Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯೂಟ್ಯೂಬ್ ನಿಂದ ಡಾ.ಬ್ರೋ ತಿಂಗಳಿಗೆ ದುಡಿಯುವುದು 1 ಲಕ್ಷದ 76 ಸಾವಿರ..!

Facebook
Twitter
Telegram
WhatsApp

ಡಾ.ಬ್ರೋ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ನಮಸ್ಕಾರ ದೇವ್ರು ಅಂತಾನೇ ವಿಡಿಯೋ ಮಾಡುವ ಗಗನ್, ಡಾ.ಬ್ರೋ ಹೆಸರಲ್ಲಿ ಕನ್ನಡಿಗರ ಮನಸ್ಸನ್ನ ಗೆದ್ದಿದ್ದಾರೆ. ಯೂಟ್ಯೂಬ್ ನಲ್ಲಂತೂ ಯಾವ ಸ್ಟಾರ್ ಗಳಿಗೂ ಇಲ್ಲ ಅಷ್ಟು ದೊಡ್ಡ ಫಾಲೋವರ್ಸ್ ಹೊಂದಿದ್ದಾರೆ. ಮಿಲಿಯನ್ ಗಟ್ಟಲೇ ಸಬ್ಸ್ಕೈಬರ್ ಇದಾರೆ. ಡಾ.ಬ್ರೋಗೆ ಅಷ್ಟೊಂದು ಫಾಲೋವರ್ಸ್ ಸುಮ್ಮನೆ ಬಂದಿಲ್ಲ. ಡಾ.ಬ್ರೋ ಅಷ್ಟು ಕಷ್ಟ ವಿಡಿಯೋಗಳನ್ನ ಮಾಡಿ ಹಾಕುತ್ತಾರೆ. ದೇಶ ವಿದೇಶಗಳನ್ನ ಸುತ್ತುತ್ತಾರೆ.

ಬೇರೆ ಬೇರೆ ದೇಶದ ಸ್ಥಳಗಳು, ಅಲ್ಲಿನ ಫುಡ್ ಹೀಗೆ ಎಷ್ಟೋ ಕಡೆ ಅಸಾಧ್ಯವಾದುದ್ದೆಲ್ಲವನ್ನು ತೋರಿಸಿದ್ದಾರೆ. ಮುಗ್ಧತೆಯ ಮಾತುಗಳಿಂದಾನೇ ಎಲ್ಲರನ್ನು ತಲುಪುತ್ತಿದ್ದಾರೆ. ಯಾವುದೇ ಭಯವಿಲ್ಲದೆ ಎಲ್ಲಾ ಕಡೆಗೂ ನುಗ್ಗುತ್ತಾರೆ. ಇಂತಹ ಡಾ.ಬ್ರೋಗೆ ಇಡೀ ಪ್ರಪಂಚ ಸುತ್ತುವ ಆಸೆ. 195 ದೇಶಗಳಿಗೂ ಹೋಗುವ ಆಸೆ.

ಯೂಟ್ಯೂಬ್ ನಿಂದ ಸಾಕಷ್ಟು ಹಣ ಸಂಪಾದನೆ ಮಾಡಬಹುದು ಎಂಬುದು ಈಗಾಗಲೇ ಎಲ್ಲರಿಗೂ ಗೊತ್ತಿರುವ ವಿಚಾರ. ಅದರಂತೆ ಡಾ.ಬ್ರೋ ಬಗ್ಗೆ ಹಲವರಿಗೆ ಸಾಕಷ್ಟು ಕುತೂಹಲ ಇರುತ್ತೆ. ಆ ವಿಚಾರದ ಬಗ್ಗೆ ಸ್ವತಃ, ಸಾಕಗಷಿ ಸಮೇತ ಡಾ.ಬ್ರೋ ಮಾಹಿತಿ ನೀಡಿದ್ದಾರೆ. ಲೈವ್ ಗೆ ಬಂದಿದ್ದ ಬ್ರೋ, ಅಭಿಮಾನಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ. ಅದರಲ್ಲಿ ವ್ಯಕ್ತಿಯೊಬ್ಬರು ಯೂಟ್ಯೂಬ್ ನಲ್ಲಿ ನಿಮ್ಮ ತಿಂಗಳ ಆದಾಯ ಎಷ್ಟು ಎಂದು ಕೇಳಿದ್ದಾರೆ. ಅದಕ್ಕೆ ಡಾ.ಬ್ರೋ ತಮ್ಮ‌ ಮೊಬೈಲ್ ತೆಗೆದು ಸಂಪಾದನೆಯನ್ನು ತೋರಿಸಿದ್ದಾರೆ. ಅದರಲ್ಲಿ 2 ಸಾವಿರದ 100 ಡಾಲರ್ ಇತ್ತು. ಅಂದ್ರೆ 1 ಲಕ್ಷದ 76 ಸಾವಿರ ಹಣ. ಈ ತಿಂಗಳು ಬಂದಿರುವ ಹಣ ಇದು. ಆದರೆ ದೇಶ ವಿದೇಶಗಳನ್ನು ಸುತ್ತಲು ಅದರಲ್ಲಿ ಖರ್ಚು ಮಾಡಿಕೊಳ್ಳುತ್ತಾರೆ. ಹಾಗೇ ವಿಡಿಯೋ ಎಡಿಟಿಂಗ್ ಮಾಡುವುದಕ್ಕೂ ಅದರಲ್ಲಿಯೇ ಹಣ ನೀಡುತ್ತಾರೆ. ಉಳಿಯುವುದು 10-20 ಸಾವಿರ. ಆದರೆ ಇದರ ನಡುವೆ ಜಾಹೀರಾತುಗಳಿಂದಾನೂ ಒಳ್ಳೆಯ ಹಣ ಅವರ ಕೈ ಸೇರುತ್ತಿದೆ. ಈ ಬಗ್ಗೆಯೂ ಹೇಳಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!