Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ನಗರಸಭೆ ಅಧ್ಯಕ್ಷೆಯಾಗಿ ಸುಮೀತಾ.ಬಿ.ಎನ್ ಹಾಗೂ ಉಪಾಧ್ಯಕ್ಷೆಯಾಗಿ ಶ್ರೀದೇವಿ.ಜಿ.ಎಸ್ ಆಯ್ಕೆ

Facebook
Twitter
Telegram
WhatsApp

ಚಿತ್ರದುರ್ಗ. ಆಗಸ್ಟ್.26: ಚಿತ್ರದುರ್ಗ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಆಯ್ಕೆಗೆ ಸೋಮವಾರ ನಡೆದ ಚುನಾವಣೆಯಲ್ಲಿ, ಅಧ್ಯಕ್ಷರಾಗಿ ಸುಮೀತಾ.ಬಿ.ಎನ್. ಹಾಗೂ ಉಪಾಧ್ಯಕ್ಷರಾಗಿ ಶ್ರೀದೇವಿ.ಜಿ.ಎಸ್ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಘೋಷಿಸಿದರು.

ಅಧ್ಯಕ್ಷ ಸ್ಥಾನಕ್ಕೆ ಸದಸ್ಯರಾದ ಸುಮೀತಾ.ಬಿ.ಎನ್. ಹಾಗೂ ತಾರಕೇಶ್ವರಿ ಎಸ್.ಸಿ, ಉಪಾಧ್ಯಕ್ಷ ಸ್ಥಾನಕ್ಕೆ ಸದಸ್ಯರಾದ ಶ್ರೀದೇವಿ.ಜಿ.ಎಸ್ ಹಾಗೂ ರೋಹಿಣಿ.ಬಿ.ಎಸ್‌ ನಾಮಪತ್ರ ಸಲ್ಲಿಸಿದ್ದರು.

ಚಿತ್ರದುರ್ಗ ನಗರ ಸಭೆ 35 ಜನ ಚುನಾಯಿತ ಸದಸ್ಯ ಬಲ ಹೊಂದಿದೆ. ಈ ಪೈಕಿ ಓರ್ವ ಸದಸ್ಯರು ಮೃತ ಪಟ್ಟಿದ್ದರಿಂದ ಚುನಾಯಿತ ನಗರ ಸಭೆ ಸದಸ್ಯರ ಬಲ 34ಕ್ಕೆ ಇಳಿಕೆಯಾಗಿತ್ತು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ ನಗರ ಸಭೆ ವ್ಯಾಪ್ತಿ ಪ್ರತಿನಿಧಿಸುವ ವಿಧಾನಸಭಾ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹಾಜರಾಗಿದ್ದರು. ಈ ಹಿನ್ನಲೆಯಲ್ಲಿ ಸೋಮವಾರ ನಡೆದ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆ ಚುನಾವಣೆಯಲ್ಲಿ ಒಟ್ಟು 35 ಸದಸ್ಯರು ಮತ ಚಲಾಯಿಸಿದರು. ಈ ಪೈಕಿ ಸುಮೀತಾ.ಬಿ.ಎನ್ ಹಾಗೂ ಶ್ರೀದೇವಿ.ಜಿ.ಎಸ್ ತಲಾ 22 ಮತಗಳನ್ನು ಪಡೆಯುವ ಮೂಲಕ ಅನುಕ್ರಮವಾಗಿ ನಗರಸಭೆ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷೆ ಗಾದಿಗೆ ಏರಿದ್ದಾರೆ.

ಚುನಾವಣಾ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ನಗರದ ಅಭಿವೃದ್ಧಿಗಾಗಿ ಸದಸ್ಯರು ಸುಮೀತಾ.ಬಿ.ಎನ್ ಅವರನ್ನು ಅಧ್ಯಕ್ಷರಾಗಿ ಹಾಗೂ ಶ್ರೀದೇವಿ.ಜಿ.ಎಸ್ ಉಪಾಧ್ಯಕ್ಷರನ್ನಾಗಿ ಬಹುಮತದಿಂದ ಆಯ್ಕೆ ಮಾಡಿದ್ದಾರೆ. ಇವರ ಆಯ್ಕೆ ಸಹರಿಸಿದ ಎಲ್ಲಾ ಸದಸ್ಯರಿಗೆ ಧನ್ಯವಾದಗಳನ್ನು ತಿಳಿಸಿದರು.

ನೂತನ ಅಧ್ಯಕ್ಷೆ ಸುಮೀತಾ.ಬಿ.ಎನ್. ಮಾತನಾಡಿ ನಗರದ ಸ್ವಚ್ಛತೆ ಹಾಗೂ ಅಭಿವೃದ್ಧಿಗೆ ಒತ್ತು ನೀಡಿ ಕಾರ್ಯ ನಿರ್ವಹಿಸುವುದಾಗಿ ತಿಳಿಸಿದರು.

ನೂತನ ಉಪಾಧ್ಯಕ್ಷೆ ಶ್ರೀದೇವಿ.ಜಿ.ಎಸ್ ಮಾತನಾಡಿ ಶಾಸಕರ ನೇತೃತ್ವದಲ್ಲಿ ವಾರ್ಡ್‌ನಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದೇನೆ. ಮುಂದೆಯೂ ಜನಪ್ರತಿನಿಧಿಗಳ ಸಹಕಾರ ಪಡೆದು ಅಭಿವೃದ್ಧಿ ಕಾರ್ಯ ಮುಂದುವರೆಸುವುದಾಗಿ ತಿಳಿಸಿದರು.ಚುನಾವಣೆಯ ವೇಳೆ ತಹಶೀಲ್ದಾರ್ ಡಾ.ನಾಗವೇಣಿ ಹಾಗೂ ನಗರ ಸಭೆ ಆಯುಕ್ತೆ ರೇಣುಕಾ.ಎಂ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!