Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದರ್ಶನ್ ಜೈಲಲ್ಲಿ ಹೇಗಿದ್ದಾರೆ..? ಭೇಟಿ ಬಳಿಕ ರಚಿತಾ ರಾಮ್ ಹೇಳಿದ್ದೇನು..?

Facebook
Twitter
Telegram
WhatsApp

 

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿ 70 ದಿನಗಳ ಮೇಲಾಗಿದೆ. ಪೊಲೀಸರು ಕೂಡ ಇನ್ನು ಚಾರ್ಜ್ ಶೀಟ್ ಸಲ್ಲಿಕೆ ಮಾಡಿಲ್ಲ. ಹೀಗಾಗಿ ದರ್ಶನ್ ಪರ ವಕೀಲರು ಜಾಮೀನಿಗೂ ಅರ್ಜಿ ಹಾಕಿಲ್ಲ. ಇನ್ನು ಪೊಕೀಸರು ಸಾಕ್ಷ್ಯಗಳನ್ನು ಕಲೆ ಹಾರುತ್ತಿರುವ ರೀತಿ ನೋಡಿದರೆ ದರ್ಶನ್ ಅವರು ಹೊರಗೆ ಬರುವುದೇ ಅನುಮಾನ ಎಂದೇ ಹಲವರು ಹೇಳುತ್ತಿದ್ದಾರೆ. ಇದರ ಬೆನ್ನಲ್ಲೇ ಇಂದು ನಟಿ ರಚಿತಾ ರಾಮ್ ದರ್ಶನ್ ಅವರನ್ನು ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದರು.

ದರ್ಶನ್ ಅವರನ್ನು ಭೇಟಿಯಾದ ರಚಿತಾ ರಾಮ್ ಅವರ ಯೋಗ ಕ್ಷೇಮ ವಿಚಾರಿಸಿದ್ದಾರೆ. ಸಹಜವಾಗಿಯೇ ನೆಚ್ಚಿನ ನಟನನ್ನು ಆ ಸ್ಥಿತಿಯಲ್ಲಿ ನೋಡಿದಾಗ ಕಣ್ಣಲ್ಲಿ ನೀರು ಬರುತ್ತದೆ. ರಚಿತಾ ರಾಮ್ ಕೂಡ ಅಪ್ಸೆಟ್ ಆಗಿದ್ದರಂತೆ. ಆದರೆ ದರ್ಶನ್ ಅವರೇ ಧೈರ್ಯ ತುಂಬಿದ್ದಾರೆ ಎನ್ನಲಾಗಿದೆ.

ದರ್ಶನ್ ಭೇಟಿ ಬಳಿಕ ಮಾತನಾಡಿದ ರಚಿತಾ ರಾಮ್, ರಾಜನನ್ನ ರಾಜನ ರೀತಿಯಲ್ಲಿಯೇ ನೋಡುವುದಕ್ಕೆ ನನಗೆ ಇಷ್ಟ. ಈ ರೀತಿಯಲ್ಲಿ ನೋಡುವುದಕ್ಕೆ ಕಷ್ಟ ಆಯ್ತು. ನಾನು ಅವರ ಬ್ಯಾನರ್ ನಿಂದಾನೇ ಪರಿಚಯ ಆಗಿದ್ದು. ಅವರು ನನಗೆ ಅವಕಾಶ ಕೊಡಲು ನೋ ಎಂದಿದ್ದರೆ ಖಂಡಿತಾ ಬಿಂದ್ಯಾ ರಚಿತಾ ರಾಮ್ ಆಗ್ತಾ ಇರಲಿಲ್ಲ. ಅವರನ್ನು ನೋಡಿದ ಕೂಡಲೇ ಭಾವುಕಳಾದೆ. ಆದರೆ ಅವರೇ ನಮಗೆ ಧೈರ್ಯ ಹೇಳಿದರು. ಸಮಾಧಾನ ಮಾಡಿದ್ರು. ಕಾನೂನಿನಲ್ಲಿ ನಮಗೆ ನಂಬಿಕೆ ಇದೆ. ಆದಷ್ಟು ಬೇಗ ಹೊರಗೆ ಬರ್ತೀನಿ ಅಂತ ಅವರು ಹೇಳಿದ್ದಾರೆ. ನಾನು ಕೂಡ ನಿಮಗೋಸ್ಕರ ನಾವೆಲ್ಲಾ ಕಾಯ್ತಾ ಇದ್ದೀವಿ. ಬೇಗ ಬನ್ನಿ ಎಂದಿದ್ದೇನೆ ಅಂತ ರಚಿತಾ ರಾಮ್ ಮಾಹಿತಿ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!