Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಮದುವೆಗೆ ಕುಟುಂಬದವರ ವಿರೋಧ : ಯುವಕ ಆತ್ಮಹತ್ಯೆ

---Advertisement---

ಸುದ್ದಿಒನ್, ಚಳ್ಳಕೆರೆ, ಆಗಸ್ಟ್. 24 : ಪೋಷಕರಿಗೂ ಮಕ್ಕಳ ಭವಿಷ್ಯವೇ ಮುಖ್ಯವಾಗಿರುತ್ತದೆ. ಮಕ್ಕಳು ಬೆಳೆದ ಮೇಲೆ ಮದುವೆ ಮಾಡಿಸಿ, ಅವರಿಗೊಂದು ಜೀವನ ಕಲ್ಪಿಸಿಕೊಡುವ ಯೊಇಚನೆಯಲ್ಲಿಯೇ ಇರುತ್ತಾರೆ. ಆದರೆ ಅದಕ್ಕೂ ಮುನ್ನ ಮಕ್ಕಳು ಆರ್ಥಿಕವಾಗಿಯೂ ಬೆಳೆಯಬೇಕು, ಜವಾಬ್ದಾರಿ ಕಲಿತಿರಬೇಕೆಂಬ ಆಸೆ. ಅದೇ ವಯಸ್ಸಲ್ಲಿ ಪ್ರೀತಿ, ಪ್ರೇಮ ಅಂತ ಮಾಡಿದರೆ, ಆ ಮದುವೆಯನ್ನು ಒಪ್ಪುವುದಕ್ಕೆ ಆಗದೆ ಇದ್ದಾಗ ಮಕ್ಕಳಾದರೂ ಅರ್ಥ ಮಾಡಿಕೊಳ್ಳಬೇಕು. ಮಗ ಒಪ್ಪಿದ ಹುಡುಗಿಯನ್ನ ತಂದೆ ತಾಯಿ ಒಪ್ಪದೆ ಇದ್ದ ಕಾರಣಕ್ಕೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮದುವೆಗೆ ಕುಟುಂಬದವರು ನಿರಾಕರಿಸಿದ ಹಿನ್ನೆಲೆಯಲ್ಲಿ ಯುವಕ ನೇಣಿಗೆ ಶರಣಾದ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ನಗರದ ರಹೀಂನಗರ ಬಡಾವಣೆ ಅಬ್ದುಲ್ ರಹೆಮಾನ್(22) ಆತ್ಮಹತ್ಯೆ ಮಾಡಿಕೊಂಡ ಯುವಕ. ಅಪ್ರಾಪ್ತ ಬಾಲಕಿಯನ್ನು ಪ್ರೇಮಿಸಿ ಮದುವೆಯಾಗಬೇಕೆಂದುಕೊಂಡಿದ್ದ. ಆದರೆ
ಅಪ್ರಾಪ್ತೆ ಜತೆ ಮದುವೆಗೆ ಕುಟುಂಬದವರು ವಿರೋಧಿಸಿದ್ದರು. ಈ ಘಟನೆಯಿಂದ ಮನ ನೊಂದು ರೆಹಮಾನ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಈಗಿನ್ನು ಭವಿಷ್ಯದತ್ತ ಗಮನ ಹರಿಸಬೇಕಾದ ವಯಸ್ಸು. ದುಡಿದು ಬದುಕು ಕಟ್ಟಿಕೊಳ್ಳುವ ವಯಸ್ಸು. ಅಪ್ಪ ಅಮ್ಮನಿಗೆ ಆಸರೆಯಾಗಬೇಕಾದ ವಯಸ್ಸು. ಆದರೆ ಪ್ರೀತಿ ಪ್ರೇಮದ ಪಾಶಕ್ಕೆ ಸಿಲುಕಿ ಹುಡುಗ ಭವಿಷ್ಯದ ಬಗ್ಗೆ ಯೋಚನೆಯೇ ಮಾಡದೆ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. ಮಗನ ಉಜ್ವಲ ಭವಿಷ್ಯದ ಚಿಂತೆ ಮಾಡಿದ್ದ ಪೋಷಕರಿಗೆ ಕಣ್ಣೀರೊಂದೆ ಬರ್ತಿದೆ. ಮಗನ ಸಾವು ಪೋಷಕರನ್ನ ಕಾಡುತ್ತಿದೆ. ಅಪ್ರಾಪ್ತೆಯನ್ನು ಲವ್ ಮಾಡಿದ್ದಕ್ಕೆ ಪ್ರೀತಿಯನ್ನು ತಿರಸ್ಕಾರ ಮಾಡಿದ್ದರು. ಆದರೆ ಪೋಷಕರ ಕಾಳಜಿ ಅರ್ಥ ಮಾಡಿಕೊಳ್ಳದೆ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment