Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಆಗಸ್ಟ್ 24 ರಂದು ನಾಟ್ಯ ನೈದಿಲೆ ನೃತ್ಯೋತ್ಸವ-2024

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ,ಆಗಸ್ಟ್.20  : ಅಂಜನಾ ನೃತ್ಯ ಕಲಾ ಕೇಂದ್ರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ವತಿಯಿಂದ ನಾಟ್ಯ ನೈದಿಲೆ ನೃತ್ಯೋತ್ಸವ-2024 ಆ.24 ರಂದು ಸಂಜೆ ಐದು ಗಂಟಗೆ ತ.ರಾ.ಸು.ರಂಗಮಂದಿರದಲ್ಲಿ ನಡೆಯಲಿದೆ.

ನೃತ್ಯ ಕಲಾವಿದರು ಹಾಗೂ ಶಿಕ್ಷಕರಾದ ಬೆಂಗಳೂರಿನ ವಿದ್ವಾನ್ ಅನಿಲ್‍ಕುಮಾರ್, ನಾಟ್ಯ ಭಾರತಿ ಟ್ರಸ್ಟ್ ಬೆಂಗಳೂರಿನ ವಿದುಷಿ ಡಾ. ಶ್ರೀರಂಜಿತಾ ನಾಗೇಶ್, ವಿದ್ವಾನ್ ಜಿ.ಎಸ್.ನಾಗೇಶ್ ಇವರುಗಳು ನಟರಾಜ ದೀಪ ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಡಾ. ಹೇಮಂತರಾಜು ಎಸ್.ಎನ್. ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು.

25 ರಂದು ಸಂಜೆ ಐದಕ್ಕೆ ನಟರಾಜ ಪೂಜೆ ನೃತ್ಯ ಮಾಲಿಕಾ ಕು.ಶಿವಾನಿ ಕೆ.ಆರ್. ಮತ್ತು ಸಂಗಡಿಗರು ಹಾಗೂ ಕಲಾಕೇಂದ್ರದ ವಿದ್ಯಾರ್ಥಿಗಳಿಂದ.
ಸಂಜೆ ಆರಕ್ಕೆ ನಡೆಯುವ ಸಭಾ ಕಲಾಪದ ಸಾನಿಧ್ಯವನ್ನು ಕಬೀರಾನಂದಾಶ್ರಮದ ಶಿವಲಿಂಗಾನಂದಸ್ವಾಮಿ ವಹಿಸಲಿದ್ದಾರೆ.

ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಎನ್.ಚಲವಾದಿ, ನಿರ್ದೇಶಕ ರವಿಚಂದ್ರ, ಸಂಗೀತ ಮತ್ತು ನೃತ್ಯ ಅಕಾಡೆಮಿ ಅಧ್ಯಕ್ಷರಾದ ವಿದುಶಿ ಶುಭಾ ಧನಂಜಯ್, ಬ್ರಾಹ್ಮಣ ಸಂಘದ ಅಧ್ಯಕ್ಷ ಪಿ.ಎಸ್.ಮಂಜುನಾಥ್ ಇವರುಗಳು ಪಾಲ್ಗೊಳ್ಳಲಿದ್ದಾರೆ.
ಖ್ಯಾತ ಹಿನ್ನೆಲೆ ಗಾಯಕಿ ಶ್ರೀಮತಿ ಜ್ಯೋತಿ ರವಿಪ್ರಕಾಶ್ ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರುವರು.
ಅಂಜನಾ ನೃತ್ಯ ಕಲಾ ಕೇಂದ್ರದ ಹಿರಿಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗು ಪ್ರಮಾಣ ಪತ್ರ ವಿತರಣೆ.

ಅಂಜನಾ ಕಲಾನಿಧಿ ಪ್ರಶಸ್ತಿ ಪ್ರದಾನ. ಶ್ರೀಮತಿ ಜ್ಯೋತಿ ರವಿಪ್ರಕಾಶ್‍ರವರಿಂದ ಗೀತ ಕುಸುಮ.
ಚಿತ್ರದುರ್ಗದ ಗತ ಇತಿಹಾಸ ಸಾರುವ ಅಕ್ಕ-ತಂಗಿ ಬರಗೇರಮ್ಮ, ತಿಪ್ಪನಘಟ್ಟಮ್ಮನವರ ಭೇಟಿ ಉತ್ಸವ ಪ್ರದರ್ಶಿಸಲಾಗುವುದು ಎಂದು ಅಂಜನಾ ನೃತ್ಯ ಕಲಾ ಕೇಂದ್ರದ ಪ್ರಾಚಾರ್ಯರಾದ ವಿದ್ವಾನ್ ಸಿ.ಆರ್.ಶಿವಪ್ರಕಾಶ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!