Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡ್ರಗ್ಸ್ ವಿರುದ್ಧ ಸಮರ ಸಾರಿದ ದುನಿಯಾ ವಿಜಯ್ : ಎಚ್ಚೆತ್ತ ಅಧಿಕಾರಿಗಳಿಂದ ಮೆಡಿಕಲ್ ಸ್ಟೋರ್ ಗಳ ಮೇಲೆ ದಾಳಿ..!

Facebook
Twitter
Telegram
WhatsApp

ತುಮಕೂರು: ದುನಿಯಾ ವಿಜಯ್ ಅಭಿನಯದ ಭೀಮಾ‌ ಸಿನಿಮಾ ತೆರೆಗೆ ಬಂದಿದೆ. ರಾಜ್ಯದಲ್ಲೂ ಡ್ರಗ್ಸ್ ಜಾಲ ಎಷ್ಟರಮಟ್ಟಿಗೆ ಇದೆ ಎಂಬುದನ್ನು ಸಿನಿಮಾದಲ್ಲಿ ಮನಮುಟ್ಟುವಂತೆ ಹೇಳಿರುವುದಲ್ಲದೆ ರಿಯಲ್ ಆಗಿಯೂ ಆಖಾಡಕ್ಕೆ ಇಳಿದಿದ್ದಾರೆ. ಸ್ಟಿಂಗ್ ಆಪರೇಷನ್ ಮಾಡುವ ಮೂಲಕ ಮಾದಕ ದ್ರವ್ಯದ ಜಾಲವನ್ನು ಎಳೆ ಎಳೆಯಾಗಿ ದುನಿಯಾ ಬಿಚ್ಚಿಡುತ್ತಿದ್ದಾರೆ.

ದುನಿಯಾ ವಿಜಯ್ ಅವರ ಈ ಕಾರ್ಯಕ್ಕೆ ಒಂದು ಕಡೆ ಮೆಚ್ಚುಗೆ ವ್ಯಕ್ತವಾಗಿದ್ದರೆ, ಮತ್ತೊಂದು ಕಡೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಮೆಡಿಕಲ್ ಸ್ಟೋರ್ ಗಳ ಮೇಲೆ ದಾಳಿ ನಡೆಸಿದ್ದು, ಅಧಿಕಾರಿಗಳೇ ಶಾಕ್ ಆಗಿದ್ದಾರೆ. ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದಲ್ಲಿರುವ ಮೆಡಿಕಲ್ ಸ್ಟೋರ್ ಗಳ ಮೇಲೆ ಡ್ರಗ್ಸ್ ಕಂಟ್ರೋಲ್ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಈ ವೇಳೆ ಡ್ರಗ್ಸ್ ಗೆ ಸಂಬಂಧಿಸಿದಂತ ಮಾತ್ರೆಗಳು ಪತ್ತೆಯಾಗಿರುವುದು ಕಂಡು ಬಂದಿದೆ.

ಮೆಡಿಕಲ್ ಗಳಲ್ಲಿ ಯಾವಾಗ ಡ್ರಗ್ಸ್ ಗಳು ಪತ್ತೆಯಾದವೋ ಪೊಲೀಸರು ತೀವ್ರ ತನಿಖೆಯನ್ನು ಶುರು ಮಾಡಿದ್ದಾರೆ. ವೈದ್ಯರ ಚೀಟಿಯಿಲ್ಲದೆ, ಮತ್ತು ಬರಿಸುವ ಮಾತ್ರೆಗಳ ಮಾರಾಟದ ಬಗ್ಗೆ ಅಧಿಕಾರಿಗಳು ಎಚ್ಚೆತ್ತು, ತನಿಖೆ ಶುರು ಮಾಡಿದ್ದಾರೆ. ಕುಣಿಗಲ್ ಪಟ್ಟಣದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಬಳಿ ಇರುವ ಲಕ್ಷ್ಮೀ ವೆಂಕಟೇಶ್ವರ ಮೆಡಿಕಲ್ ಸ್ಟೋರ್ ಹಾಗೂ ಸಂತೆ ಮಾವತ್ತೂರಿನ ತಿರುಮಲ ಮೆಡಿಕಲ್ ಸ್ಟೋರ್‌ ಮೇಲೆ ದಾಳಿ ನಡೆಸಲಾಗಿದೆ. ಈ ದಾಳಿ ವೇಳೆ ಮೆಡಿಕಲ್ ಸ್ಟೋರ್ ಗಳಲ್ಲಿ ಡ್ರಗ್ಸ್ ಮಾತ್ರೆಗಳು ಪತ್ತೆಯಾಗಿದ್ದು, ಡ್ರಗ್ಸ್ ಕಂಟ್ರೋಲ್ ಅಧಿಕಾರಿಗಳು ಹಾಗೂ ಕುಣಿಗಲ್ ತಾಲೂಕು ವೈದ್ಯಾಧಿಕಾರಿ ಡಾ.ಮರಿಯಪ್ಪ ನೇತೃತ್ವದಲ್ಲಿ ದಾಳಿ ನಡೆದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!