚು ಸಹಿತ ವ್ಯಾಪಾಕವಾದ ಮಳೆಯಾಗಲಿದೆ.

ಮಳೆ ಜೋರಾಗುವ ಕಾರಣ ಹೊರಗೆ ಬರುವ ಜನ ಎಚ್ಚರದಿಂದ ಇರಬೇಕಾಗುತ್ತದೆ. ಅದರಲ್ಲೂ ರಾತ್ರಿ ಸಮಯದಲ್ಲಿಯೇ ಹೆಚ್ಚಿನ ಮಳೆಯಾಗುತ್ತಿದೆ. ಹೀಗಾಗಿ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಂಡು ಹೊರಗೆ ಬರಬೇಕಾಗುತ್ತದೆ. ವಾಹನಗಳಲ್ಲಿ ಸಂಚಾರ ಮಾಡುವವರು ಹೆಲ್ಮೆಟೆ, ರೈನ್ ಜಾಕೆಟ್ ಗಳನ್ನು ಕ್ಯಾರಿ ಮಾಡಿದರೆ ಉತ್ತಮ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...