Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಯೋಗವು ಶಿಸ್ತು ಮತ್ತು ಆರೋಗ್ಯವನ್ನು ಜೋಪಾನ ಮಾಡುತ್ತದೆ : ಶ್ರೀಮತಿ ಹೇಮಾವತಿ

---Advertisement---

 

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 25 : ಶಿಸ್ತು ಆರೋಗ್ಯ ಪಡೆಯಲು ಯೋಗ ಬಹಳ ಉಪಯೋಗವಾಗುತ್ತದೆ ಮಕ್ಕಳಿಗೆ ಏಕಾಗ್ರತೆಯೊಂದಿಗೆ ಶಿಕ್ಷಣ ಪಡೆಯಲು ಅನುಕೂಲವಾಗುತ್ತದೆ ದ್ವೇಷ ,ಅಸೂಯೆಯನ್ನು ತೊಡೆದು ಹಾಕುವ ಶಕ್ತಿ ಯೋಗ ಮಾಡುವುದರಿಂದ ಬರುತ್ತದೆ ಎಂದು ಪತಂಜಲಿ ಮಹಿಳಾ ಯೋಗ ಸಂಸ್ಥೆಯ ಅಧ್ಯಕ್ಷರು ಹಾಗೂ ಯೋಗ ಶಿಕ್ಷಕಿ ಹೇಮಾವತಿ ಹೇಳಿದರು.

ನಗರದ ಶ್ರೀ ಸಿದ್ದರಾಮೇಶ್ವರ ವಸತಿ ಶಾಲೆಯಲ್ಲಿ
ರಾಜ್ಯಬಾಲ ಭವನ ಸೊಸೈಟಿ ಬೆಂಗಳೂರು,
ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಬಾಲ ಭವನ ಸಮಿತಿ ಚಿತ್ರದುರ್ಗ ಇವರ ವತಿಯಿಂದ 25/8/2024 ಭಾನುವಾರದಂದು ನಡೆದ ವಾರಾಂತ್ಯ ಕಾರ್ಯಕ್ರಮದ ದಲ್ಲಿ ಯೋಗ ತರಬೇತಿಯನ್ನು ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಆಗಮಿಸಿದ್ದ ಯೋಗ ಶಿಕ್ಷಕಿ ಕಾವ್ಯ ಮಾತನಾಡಿ ಶಿಕ್ಷಣದಲ್ಲಿ ಯೋಗ ಕಲಿಕೆಯಿಂದ ಏಕಾಗ್ರತೆ ಹೆಚ್ಚಾಗುತ್ತದೆ ಯೋಗ ಕಲಿಯುವುದರಿಂದ ಬಹಳ ಅನುಕೂಲವಾಗುತ್ತದೆ ಎಂದರು.

ಜಿಲ್ಲಾ ಬಾಲ ಭವನ ಕಾರ್ಯಕ್ರಮ ಸಂಯೋಜಕ ಡಿ .ಶ್ರೀ ಕುಮಾರ್ ಮಾತನಾಡಿ ಚಿತ್ರದುರ್ಗ ಜಿಲ್ಲೆಯಲ್ಲಿ ಒಂದು ವಿಶೇಷವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ವಾರಂತ್ಯದಲ್ಲಿ ಮಕ್ಕಳು ಸಮಯವನ್ನು ಪಠ್ಯತರ ಚಟುವಟಿಕೆಗಳೊಂದಿಗೆ ಕಳೆಯುವ ನಿಟ್ಟಿನಲ್ಲಿ ಯೋಗ ಕಾರ್ಯಕ್ರಮವನ್ನು ನಡೆಸಲಾಗುತ್ತದೆ ಎಂದರು.

ಅತಿಥಿಗಳಾಗಿ ಆಗಮಿಸಿದ ಯೋಗ ಶಿಕ್ಷಕಿ ಶಾಂತ ಮಾತನಾಡಿದರು ಕಾರ್ಯಕ್ರಮದಲ್ಲಿ ನಿಲಯ ಪಾಲಕರಾದ ಆನಂದ್ ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment