Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ದರ್ಶನ್ ಎ1 ಆರೋಪಿ ಆಗ್ತಾರಾ..? ಪೊಲೀಸರ ಕೈ ಸೇರಿರುವ ಸಾಕ್ಷಿ ಏನು..?

Facebook
Twitter
Telegram
WhatsApp

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ, ಪವಿತ್ರಾಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಕಾರಣಕ್ಕೆ ಶೆಡ್ ಗೆ ಕರೆದು ಆತನನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಕೊಲೆ ಕೇಸಲ್ಲಿ ದರ್ಶನ್ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಈ ಕೇಸಲ್ಲಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದು, ದರ್ಶನ್ ಎ2 ಆರೋಪಿಯಾಗಿದ್ದಾರೆ. ಆದರೆ ದಿನೇ ದಿನೇ ಕೇಸ್ ಸ್ಟ್ರಾಂಗ್ ಆಗ್ತಾ ಇದ್ದು, ಈಗ ದರ್ಶನ್ ಅವರೇ ಎ1 ಆರೋಪಿಯಾಗುವ ಸಾಧ್ಯತೆ ದಟ್ಟವಾಗಿದೆ.

ಈಗಾಗಲೇ ಪವಿತ್ರಾ ಗೌಡ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಅನುಕುಮಾರ್ ಕೂಡ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಆದರೆ ದರ್ಶನ್ ಮಾತ್ರ ಇನ್ನು ಯಾವುದೇ ರೀತಿಯ ಅರ್ಜಿ ಸಲ್ಲಿಕೆ ಮಾಡಿಲ್ಲ. ಇದೀಗ ಪೊಲೀಸರಿಗೆ ಸಿಕ್ಕಂತ ಸಾಕ್ಷಿಗಳೆಲ್ಲಾ ದರ್ಶನ್ ಅವರ ಕಡಗೆ ಬೆರಳು ಮಾಡಿ ತೋರಿಸುತ್ತಿವೆ ಎನ್ನಲಾಗಿದೆ.

ಪೊಲೀಸರು ಆರೋಪಿಗಳ ಮೊಬೈಲ್ ಅನ್ನು ರಿಟ್ರೀವ್ ಮಾಡಿದ್ದು, ನಾಲ್ಕು ಫೋಟೋಗಳು ಸಿಕ್ಕಿವೆ ಎನ್ನಲಾಗಿದೆ. ಆ ಫೋಟೋಗಳಲ್ಲಿ , ರೇಣುಕಾಸ್ವಾಮಿ ಕೊನೆಯ ಬಾರಿಗೆ ಕೈಮುಗಿದು ಬೇಡಿಕೊಂಡಿದ್ದಾರೆ ಎನ್ನಲಾಗಿದೆ. ದೇಹ ರಕ್ತಸಿಕ್ತವಾಗಿದ್ದರು, ಆರೋಪಿಗಳು ಆತನನ್ನು ಬಿಟ್ಟಿಲ್ಲ. ಹೀಗಾಗಿ ನಟ ದರ್ಶನ್ ಅವರನ್ನು ಎ2 ಆರೋಪಿ ಸ್ಥಾನದಿಂದ ಎ1 ಆರೋಪಿ ಸ್ಥಾನಕ್ಕೆ ಇಳಿಸಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದ್ದಾರೆ ಎನ್ನಲಾಗಿದೆ. ಈಗಾಗಲೇ ದರ್ಶನ್ ಅಂಡ್ ಗ್ಯಾಂಗ್ 70 ಕ್ಕೂ ಹೆಚ್ಚು ದಿನದಿಂದ ಜೈಲಿನಲ್ಲಿದ್ದಾರೆ. ಇನ್ನು ದರ್ಶನ್ ಗಾಗಿ ಪತ್ನಿ ವಿಜಯಲಕ್ಷ್ಮೀ ದೇವಸ್ಥಾನಗಳನ್ನು ಸುತ್ತುತ್ತಾ ಇದ್ದಾರೆ. ಹಾಗೇ ಅಭಿಮಾನಿಗಳು ಕೂಡ ದರ್ಶನ್ ಹೊರಗೆ ಬರಲಿ ಎಂದೇ ಬೇಡಿಕೊಳ್ಳುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!