Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ವಿಜೃಂಭಣೆಯ ರಾಯರ 357ನೇ ಆರಾಧನಾ ಮಹೋತ್ಸವ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ : ನಗರದಲ್ಲಿ ರಾಯರ 357ನೇ ಆರಾಧನಾ ಮಹೋತ್ಸವ ಸಂಭ್ರಮ ಮನೆ ಮಾಡಿದೆ. ಆನೆ ಬಾಗಿಲ ಬಳಿಯಲ್ಲಿನ ಜಗದ್ಗುರು ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನ ನಂಜನಗೂಡು ಶ್ರೀ ರಘವೇಂದ್ರ ಸ್ವಾಮಿಗಳವರ ಬೃಂದಾವನ ಸನ್ನಿಧಾನದ  ರಾಯರ ಮಠದಲ್ಲಿ ಮಧ್ಯಾರಾಧನೆ ಜನರ ಭಕ್ತಿ ಭಾವಕ್ಕೆ ಪರವಶವಾಗಿದೆ. ಅಧಿಕ ಸಂಖ್ಯೆಯಲ್ಲಿ ಭಕ್ತಾಧಿಗಳು ಮಠಕ್ಕೆ ಆಗಮಿಸಿ ರಾಯದ ದರ್ಶನ ಪಡೆದರು.

ರಾಯರ ಮಂತ್ರಾಲಯದಲ್ಲಿ ದೇವರ ಧ್ಯಾನದಲ್ಲಿರುವ ರಾಯರ ಕಣ್ಣು ಭಕ್ತರ ಕಡೆ ದೃಷ್ಟಿ ಹಾಯಿಸಿದ್ದು, ಹೀಗಾಗಿ ಅಧಿಕ ಸಂಖ್ಯೆಯಲ್ಲಿ ಇಂದು ಭಕ್ತರು ಸೇರ್ಪಡೆಯಾಗಲಿದ್ದಾರೆ. ಅದರಂತೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ರಾಯರ ಕೃಪಾಕಟಾಕ್ಷಕ್ಕೆ ಒಳಗಾಗಿದ್ದಾರೆ.  ರಾಯರಿಗೆ ವಿಶೇಷ ಅಲಂಕಾರ ಮಾಡಲಾಗಿದೆ. ರಾಯರು ಜೀವಂತವಾಗಿ ವೃಂದಾವನ ಪ್ರವೇಶವಾದ ದಿನವೇ ಮಧ್ಯಾರಾಧನೆ ಆಗಿದೆ.

 

ಮಧ್ಯಾರಾಧನೆ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳ ಜೊತೆ ಉತ್ಸವಗಳು ಶ್ರೀ ಮಠದಲ್ಲಿ ನಡೆದವು  ಇವತ್ತು ಮಂತ್ರಾಲಯದ ರಾಯರ ಮಠದಲ್ಲಿ ಮಧ್ಯಾರಾಧನೆ ನಡೆದಿದ್ದು, ರಾಯರ ಆರಾಧನಾ ಮಹೋತ್ಸವದಲ್ಲಿ ಪೂರ್ವಾರಾಧನೆ, ಮಧ್ಯಾರಾಧನೆ ಹಾಗೂ ಉತ್ತರಾಧನೆ ಈ ಮೂರು ದಿನಗಳು ಅತಿ ಮಹತ್ವವಾಗಿವೆ.

 

ಆಗಸ್ಟ್ 22 ನೇ ಗುರುವಾರ : ಶ್ರೀ ಗುರುಸಾರ್ವಭೌಮರ ಉತ್ತರಾರಾಧನೆ ಪ್ರಾತ: 11.೦೦ ಗಂಟೆಗೆ ಶ್ರೀ ಗುರುಸಾರ್ವಭೌಮರ ಉತ್ತರಾರಾಧನೆ ಪ್ರಯುಕ್ತ ಮಹಾರಥೋತ್ಸವವು ಚಿತ್ರದುರ್ಗದ ರಾಜಬೀದಿಗಳಲ್ಲಿ ವಿವಿಧ ಭಜನಾಮಂಡಳಿಗಳು ಹಾಗೂ ಶ್ರೀ ಗುರುಸಾರ್ವಭೌಮರ ಭಕ್ತರೊಂದಿಗೆ ಜರುಗುವುದು.

ಆಗಸ್ಟ್ 23 ನೇ ಶುಕ್ರವಾರ : ಶ್ರೀ ಸುಜ್ಞಾನೇಂದ್ರತೀರ್ಥರ ಆರಾಧನೆ, ಪವಮಾನ ಹೋಮ, ಸರ್ವಸಮರ್ಪಣೋತ್ಸವ ಕಾರ್ಯಕ್ರಮ ನಡೆಯಲಿದೆ.

ಬೆಳಿಗ್ಗೆ ನಿರ್ಮಾಲ್ಯ ಅಷ್ಟೋತ್ತರ ಸಹಿತ ಫಲಪಂಚಾಮೃತ ಅಭಿಷೇಕ ಉತ್ಸವರಾಯರ ಪಾದಪೂಜೆ, ಕನಕಾಭಿಷೇಕ ನೈವೇದ್ಯ, ಅಲಂಕಾರ ಪಂಕ್ತಿ, ಹಸ್ತೋದಕ, ಮಹಾಮಂಗಳಾರತಿ, ತೀರ್ಥಪ್ರಸಾದ  ಭಜನಾ ಕಾರ್ಯಕ್ರಮ ಸಾಂಸ್ಕೃತಿಕ ಕಾರ್ಯಕ್ರಮ ರಜತ ರಥೋತ್ಸವ, ಸ್ವಸ್ತಿವಾಚನ, ಅಷ್ಟಾವಧಾನ, ಮಹಾ ಮಂಗಳಾರತಿ. ಕಾರ್ಯಕ್ರಮ ನಡೆಯಿತು.  ಬೆಳ್ಳಿಗೆ ಶ್ರೀ ಸಪ್ತಗಿರಿ ಭಜನಾ ಮಂಡಳಿಯವರಿಂದ ಭಜನೆ ಸಂಜೆ ಸುಜೀತ್ ಕುಲಕರ್ಣಿ ಇವರಿಂದ ದಾಸವಾಣಿ ಕಾರ್ಯಕ್ರಮ ನಡೆಯಿತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment