Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನೀರು ಕಾಯಿಸಲು ಹೀಟರ್ ಹಾಕುವಾಗ ಎಚ್ಚರ: ಹೊಳಲ್ಕೆರೆಯಲ್ಲಿ ಕರೆಂಟ್ ಹೊಡೆದು ಯುವತಿ ಸಾವು..!

---Advertisement---

 

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 21 : ಕರೆಂಟಿನ ವಿಚಾರದಲ್ಲಿ ಎಚ್ಚರವಾಗಿರಿ ಎಂದು ಹಲವರು ಹೇಳುತ್ತಾರೆ. ಕೊಂಚ ಯಾಮಾರಿದರು ವಿದ್ಯುತ್ ನಮ್ಮ ಪ್ರಾಣವನ್ನೆ ತೆಗೆಯುವಷ್ಟು ಬಲಶಾಲಿಯಾಗಿದೆ. ಅದರಲ್ಲೂ ಬಿಸಿ ನೀರಿಗಾಗಿ ಹೀಟರ್ ಹಾಕುವಾಗ ಹೆಚ್ಚಿನ ಎಚ್ಚರ ಒಳ್ಳೆಯದು. ಎಷ್ಟೋ ಸಲ ಯಾಮಾರಿ ನೀರು ಕಾದಿದೆಯಾ ಎಂದು ಬಕೆಟ್ ಒಳಗೆ ಕೈ ಹಾಕಲು ಹೋದವರು ಇದ್ದಾರೆ. ಇವತ್ತು ನೀರಿಗೆ ಹೀಟರ್ ಹಾಕಲು ಹೋದ ಯುವತಿಯೊಬ್ಬರು ಸಾವನ್ನಪ್ಪಿರುವ ಘಟನೆ ಘಟ್ಟಿ ಹೊಸಹಳ್ಳಿಯಲ್ಲಿ ನಡೆದಿದೆ.

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಘಟ್ಟಿ ಹೊಸಹಳ್ಳಿ ಗ್ರಾಮದ ಆರ್ ಪೂಜಾ ಎಂಬ ಯುವತಿ ಸಾವನ್ನಪ್ಪಿದ್ದಾರೆ. ಮೃತ ಪೂಜಾಗೆ ಕೇವಲ 18 ವರ್ಷ. ಬಾಳಿ ಬದುಕಬೇಕಿದ್ದ ಹೆಣ್ಣು ಮಗಳು, ವಿದ್ಯುತ್ ಶಾಕ್ ಗೆ ಬಲಿಯಾಗಿದ್ದಾರೆ. ಸ್ನಾನಕ್ಕಾಗಿ ನೀರು ಕಾಯಿಸಲು ಹಿಟರ್ ಹಾಕಿದ್ದರು. ಆದರೆ ಈ ವೇಳೆ ವಿದ್ಯುತ್ ಸ್ಪರ್ಶಿಸಿ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಚಿತ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಕರೆಂಟ್ ಶಾಕ್ ನಿಂದಾಗಿ ಮಗಳನ್ನು ಕಳೆದುಕೊಂಡ ಪೋಷಕರು ದುಃಖದಲ್ಲಿದ್ದಾರೆ. ಇಷ್ಟು ಚಿಕ್ಕ ವಯಸ್ಸಿಗೆ ವಿಧಿ ಆ ಯುವತಿಗೆ ಕರೆಂಟ್ ಶಾಕ್ ಮೂಲಕ ಬಲಿ ಪಡೆದಿದೆ. ಬಾಳಿ ಬದುಕಬೇಕಿದ್ದ ಹೆಣ್ಣು‌ ಮಗು, ಸ್ಮಶಾನದಲ್ಲಿ ಮಲಗಿದೆ. ಮಳೆಗಾಲ ಬೇರೆ. ಬಿಸಿನೀರಿಗೆ ಸೌದೆ ಇಲ್ಲ, ಸೋಲಾರ್ ನಲ್ಲಿ ಬಿಸಿ ನೀರು ಬರ್ತಿಲ್ಲ ಅಂತ ಹೀಟರ್ ಬಳಸುವವರೇ ಹೆಚ್ಚು. ಹೀಗೆ ಹೀಟರ್ ಹಾಕುವ ಮುನ್ನ ಆ ಹೀಟರ್ ಚೆನ್ನಾಗಿದೆಯಾ ಎಂಬುದನ್ನು ಪರೀಕ್ಷಿಸಿ. ಹೀಟರ್ ಹಾಕಿದ ಮೇಲೂ ಅದರಿಂದ ಸ್ವಲ್ಪ ದೂರವೇ ಇರಿ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment