Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಧಾರಾಕಾರ ಮಳೆ | ನಾಯಕನಹಟ್ಟಿ ಪೊಲೀಸ್ ಠಾಣೆ ಆವರಣ ಜಲಾವೃತ

---Advertisement---

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 21 : ಕಳೆದ ಕೆಲವು ದಿನಗಳಿಂದ ರಾಜ್ಯದೆಲ್ಲೆಡೆ ಜೋರು ಮಳೆಯಾಗುತ್ತಿದೆ. ಕೆಲ ಜಿಲ್ಲೆಗಳಲ್ಲಿ ಈಗಾಗಲೆ ಕೆರೆ ಕಟ್ಟೆಗಳು ಕೋಡಿ ಬಿದ್ದಿವೆ.‌ ಮಳೆಯಿಂದಾಗಿ ನಾನಾ ಅನಾಹುತಗಳು ಸೃಷ್ಟಿಯಾಗಿವೆ. ಇನ್ನು ಚಿತ್ರದುರ್ಗ ಜಿಲ್ಲೆಯಲ್ಲೂ ಮಳೆ ನಿಲ್ಲುತ್ತಿಲ್ಲ. ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದೆ. ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.

ಜೋರು ಮಳೆಯ ಹಿನ್ನೆಲೆಯಲ್ಲಿ ನಾಯಕನಹಟ್ಟಿ ಪಟ್ಟಣದ ಪೊಲೀಸ್ ಠಾಣೆಗೂ ನೀರು ನುಗ್ಗಿದೆ. ಇದರಿಂದ ಪೊಲೀಸ್ ಠಾಣೆ ಸಂಪೂರ್ಣ ಜಲವೃತವಾಗಿದೆ. ಓಡಾಡುವುದಕ್ಕೂ ಪೊಲೀಸರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಸದ್ಯ ನೀರು ಹೊರ ಹಾಕುವ ಕಾರ್ಯ ನಡೆಸುತ್ತಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯ ಪೊಲೀಸ್ ಠಾಣೆ ಆವರಣದಲ್ಲಿ ಈ ಘಟನೆ ನಡೆದಿದೆ. ಆವರಣದಲ್ಲೆಲ್ಲಾ ನೀರು ನಿಂತಿದ್ದು, ನೀರನ್ನು ಹೊರ ಹಾಕಲು
ನಾಯಕನಹಟ್ಟಿ ಪಟ್ಟಣ ಪಂಚಾಯತಿಯ ಸಿಬ್ಬಂದಿಯನ್ನು ಕರೆಸಿದ್ದಾರೆ. ಜೋರು ಮಳೆಯ ಪರಿಣಾಮ ನಿಂತಿರುವ ನೀರನ್ನು ಹೊರ ಹಾಕಲು ಸಿಬ್ಬಂದಿ ಶ್ರಮಿಸುತ್ತಿದ್ದಾರೆ. ಇದಕ್ಕೆಲ್ಲಾ ಕಾರಣ ಚರಂಡಿಯ ದುರಸ್ಥಿ ಆಗದೆ ಇರುವುದು. ಮಂಗಳವಾರ ತಡರಾತ್ರಿ ಸುರಿದ ಧಾರಾಕಾರ ಮಳೆಗೆ ನೀರು ಹರಿಯುವುದಕ್ಕೆ ಚರಂಡಿಯೇ ಸರಿಯಾಗಿಲ್ಲ. ಚರಂಡಿ ಮುಚ್ಚಿ ಹೋಗಿದ್ದು, ನೀರು ಪೊಲೀಸ್ ಠಾಣೆಯ ಆವರಣಕ್ಕೆ ಹರಿದು ಬಂದಿದೆ. ಆದಷ್ಟು ಬೇಗ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಪರಿಹಾರ ಕಾರ್ಯ ನಡೆಸಬೇಕೆಂದು ಸಾರ್ವಜನಿಕರೂ ಮನವಿ ಮಾಡಿದ್ದಾರೆ. ಮಳೆಗಾಲದ ಸಮಯದಲ್ಲಿ ಸ್ಥಳೀಯವಾಗಿ ಏನೆಲ್ಲಾ ಸಮಸ್ಯೆ ಆಗಬಹುದು ಎಂಬುದನ್ನು ಸಂಬಂಧಪಟ್ಟವರು ಅರಿತುಕೊಂಡಿದ್ದರೆ, ಪೊಲೀಸ್ ಠಾಣೆ ಆವರಣಕ್ಕೆ ಈ ರೀತಿಯ ದುಸ್ಥಿತಿ ಬರುತ್ತಿರಲಿಲ್ಲವೇನೋ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment