Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಳ್ಳಕೆರೆ | ಕುರಿಮರಿಗಳ ಮೇಲೆ ಬೀದಿನಾಯಿಗಳ ದಾಳಿ : 8 ಕುರಿಗಳು ಮೃತ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ ಆ.22 : ಕುರಿ ಹಟ್ಟಿಯಲ್ಲಿದ್ದ ಕುರಿ ಮರಿಗಳ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ 8 ಕುರಿ ಮರಿಗಳು ಸಾವನ್ನಪ್ಪಿದ ಘಟನೆ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಜರುಗಿದೆ.

ಗ್ರಾಮದ ಜಿ.ಪಿ. ರಂಗಪ್ಪ ಬಡಾವಣೆಯಲ್ಲಿ ವಾಸಿಸುತ್ತಿದ್ದ ಮಾರಣ್ಣ ಎನ್ನುವವರಿಗೆ ಸೇರಿದ ಕುರಿಗಳ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ.

ಇಂದು (ಗುರುವಾರ) ಬೆಳಗ್ಗೆ 11 ಗಂಟೆ ಸುಮಾರಿನಲ್ಲಿ ನಾಯಿಗಳು ಕುರಿಗಳ ಮೇಲೆ ದಾಳಿ ಮಾಡಿವೆ. ಈ ಘಟನೆಯಿಂದಾಗಿ ಕುರಿಸಾಕಾಣಿಕೆದಾರ ಮಾರಣ್ಣ ಕಂಗಾಲಾಗಿದ್ದಾನೆ. ಮೇಯಿಸಲು ಹೋದಾಗ ನರಿ, ತೋಳ ಹಾಗೂ ಚಿರತೆ ದಾಳಿ ಮಾಡುತ್ತಿದ್ದವು. ಆದರೆ ಈಗ ಅವುಗಳ‌ ಕಾಟ ತಪ್ಪಿದ್ದು ಹಗಲಿನಲ್ಲಿಯೇ ಊರಿನ‌ ಮಧ್ಯೆಯೇ ಕುರಿಗಳ ಮೇಲೆ ಬೀದಿ ನಾಯಿಗಳ ದಾಳಿ ಮಾಡಿ ಈ ರೀತಿ ಕುರಿಗಳನ್ನು ಬಲಿ ಪಡೆದರೆ ಹೇಗೆ ಎಂದು ಮಾರಣ್ಣ ನೋವು ವ್ಯಕ್ತಪಡಿಸಿದ್ದಾನೆ.

ಸಂಬಂಧಪಟ್ಟ ಅಧಿಕಾರಿಕಾರಿಗಳು ಮಾತ್ರ ಬೀದಿನಾಯಿಗಳ ಕಡಿವಾಣ ಹಾಕಲು‌ ಮುಂದಾಗುತ್ತಿಲ್ಲ. ಈಗಲಾದರು ಸಂಬಂಧಪಟ್ಟ ಅಧಿಕಾರಿಗಳು ಬೀದಿ ನಾಯಿಗಳಿಗೆ ಕಡಿವಾಣ ಹಾಕಬೇಕಿದೆ. ನಾಯಿದಾಳಿಗೆ ಸಿಲುಕಿ ಮೃತಪಟ್ಟ ಕುರಿಗಳಿಗೆ ಪರಿಹಾರ ಕೊಡಿಸುವ ಮೂಲಕ ಕುರಿಸಾಕಾಣಿಕೆದಾರರ ನೆರವಿಗೆ ಬರಬೇಕಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!