Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನೂತನ ಶಾಲಾ ಕಟ್ಟಡ ಉದ್ಘಾಟನೆ ಹಾಗೂ ಹಳೆ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ

Facebook
Twitter
Telegram
WhatsApp

ಸುದ್ದಿಒನ್, ಗುಬ್ಬಿ, ಆಗಸ್ಟ್. 23 : ದೇಶ ಅಭಿವೃದ್ಧಿ ಪಥದಲ್ಲಿ ಸಾಗಬೇಕಾದರೆ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಕೆ ಎಸ್ ಆರ್ ಟಿ ಸಿ ನಿಗಮ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಎಸ್ ಆರ್ ಶ್ರೀನಿವಾಸ್ ತಿಳಿಸಿದರು.

ತಾಲೂಕಿನ ಹೊದಲೂರು ಗ್ರಾಮದ ಸರ್ಕಾರಿ ಶಾಲೆ ನೂತನ ಕಟ್ಟಡ ಉದ್ಘಾಟನೆ ಹಾಗೂ ಹಳೆ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶೈಕ್ಷಣಿಕವಾಗಿ ಎಲ್ಲ ವಿದ್ಯಾವಂತರಾದರೆ ಉತ್ತಮ ಸಮಾಜ ಕಟ್ಟಬಹುದು.

ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ ದೇಶ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ ವಾಗುತ್ತದೆ. ಉತ್ತಮ ವಾತಾವರಣದಲ್ಲಿ ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಯಲ್ಲಿ ಸಿಗುತ್ತಿದೆ. ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಕೊಡಿಸಬೇಕು ತಿಳಿಸಿದರು.

ಕೆಎಎಸ್ ಅಧಿಕಾರಿ ಸೋಮಶೇಖರ್ ಮಾತನಾಡಿ ನಾವು ಹುಟ್ಟಿದ ಊರಿಗೆ ಏನಾದರೂ ಸಹಕಾರ ಮಾಡಬೇಕು ಎಂದು ಶಾಲೆಯನ್ನ ದತ್ತು ತೆಗೆದುಕೊಂಡು ಗ್ರಾಮ ಪಂಚಾಯಿತಿ ಗ್ರಾಮಸ್ಥರ ಸಹಕಾರದಿಂದ ಅಭಿವೃದ್ಧಿ ಮಾಡಲು ಮುಂದಾಗಿದ್ದೇವೆ ಪ್ರತಿ ಗ್ರಾಮದಲ್ಲೂ ಸಹ ಇಂತಹ ಸರಕಾರಿ ಶಾಲೆಯ ಕನ್ನಡ ಶಾಲೆಗಳನ್ನು ಉಳಿಸುವುದಕ್ಕೆ ತಾವೆಲ್ಲರೂ ಬದ್ಧರಾಗಬೇಕು ಇದರಿಂದ ಆರ್ಥಿಕವಾಗಿ ಹಿಂದುಳಿದಿರುವಂತಹ ರೈತರ ಮಕ್ಕಳಿಗೆ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಲೇಪಾಕ್ಷಪ್ಪ, ಗ್ರಾಮ ಪಂಚಾಯತಿಯ ಉಪಾಧ್ಯಕ್ಷ ಬಿಸ್ಮಿಸ್ ಖಾನ್, ಶಿವಪ್ಪ, ಎಸ್ ಟಿ ಎಂ ಸಿ ಅಧ್ಯಕ್ಷ ಚೆನ್ನಿಗರಾಮಯ್ಯ, ಬಿ ಆರ್ ಸಿ ಮಧುಸೂಧನ್, ದಿನೇಶ್, ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯರುಗಳು ಗಾಯಕ ಕಂಬದರಂಗಯ್ಯ, ವಸುಶ್ರೀ, ಸೇರಿದಂತೆ ಶಾಲೆಯ ಶಿಕ್ಷಕರು ಪೋಷಕರು ವಿದ್ಯಾರ್ಥಿಗಳು ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!