Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಮನೂರು ಶಿವಶಂಕರಪ್ಪ ನಕಲಿ ಸಹಿ ಬಳಸಿ ವಂಚನೆ ಮಾಡುತ್ತಿದ್ದವರ ಬಂಧನ..!

---Advertisement---

ಬೆಂಗಳೂರು: ವಂಚನೆ ಮಾಡುವ ಗ್ಯಾಂಗ್ ಗಳು ರಾಜಕೀಯ ವ್ಯಕ್ತಿಗಳ ಹೆಸರನ್ನು, ಸಹಿಯನ್ನು ಧೈರ್ಯವಾಗಿಯೇ ಬಳಸಿಕೊಳ್ಳುತ್ತಾರೆ. ಇಲ್ಲಿಬ್ಬರು ಖದೀಮರು ಭಯವೇ ಇಲ್ಲದೇ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಸಹಿಯನ್ನು ದುರ್ಬಳಕೆ ಮಾಡಿಕೊಂಡು, ಈಗ ಪೊಲೀಸರ ಅತಿಥಿಯಾಗಿದ್ದಾರೆ.

ಶಾಮನೂರು ಶಿವಶಂಕರಪ್ಪ ಅವರ ಹೆಸರಿನಲ್ಲಿ ನಕಲಿ ಸಹಿ ಬಳಸಿ, ಲೆಟರ್ ಹೆಡ್ ಸೃಷ್ಟಿಸಿದ್ದಾರೆ. ಅದೇ ಲೆಟರ್ ಹೆಡ್ ಮೂಲಕ ಕೆಲಸ ಪಡೆದುಕೊಂಡಿದ್ದ ಸ್ವಾಮಿ ಹಾಗೂ ಅಂಜನ್ ಕುಮಾರ್ ಎಂಬಾತನ ಬಂಧನವಾಗಿದೆ. ಸ್ವಾಮಿ ರಾಮನಗರ ಮೂಲದವರಾಗಿದ್ದು, ಸದ್ಯ ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.

ಸ್ವಾಮಿ ಈ ಹಿಂದೆ ವಿಧಾನಸೌಧದಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡಿಕೊಂಡಿದ್ದ. ಕೆಲವು ದಿನಗಳ ನಂತರ ಕೆಲಸ ಬಿಟ್ಟು ರಾಜಕಾರಣಿಗಳ ಒಡನಾಟ ಬೆಳೆಸಿಕೊಂಡಿದ್ದ. ಕೆಲ ದಿನಗಳ ಹಿಂದೆ ಶಾಮನೂರು ಶಿವಶಂಕರಪ್ಪ ಅವರ ಹೆಸರು ಬಳಸಿಕೊಂಡು ನಕಲಿ ಸಹಿ ಮಾಡಿರುವ ಲೆಟರ್ ಹೆಡ್ ಅನ್ನು ವಿಧಾನಸಭಾ ಸಚಿವಾಲಯಕ್ಕೆ ಕಳುಹಿಸಿಕೊಟ್ಟಿದ್ದ. ಅದರಲ್ಲಿ ವಿನುತಾ ಹಾಗೂ ಅಂಜನ್ ಎಂಬುವವರಿಗೆ ಶಾಸಕ ಆಪ್ತ ಸಹಾಯಕರ ಹುದ್ದೆ ನೀಡುವಂತೆ ಬರೆದಿತ್ತು. ಲೆಟರ್ ಹೆಡ್ ಬಳಸಿ ತಮ್ಮ ಪತ್ನಿ ವಿನುತಾಗೆ ಶಿವಶಂಕರಪ್ಪ ಆಪ್ತ ಸಹಾಯಕಿಯಾಗಿ ನೇಮಿಸಲು ಶಿಫಾರಸು ಮಾಡಲಾಗಿತ್ತು.

ವಿಧಾನಸಭಾ ಸಚಿವಾಲಯ ಸಿಬ್ಬಂದಿ ಈ ನಕಲಿ ಲೆಟರ್ ಹೆಡ್ ನಂಬಿ ವಿನುತಾಗೆ 2023ರಲ್ಲಿ ಕೆಲಸ ಕೂಡ ನೀಡಿದ್ದರು. ಕೆಲಸಕ್ಕೆ ಬಾರದೆಯೇ ಪ್ರತಿ ತಿಂಗಳು ವಿನುತಾ 30 ಸಾವಿರ ಸಂಬಳ ಪಡೆದಿದ್ದರು. ಆನಂತರ ಗರ್ಭಿಣಿಯಾದ ಮೇಲೆ ಕೆಲಸದಿಂದ ಬಿಡುಗಡೆಗೊಳಿಸಲು ವಿನುತಾ ಪತ್ರ ಬರೆದಿದ್ದರುಮ ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ಸತ್ಯಾಂಶ ಬೆಳಕಿಗೆ ಬಂದಿದೆ. ಸದ್ಯ ವಿನುತಾಗೂ ಪೊಲೀಸರು ನೋಟೀಸ್ ನೀಡಿದ್ದಾರೆ.k

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment