ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್,ಚಿತ್ರದುರ್ಗ, ಆಗಸ್ಟ್.21 : ಮಾನಸಿಕ ಅಸ್ಪಸ್ಥರನ್ನು ಹುಡುಕಿ ಜಿಲ್ಲಾಸ್ಪತ್ರೆಗೆ ಸೇರಿಸಿ ಗುಣಪಡಿಸುವ ಕೆಲಸ ಮಾಡಬೇಕೆಂದು ಮನೋ ವೈದ್ಯರಾದ ಡಾ.ಮಂಜುನಾಥ್ ತಾಲ್ಲೂಕಿನ ಶುಶ್ರೂಷಣಾಧಿಕಾರಿಗಳಿಗೆ ತಿಳಿಸಿದರು.
ಬುದ್ದ ನಗರದ ಆರೋಗ್ಯ ಕೇಂದ್ರದಲ್ಲಿ ತಾಲ್ಲೂಕಿನ ಶುಶ್ರೂಷಣಾಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ಒಂದು ದಿನದ ಮಾನಸಿಕ ಆರೋಗ್ಯ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಮನೋರೋಗದ ಕಾಯಿಲೆಯವರನ್ನು ಹುಡುಕಬೇಕಾಗಿಲ್ಲ. ಬೀಡಿ ಸಿಗರೇಟು ಮದ್ಯ ಸೇವನೆ ಅತಿಯಾದ ಮೊಬೈಲ್ ಚಟಗಳಿಗೆ ಬಲಿಯಾಗಿರುವವರು ಮನೋರೋಗಿಗಳೆ ಆಗಿರುತ್ತಾರೆ. ಅಂತಹವರನ್ನು ಪತ್ತೆ ಹಚ್ಚಿ ಆಸ್ಪತ್ರೆಗೆ ಕರೆ ತಂದರೆ ಆಪ್ತ ಸಮಾಲೋಚನೆ ನಡೆಸಿ ಗುಣಪಡಿಸಬಹುದಾಗಿದೆ. ಕಲ್ಪನಾ ಲೋಕದಲ್ಲಿ ಮಾತನಾಡುವವರು ಕೂಡ ಮನೋ ರೋಗಿಗಳಾಗಿರುತ್ತಾರೆ. ಆರೋಗ್ಯ ಸೇವೆಯಲ್ಲಿರುವ ನೀವುಗಳು ಪ್ರಾಮಾಣಿಕವಾಗಿ ಕೆಲಸ ಮಾಡಿ ಮನೋರೋಗಿಗಳನ್ನು ಪತ್ತೆ ಹಚ್ಚಬೇಕಾಗಿದೆ ಎಂದರು.
ಆರೋಗ್ಯ ಮೇಲ್ವಿಚಾರಣಾಧಿಕಾರಿ ಸುರೇಶ್ ಮಾತನಾಡಿ ಸೊಳ್ಳೆಗಳಿಂದ ಹರಡುವ ರೋಗಗಳನ್ನು ನಿಯಂತ್ರಿಸುವ ಕುರಿತು ವಿಶ್ವ ಸೊಳ್ಳೆ ದಿನವಾದ ಇಂದು ಪ್ರತಿಜ್ಞೆ ಮಾಡಬೇಕಾಗಿದೆ. ಟೈರು, ಎಳನೀರು ಚಿಪ್ಪು, ಡ್ರಮ್ ಇನ್ನು ಮುಂತಾದ ಸ್ಥಳಗಳಲ್ಲಿ ಸೊಳ್ಳೆಗಳ ತಾಣವಾಗದಂತೆ ಕಟ್ಟೆಚ್ಚರ ವಹಿಸುವ ಕುರಿತು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವುದು ನಿಮ್ಮ ಜವಾಬ್ದಾರಿ ಎಂದರು.
ಆರೋಗ್ಯ ನಿರೀಕ್ಷಣಾಧಿಕಾರಿ ಮಲ್ಲಿಕಾರ್ಜುನ್ ಮಾತನಾಡುತ್ತ ಡೆಂಗ್ಯೂ ಜ್ವರ ಎಲ್ಲೆಡೆ ಹರಡುತ್ತಿದೆ. ಸೊಳ್ಳೆಗಳಿಂದ ಕಚ್ಚಿಸಿಕೊಳ್ಳದೆ ಶುದ್ದವಾದ ನೀರು ಕುಡಿಯುವುದು ಮುಖ್ಯ. ಇದಕ್ಕೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಎಂದು ಹೇಳಿದರು.
ಡಾ.ನಾಗರಾಜ್, ಬುದ್ದನಗರ ವೈದ್ಯಾಧಿಕಾರಿ ಸುರೇಂದ್ರಕುಮಾರ್, ಆರೋಗ್ಯ ಮೇಲ್ವಿಚಾರಕ ಸುರೇಶ್, ಮಲ್ಲಿಕಾರ್ಜುನ್, ಶ್ರೀನಿವಾಸಮೂರ್ತಿ, ಗುರುಮೂರ್ತಿ, ವೈ.ತಿಪ್ಪೇಸ್ವಾಮಿ, ಬಿ.ಆರ್.ನಾಗರಾಜ್, ಹೆಚ್.ಎ.ನಾಗರಾಜ್, ಶ್ರೀಧರ್ ಇನ್ನು ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್