Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಳ್ಳಕೆರೆ | ಮದುವೆಗೆ ಕುಟುಂಬದವರ ವಿರೋಧ : ಯುವಕ ಆತ್ಮಹತ್ಯೆ

Facebook
Twitter
Telegram
WhatsApp

ಸುದ್ದಿಒನ್, ಚಳ್ಳಕೆರೆ, ಆಗಸ್ಟ್. 24 : ಪೋಷಕರಿಗೂ ಮಕ್ಕಳ ಭವಿಷ್ಯವೇ ಮುಖ್ಯವಾಗಿರುತ್ತದೆ. ಮಕ್ಕಳು ಬೆಳೆದ ಮೇಲೆ ಮದುವೆ ಮಾಡಿಸಿ, ಅವರಿಗೊಂದು ಜೀವನ ಕಲ್ಪಿಸಿಕೊಡುವ ಯೊಇಚನೆಯಲ್ಲಿಯೇ ಇರುತ್ತಾರೆ. ಆದರೆ ಅದಕ್ಕೂ ಮುನ್ನ ಮಕ್ಕಳು ಆರ್ಥಿಕವಾಗಿಯೂ ಬೆಳೆಯಬೇಕು, ಜವಾಬ್ದಾರಿ ಕಲಿತಿರಬೇಕೆಂಬ ಆಸೆ. ಅದೇ ವಯಸ್ಸಲ್ಲಿ ಪ್ರೀತಿ, ಪ್ರೇಮ ಅಂತ ಮಾಡಿದರೆ, ಆ ಮದುವೆಯನ್ನು ಒಪ್ಪುವುದಕ್ಕೆ ಆಗದೆ ಇದ್ದಾಗ ಮಕ್ಕಳಾದರೂ ಅರ್ಥ ಮಾಡಿಕೊಳ್ಳಬೇಕು. ಮಗ ಒಪ್ಪಿದ ಹುಡುಗಿಯನ್ನ ತಂದೆ ತಾಯಿ ಒಪ್ಪದೆ ಇದ್ದ ಕಾರಣಕ್ಕೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮದುವೆಗೆ ಕುಟುಂಬದವರು ನಿರಾಕರಿಸಿದ ಹಿನ್ನೆಲೆಯಲ್ಲಿ ಯುವಕ ನೇಣಿಗೆ ಶರಣಾದ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ನಗರದ ರಹೀಂನಗರ ಬಡಾವಣೆ ಅಬ್ದುಲ್ ರಹೆಮಾನ್(22) ಆತ್ಮಹತ್ಯೆ ಮಾಡಿಕೊಂಡ ಯುವಕ. ಅಪ್ರಾಪ್ತ ಬಾಲಕಿಯನ್ನು ಪ್ರೇಮಿಸಿ ಮದುವೆಯಾಗಬೇಕೆಂದುಕೊಂಡಿದ್ದ. ಆದರೆ
ಅಪ್ರಾಪ್ತೆ ಜತೆ ಮದುವೆಗೆ ಕುಟುಂಬದವರು ವಿರೋಧಿಸಿದ್ದರು. ಈ ಘಟನೆಯಿಂದ ಮನ ನೊಂದು ರೆಹಮಾನ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಈಗಿನ್ನು ಭವಿಷ್ಯದತ್ತ ಗಮನ ಹರಿಸಬೇಕಾದ ವಯಸ್ಸು. ದುಡಿದು ಬದುಕು ಕಟ್ಟಿಕೊಳ್ಳುವ ವಯಸ್ಸು. ಅಪ್ಪ ಅಮ್ಮನಿಗೆ ಆಸರೆಯಾಗಬೇಕಾದ ವಯಸ್ಸು. ಆದರೆ ಪ್ರೀತಿ ಪ್ರೇಮದ ಪಾಶಕ್ಕೆ ಸಿಲುಕಿ ಹುಡುಗ ಭವಿಷ್ಯದ ಬಗ್ಗೆ ಯೋಚನೆಯೇ ಮಾಡದೆ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. ಮಗನ ಉಜ್ವಲ ಭವಿಷ್ಯದ ಚಿಂತೆ ಮಾಡಿದ್ದ ಪೋಷಕರಿಗೆ ಕಣ್ಣೀರೊಂದೆ ಬರ್ತಿದೆ. ಮಗನ ಸಾವು ಪೋಷಕರನ್ನ ಕಾಡುತ್ತಿದೆ. ಅಪ್ರಾಪ್ತೆಯನ್ನು ಲವ್ ಮಾಡಿದ್ದಕ್ಕೆ ಪ್ರೀತಿಯನ್ನು ತಿರಸ್ಕಾರ ಮಾಡಿದ್ದರು. ಆದರೆ ಪೋಷಕರ ಕಾಳಜಿ ಅರ್ಥ ಮಾಡಿಕೊಳ್ಳದೆ ಆತ್ಮಹತ್ಯೆಗೆ ಶರಣಾಗಿದ್ದಾನೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!