Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶ್ರಾವಣಮಾಸದ ಮಂಗಳವಾರ : ಕಣಿವೆಮಾರಮ್ಮ ಮತ್ತು ಉಚ್ಚಂಗಿ ಯಲ್ಲಮ್ಮ ದೇವಿಗೆ ವಿಶೇಷ ಪೂಜೆ

---Advertisement---

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 20 : ಶ್ರಾವಣ ಮಾಸದ ಮಂಗಳವಾರದಂದು ನಗರ ಪೊಲೀಸ್ ಠಾಣೆ ಆವರಣದಲ್ಲಿರುವ ಕಣಿವೆಮಾರಮ್ಮನಿಗೆ ವಿಶೇಷವಾಗಿ ಅಲಂಕರಿಸಲಾಗಿತ್ತು.

ವೀಳೆದೆಲೆ, ಗುಲಾಬಿ, ಸೇವಂತಿಗೆ, ಮಲ್ಲಿಗೆ, ಕನಕಾಂಬರ ಹೂವುಗಳಿಂದ ಸಿಂಗರಿಸಲಾಗಿತ್ತು.
ಶ್ರಾವಣ ಮಾಸವಾಗಿರುವುದರಿಂದ ನೂರಾರು ಸಂಖ್ಯೆಯಲ್ಲಿ ಭಕ್ತರು ಧಾವಿಸಿ ಕಣಿವೆಮಾರಮ್ಮನ ದರ್ಶನ ಪಡೆದು ಶ್ರದ್ದಾಭಕ್ತಿಯನ್ನು ಸಮರ್ಪಿಸಿದರು.

ಕೋಟೆ ರಸ್ತೆಯಲ್ಲಿರುವ ಉಚ್ಚಂಗಿಯಲ್ಲಮ್ಮನಿಗೆ ಶ್ರಾವಣ ಮಾಸದ ಮಂಗಳವಾರದಂದು ನಾನಾ ಬಗೆಯ ತರಕಾರಿಗಳಿಂದ ಅಲಂಕರಿಸಿ ಪೂಜಿಸಲಾಯಿತು.
ಕ್ಯಾರೆಟ್, ಬೆಂಡೆಕಾಯಿ, ಹಿರೇಕಾಯಿ, ಎಲೆಕೋಸು, ಹೂಕೋಸು, ಮೂಲಂಗಿ, ಈರುಳ್ಳಿ, ಸೌತೆಕಾಯಿ, ಸೀಮೆ ಬದನೆಕಾಯಿ, ದುಂಡು ಮೆಣಸಿನಕಾಯಿ, ಬೀನ್ಸ್, ಆಲುಗೆಡ್ಡೆ ಬೀಟ್‍ರೂಟ್ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಬಗೆಯ ತರಕಾರಿಗಳಿಂದ ಸಿಂಗರಿಸಲಾಗಿತ್ತು.
ಬೆಳಗಿನಿಂದ ಸಂಜೆಯತನಕ ಅಪಾರ ಭಕ್ತರು ಧಾವಿಸಿ ಉಚ್ಚಂಗಿಯಲ್ಲಮ್ಮನನ್ನು ಕಣ್ತುಂಬಿಕೊಂಡರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment