Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಾಮನೂರು ಶಿವಶಂಕರಪ್ಪ ನಕಲಿ ಸಹಿ ಬಳಸಿ ವಂಚನೆ ಮಾಡುತ್ತಿದ್ದವರ ಬಂಧನ..!

Facebook
Twitter
Telegram
WhatsApp

ಬೆಂಗಳೂರು: ವಂಚನೆ ಮಾಡುವ ಗ್ಯಾಂಗ್ ಗಳು ರಾಜಕೀಯ ವ್ಯಕ್ತಿಗಳ ಹೆಸರನ್ನು, ಸಹಿಯನ್ನು ಧೈರ್ಯವಾಗಿಯೇ ಬಳಸಿಕೊಳ್ಳುತ್ತಾರೆ. ಇಲ್ಲಿಬ್ಬರು ಖದೀಮರು ಭಯವೇ ಇಲ್ಲದೇ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಸಹಿಯನ್ನು ದುರ್ಬಳಕೆ ಮಾಡಿಕೊಂಡು, ಈಗ ಪೊಲೀಸರ ಅತಿಥಿಯಾಗಿದ್ದಾರೆ.

ಶಾಮನೂರು ಶಿವಶಂಕರಪ್ಪ ಅವರ ಹೆಸರಿನಲ್ಲಿ ನಕಲಿ ಸಹಿ ಬಳಸಿ, ಲೆಟರ್ ಹೆಡ್ ಸೃಷ್ಟಿಸಿದ್ದಾರೆ. ಅದೇ ಲೆಟರ್ ಹೆಡ್ ಮೂಲಕ ಕೆಲಸ ಪಡೆದುಕೊಂಡಿದ್ದ ಸ್ವಾಮಿ ಹಾಗೂ ಅಂಜನ್ ಕುಮಾರ್ ಎಂಬಾತನ ಬಂಧನವಾಗಿದೆ. ಸ್ವಾಮಿ ರಾಮನಗರ ಮೂಲದವರಾಗಿದ್ದು, ಸದ್ಯ ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.

ಸ್ವಾಮಿ ಈ ಹಿಂದೆ ವಿಧಾನಸೌಧದಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡಿಕೊಂಡಿದ್ದ. ಕೆಲವು ದಿನಗಳ ನಂತರ ಕೆಲಸ ಬಿಟ್ಟು ರಾಜಕಾರಣಿಗಳ ಒಡನಾಟ ಬೆಳೆಸಿಕೊಂಡಿದ್ದ. ಕೆಲ ದಿನಗಳ ಹಿಂದೆ ಶಾಮನೂರು ಶಿವಶಂಕರಪ್ಪ ಅವರ ಹೆಸರು ಬಳಸಿಕೊಂಡು ನಕಲಿ ಸಹಿ ಮಾಡಿರುವ ಲೆಟರ್ ಹೆಡ್ ಅನ್ನು ವಿಧಾನಸಭಾ ಸಚಿವಾಲಯಕ್ಕೆ ಕಳುಹಿಸಿಕೊಟ್ಟಿದ್ದ. ಅದರಲ್ಲಿ ವಿನುತಾ ಹಾಗೂ ಅಂಜನ್ ಎಂಬುವವರಿಗೆ ಶಾಸಕ ಆಪ್ತ ಸಹಾಯಕರ ಹುದ್ದೆ ನೀಡುವಂತೆ ಬರೆದಿತ್ತು. ಲೆಟರ್ ಹೆಡ್ ಬಳಸಿ ತಮ್ಮ ಪತ್ನಿ ವಿನುತಾಗೆ ಶಿವಶಂಕರಪ್ಪ ಆಪ್ತ ಸಹಾಯಕಿಯಾಗಿ ನೇಮಿಸಲು ಶಿಫಾರಸು ಮಾಡಲಾಗಿತ್ತು.

ವಿಧಾನಸಭಾ ಸಚಿವಾಲಯ ಸಿಬ್ಬಂದಿ ಈ ನಕಲಿ ಲೆಟರ್ ಹೆಡ್ ನಂಬಿ ವಿನುತಾಗೆ 2023ರಲ್ಲಿ ಕೆಲಸ ಕೂಡ ನೀಡಿದ್ದರು. ಕೆಲಸಕ್ಕೆ ಬಾರದೆಯೇ ಪ್ರತಿ ತಿಂಗಳು ವಿನುತಾ 30 ಸಾವಿರ ಸಂಬಳ ಪಡೆದಿದ್ದರು. ಆನಂತರ ಗರ್ಭಿಣಿಯಾದ ಮೇಲೆ ಕೆಲಸದಿಂದ ಬಿಡುಗಡೆಗೊಳಿಸಲು ವಿನುತಾ ಪತ್ರ ಬರೆದಿದ್ದರುಮ ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ಸತ್ಯಾಂಶ ಬೆಳಕಿಗೆ ಬಂದಿದೆ. ಸದ್ಯ ವಿನುತಾಗೂ ಪೊಲೀಸರು ನೋಟೀಸ್ ನೀಡಿದ್ದಾರೆ.k

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!