Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶರಣ ಸಂಸ್ಕೃತಿ ಉತ್ಸವ | ಚಿತ್ರದುರ್ಗದಲ್ಲಿ ಮೂರು ದಿನಗಳ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿ – ಶ್ರೀ ಜಯದೇವ ಕಪ್- 2024 : ಶ್ರೀರಾಮ್

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ,ಆ. 25 : ಶರಣ ಸಂಸ್ಕೃತಿ ಉತ್ಸವ-2024ರ ಅಂಗವಾಗಿ ನಡೆಯುವ ಕ್ರೀಡಾಕೂಟಕ್ಕೆ ಶ್ರೀ ಜಯದೇವ ಕಪ್-2024 ಎಂದು ಹೆಸರಿಡಲಾಗಿದ್ದು, ರಾಜ್ಯಮಟ್ಟದ ಹೊನಲುಬೆಳಕಿನ ಮಹಿಳೆಯರ ಮತ್ತು ಪುರುಷರ ಕಬಡ್ಡಿ ಪಂದ್ಯಾವಳಿಯನ್ನು ಏರ್ಪಡಿಸಲಾಗಿದೆ ಎಂದು ಕ್ರೀಡಾ ಸಮಿತಿಯ ಅಧ್ಯಕ್ಷ ಮಾಜಿ ನಗರಸಭಾ ಸದಸ್ಯ ಶ್ರೀರಾಮ್ ಅವರು ತಿಳಿಸಿದ್ದಾರೆ.

ಶ್ರೀ ಬಸವಮೂರ್ತಿ ಮಾದಾರಚೆನ್ನಯ್ಯ ಸ್ವಾಮಿಗಳ ಮಾರ್ಗದರ್ಶನದಲ್ಲಿ ಈ ಕ್ರೀಡಾಕೂಟವು ಮೂರುದಿನಗಳ ಕಾಲ ನಡೆಯಲಿದ್ದು, ಕ್ರೀಡಾಕೂಟ ಸಮಿತಿಯ ಗೌರವಾಧ್ಯಕ್ಷರಾಗಿ ಭೀಮಸಮುದ್ರದ ಉದ್ಯಮಿ ಶಂಕರಮೂರ್ತಿ, ಉಪಾಧ್ಯಕ್ಷರುಗಳಾಗಿ ಸಿ.ಟಿ. ಕಷ್ಣಮೂರ್ತಿ ಮತ್ತು ಸಿದ್ದವ್ವನಹಳ್ಳಿ ಪರಮೇಶ್, ಕಾರ್ಯದರ್ಶಿಯಾಗಿ ಅನಿಸ್, ಸಂಘಟನಾ ಕಾರ್ಯದರ್ಶಿಯಾಗಿ ರವಿ ಮಲ್ಲಾಪುರ, ಸಹಕಾರ್ಯದರ್ಶಿಗಳಾಗಿ ಹೆಚ್.ಎಂ. ಮಂಜುನಾಥ್, ಮೆದೇಹಳ್ಳಿ ವಿಜಯಕುಮಾರ್, ಸಂಘಟಕರಾಗಿ ಮಹೇಶ್, ನಾಗರಾಜ್ ನಂದಿಪುರ, ಸಿರಾಜ್, ರಾಮನಾಯ್ಕ್ ಅವರುಗಳನ್ನು ನೇಮಿಸಲಾಗಿದೆ.

ಮಹಿಳಾ ಕ್ರೀಡಾಕೂಟದ ಅಧ್ಯಕ್ಷರಾಗಿ ಶ್ರೀಮತಿ ರುದ್ರಾಣಿ ಗಂಗಾಧರ್, ಉಪಾಧ್ಯಕ್ಷರಾಗಿ ಶ್ರೀಮತಿ ಮೋಕ್ಷರುದ್ರಸ್ವಾಮಿ, ಕಾರ್ಯದರ್ಶಿಯಾಗಿ ಶ್ರೀಮತಿ ಆರತಿ ಶಿವಮೂರ್ತಿಯಾಗಿ, ಖಜಾಂಚಿಯಾಗಿ ಶ್ರೀಮತಿ ಲತಾ ರಮೇಶ್ ಟಿ.ಕೆ. ಅವರನ್ನು ನೇಮಕ ಮಾಡಲಾಗಿದೆ ಎಂದು ಕ್ರೀಡಾಕೂಟದ ಅಧ್ಯಕ್ಷರಾದ ಶ್ರೀರಾಮ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!