ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 26 : ಸೈಬರ್ ವಂಚಕರು ದಿನೇ ದಿನೇ ಹೊಸ ಹೊಸ ಮಾರ್ಗಗಳನ್ನು ಹುಡುಕಿಕೊಳ್ಳುತ್ತಾ ಇರುತ್ತಾರೆ. ಹಳೆಯ ಐಡಿಯಾದಲ್ಲಿ ಜನ ಅಲರ್ಟ್ ಆದರೆ ಅವರ ಬಳಿ ಇನ್ನಷ್ಟು ಐಡಿಯಾಗಳು ರೆಡಿ ಇರುತ್ತವೆ. ಆದರೆ ವಿಚಿತ್ರವೆಂದರೆ ಸೈಬರ್ ಕಳ್ಳರ ಬಗ್ಗೆ ಓದಿ, ತಿಳಿದುಕೊಂಡ ವಿದ್ಯಾವಂತರೆ ಮೋಸ ಹೋಗುತ್ತಾರೆ. ಕೆಲಸದ ಒತ್ತಡವೋ ಏನೋ ಸೈಬರ್ ವಂಚಕರು ಹೇಳಿದ ಮಾತನ್ನು ಬೇಗ ನಂಬಿ ಮೋಸ ಹೋಗುವ ಜನರೇ ಹೆಚ್ಚು. ಇದೀಗ ಚಿತ್ರದುರ್ಗದಲ್ಲೂ ಅಂತದ್ದೇ ಘಟನೆ ನಡೆದಿದೆ. ಆದರೆ ಒಂದೆರಡು ಸಾವಿರ ಅಲ್ಲ ಬರೋಬ್ಬರಿ ಕೋಟಿ ಲೆಕ್ಕದಲ್ಲಿ ಹಣ ವಂಚಿಸಿದ್ದಾರೆ.
ಚಿತ್ರದುರ್ಗದ ಖ್ಯಾತ ಹಾಗೂ ಹಿರಿಯ ವೈದ್ಯರಾದ ಡಾ. ಶ್ರೀನಿವಾಸ್ ಶೆಟ್ಟಿ ವಂಚನೆಗೊಳಗಾದವರು. ಇವರಿಗೆ ಬಂದ ಒಂದೇ ಒಂದು ಕರೆಯಿಂದ 1 ಕೋಟಿ 27ಲಕ್ಷ ರೂಪಾಯಿ ಕಳೆದುಕೊಳ್ಳುವಂತಾಗಿದೆ.
ಆ ವಂಚಕರು ನಾವು TRAI & ಮುಂಬೈ ಪೊಲೀಸರು ಎಂದು ಹೇಳಿ, ನಿಮ್ಮ ಬ್ಯಾಂಕ್ ಖಾತೆ ಬಳಸಿ ಮನಿ ಲ್ಯಾಂಡರಿಂಗ್ ವಂಚನೆ ಆಗಿದೆ. ನಿಮ್ಮ ಖಾತೆಯ ಹಣದ ಆಡಿಟ್ ಮಾಡಬೇಕಿದೆ ಎಂದು ನಂಬಿಸಿದ್ದರು. ವಾಟ್ಸಪ್ ಕಾಲ್ & ನಾರ್ಮಲ್ ಕಾಲ್ ಮಾಡಿ ನಂಬಿಸಿದ್ದರು. ವೈದ್ಯರು ಅವರೇಳಿದ ನಿಯಮಗಳನ್ನು ಪಾಲನೆ ಮಾಡುತ್ತಾ ಹೋದರು. ಇದರಿಂದ ಡಾ.ಶೆಟ್ಟಿ ಅವರ ಖಾತೆಯಿಂದ ವಂಚಕರ ಖಾತೆಗೆ 1ಕೋಟಿ 27ಲಕ್ಷ ಹಣ ವರ್ಗಾವಣೆಯಾಗಿತ್ತು. ಆಮೇಲೆ ತಾವೂ ಮೋಸ ಹೋಗಿರುವುದು ಡಾ. ಶ್ರೀನಿವಾಸ ಶೆಟ್ಟಿ ಅವರಿಗೆ ತಿಳಿದಿದೆ. ಈ ಘಟನೆ ಶುಕ್ರವಾರ ನಡೆದಿದ್ದು ಈ ಸಂಬಂಧ ಅವರು ಶನಿವಾರ ಚಿತ್ರದುರ್ಗದ CEN ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.


ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್