Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಳ್ಳಕೆರೆ | 80 ಎಕರೆ ಈರುಳ್ಳಿ ಬೆಳೆಗೆ ಕೊಳೆ ರೋಗ : ಕೃಷಿ ಅಧಿಕಾರಿಗಳ ಭೇಟಿ, ಪರಿಶೀಲನೆ

Facebook
Twitter
Telegram
WhatsApp

ಸುದ್ದಿಒನ್,  ಚಿತ್ರದುರ್ಗ, ಆಗಸ್ಟ್ 23 : ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ಸುರಿದ ಮಳೆ ರೈತರಿಗೆ ಸಂತಸದ ಜೊತೆಗೆ ಸಂಕಷ್ಟವನ್ನೂ ತಂದಿದೆ. ಕೆಲವು ಬೆಳೆಗಳಿಗೆ ಮಳೆ ಅನುಕೂಲವಾಗಿದ್ದರೆ ಇನ್ನೂ ಕೆಲವು ಬೆಳಗಳಿಗೆ ರೋಗ, ಕೀಟದ ಬಾಧೆ ಕಾಡುತ್ತಿದೆ. ಕೆಲವು ಬೆಳೆಗಳು ಕೊಳೆತು ಹೋಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಚಳ್ಳಕೆರೆ ತಾಲೂಕಿನಾದ್ಯಂತ 11,299 ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬಿತ್ತನೆ ಮಾಡಲಾಗಿದ್ದು ಮಳೆಗೆ  80 ಎಕರೆ ಪ್ರದೇಶದಲ್ಲಿ  ಬೆಳೆ ಕೊಳೆ ರೋಗಕ್ಕೆ ತುತ್ತಾಗಿದೆ.

ತಾಲ್ಲೂಕಿನ ರಾಮಜೋಗಿಹಳ್ಳಿ, ಬಾಲೆನಹಳ್ಳಿ, ಹೆಗ್ಗೆರೆ, ಹೊಟ್ಟಜ್ಜನ ಕಪಿಲೆ,  ಸಾಣಿಕೆರೆ,  ಹಿರೇಮಧುರೆ,  ಚಿಗುತನಹಳ್ಳಿ ಕಪ್ಪುಭೂಮಿ ಇರುವಂತಹ ಪ್ರದೇಶದಲ್ಲಿ ಮಳೆ ನೀರು ನಿಂತು ಈರುಳ್ಳಿ ಬೆಳಗ್ಗೆ ಕೊಳೆರೋಗ ಆವರಿಸಿದೆ.

ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ  ವಿರುಪಾಕ್ಷಪ್ಪನವರು ರೋಗಪೀಡಿತ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರೈತರಿಗೆ ಉಳಿದಂಥ ಬೆಳೆಗಳನ್ನು ಉಳಿಸಿಕೊಳ್ಳಲು ಹಲವು ಸಲಹೆಗಳನ್ನು ನೀಡಿದ್ದಾರೆ.

ಈ ಸಂದರ್ಭದಲ್ಲಿ ಅವರು ಮಾತನಾಡಿ, ಈರುಳ್ಳಿ ಬೆಳೆಯು ಒಂದು ಸೂಕ್ಷ್ಮ ಬೆಳೆಯಾಗಿದ್ದು ಇದಕ್ಕೆ ಹೆಚ್ಚು ಮಳೆ ಬಂದರೂ ಸಹ ಹಲವು ರೋಗದ ಬಾಧೆ ಕಾಡುತ್ತದೆ. ಈಗಾಗಲೇ ಮಳೆಯಿಂದ ಬೆಳೆ ಇರುವ ಜಮೀನುಗಳಿಗೆ ನೀರು ನುಗ್ಗಿದ್ದು ಕೊಳೆರೋಗ ಕಾಣಿಸಿಕೊಂಡಿದೆ. ಕೆಲವು ಜಮೀನುಗಳಲ್ಲಿ ಈರುಳ್ಳಿ ಬೆಳೆಗೆ ಸುಳಿರೋಗ, ನೇರಳೆ, ಮಚ್ಚೆ ರೋಗ ಇತರೆ ರೋಗಗಳು ಕಾಣಿಸಿಕೊಂಡಿದ್ದು ರೋಗದ ಹತೋಟಿಗೆ ರೈತರಿಗೆ ಹಲವು ಕ್ರಮಗಳನ್ನ ಕೈಗೊಳ್ಳುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಓ. ಟಿ. ತಿಪ್ಪೇಸ್ವಾಮಿ, ಚಿದಾನಂದಪ್ಪ, ನಾಗಣ್ಣ, ತಿಮ್ಮೇಗೌಡ, ಹಾಗೂ ತೋಟಗಾರಿಕೆ ಅಧಿಕಾರಿ ಪ್ರವೀಣ್ ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!