Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುಂದುವರಿಯಲಿದೆ ಮಳೆ ರಗಳೆ : ಇನ್ನು ಮೂರ್ನಾಲ್ಕು ದಿನದ ಎಚ್ಚರಿಕೆ ನೀಡಿದ ಹವಮಾನ ಇಲಾಖೆ..!

Facebook
Twitter
Telegram
WhatsApp

ಬೆಂಗಳೂರು: ಜನ ನಿಜವಾಗಲೂ ಈ ಮಳೆಗೆ ಸುಸ್ತಾಗಿ ಹೋಗಿದ್ದಾರೆ. ಮುಂಗಾರು ಸಮಯದಲ್ಲಿ ಕೈಕೊಟ್ಟು ಬೆಳೆ ಫಸಲಿಗೆ ಬಂದಾಗ ಧೋ ಅಂತ ಸುರಿಯುತ್ತಿರುವ ಈ ಮಳೆಗೆ ರೈತರಂತು ಸಾಕಪ್ಪ ಸಾಕು ಎನ್ನುತ್ತಿದ್ದಾರೆ.‌ ನಿರಂತರವಾಗಿ ಸುರಿಯುತ್ತಿರುವ ಮಳೆ ಬಗ್ಗೆ ಇಂದಾದರೂ ನಿಲ್ಲುತ್ತೇನೊ ಅಂತ ಅದೆಷ್ಟೋ ಜನ ಮೋಡದತ್ತ ಕಣ್ಣು ಹಾಯಿಸುತ್ತಿದ್ದಾರೆ. ಆದ್ರೆ ಅದು ಸಾಧ್ಯವಿಲ್ಲ ಅಂತ ಹವಮಾನ ಇಲಾಖೆ ಮುನ್ಸೂಚನೆ ನೀಡುತ್ತಿದೆ‌.

ನಾಳೆಯಿಂದ ಮಳೆಯ ಪ್ರಮಾಣ ತಗ್ಗುವ ಸಾಧ್ಯತೆ ಮಾತ್ರ ಇದೆ. ಆದ್ರೆ ರಾಜ್ಯದೆಲ್ಲೆಡೆ ಇನ್ನು ಮೂರ್ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಅಂತ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಪ್ರದೇಶದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇಂದು ಕೂಡ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಿದೆ. ಬೆಳಗ್ಗೆ ಸ್ವಲ್ಪ ಹೊತ್ತು ಮಾತ್ರ ಸೂರ್ಯನ ದರ್ಶನವಾಗಿದೆ. ಬಿಸಿಲು ನೋಡಿ ಇವತ್ತು ಮಳೆ ಬರಲ್ಲ ಎಂದುಕೊಂಡ ಕೆಲವೇ ಗಂಟೆಗಳಲ್ಲಿ ಎಲ್ಲೆಡೆ ಜೋರು ಮಳೆಯಾಗಿದೆ. ಮತ್ತೆ ಮೋಡ ಕವಿದ ವಾತಾವರಣವೇ ಎಲ್ಲೆಡೆ ಕಾಣುತ್ತಿದೆ. ಇದರ ನಡುವೆ ಇನ್ನು ಮೂರ್ನಾಲ್ಕು ದಿನ ಮಳೆಯಾಗುತ್ತೆ ಅಂದ್ರೆ ಜನರ ಸ್ಥಿತಿ ಆ ವರುಣರಾಯನಿಗೆ ಪ್ರೀತಿಯಾಗಬೇಕು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!