Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಪ್ರಕೃತಿ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

---Advertisement---

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 26 : ನಗರದ ಬಿ ಎಲ್ ಗೌಡ ಲೇಔಟ್ ನಲ್ಲಿರುವ ಪ್ರಕೃತಿ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಆಗಮಿಸಿದ್ದ ಮುಖ್ಯ ಅತಿಥಿಗಳು ಮತ್ತು ವೇದಿಕೆ ಮೇಲೆ ಉಪಸ್ಥಿತರಿದ್ದ ಎಲ್ಲಾ ಗಣ್ಯರಿಂದ ಶ್ರೀ ಕೃಷ್ಣನ ಭಾವಚಿತ್ರಕ್ಕೆ ಪುಷ್ಪಾರ್ಚನೆಯ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಪುಟಾಣಿ ಮಕ್ಕಳು ಮತ್ತು ಅವರ ತಾಯಂದಿರು ಕೃಷ್ಣ,ರಾಧೆ ಮತ್ತು ಯಶೋಧೆ ವೇಷವನ್ನು ಧರಿಸಿ ಪ್ರದರ್ಶನ ನೀಡಿದರು. ಉತ್ತಮ ಪ್ರದರ್ಶನ ತೋರಿದ ಮಕ್ಕಳಿಗೆ ಬಹುಮಾನ ಹಾಗೂ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಪಾರಿತೋಷಕ ವಿತರಿಸಲಾಯಿತು.

ಪೂರ್ವ ಪ್ರಾರ್ಥಮಿಕ ಮಕ್ಕಳಿಂದ ಭಗವದ್ಗೀತೆ ಪಠಣ ಶ್ರೀ ಕೃಷ್ಣನ ಭಕ್ತಿ ಗೀತೆಗೆ ನೃತ್ಯವನ್ನು ಮಾಡಿದರು ಹಾಗೂ ಆರನೇ ತರಗತಿಯ ವಿದ್ಯಾರ್ಥಿನಿಯರು ಶ್ರೀಕೃಷ್ಣ ಸುಧಾಮ ನಾಟಕವನ್ನು ಅಮೋಘವಾಗಿ ಪ್ರದರ್ಶಿಸಿದರು.

ಐದನೇ ತರಗತಿಯ ವಿದ್ಯಾರ್ಥಿ ಶ್ರೀನಿಧಿ. ಎಸ್ ಕೃಷ್ಣನ ಭಕ್ತಿ ಗೀತೆಗಳು ಸುಶಾವ್ಯವಾಗಿ ಹಾಡಿ ಎಲ್ಲರ ಮನ ರಂಜಿಸಿದಳು.

ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ್ದ ಶ್ರೀಮತಿ ಸುಮನ. ಬಿ.ಕೆ, ಸಂಸ್ಕೃತ ಶಿಕ್ಷಕರು ಕಬೀರಾನಂದ ಆಶ್ರಮ ಇವರು ಮಾತನಾಡುತ್ತ ಕೃಷ್ಣನ ಬಾಲ ಲೀಲೆಗಳನ್ನು ಮಕ್ಕಳಿಗೆ ತಿಳಿಸುತ್ತಾ ಪ್ರಾಮಾಣಿಕತೆ ಇರುವಲ್ಲಿ ಶ್ರೀ ಕೃಷ್ಣ ಇರುತ್ತಾನೆ ಮಕ್ಕಳಿಗೆ ಪ್ರಾಮಾಣಿಕತೆ ಬಹಳ ಮುಖ್ಯ ಎಂದು ತಿಳಿಸುತ್ತಾ ಅತ್ಯಂತ ಕಷ್ಟಕರವಾದ ಕೆಲಸ ತೀರ್ಪುಗಾರಿಕೆಯನ್ನು ಕೂಡ ಅಚ್ಚುಕಟ್ಟಾಗಿ ನಡೆಸಿಕೊಟ್ಟರು.

ಮುಖ್ಯೋಪಾಧ್ಯಾಯರಾದ ಶ್ರೀಮತಿ ಎಂ.ಎಸ್ ಶಶಿಕಲಾ ರವರು ಪ್ರಾಸ್ತಾವಿಕ ನುಡಿಗಳನ್ನು ಮಾತನಾಡುತ್ತಾ ಶ್ರೀ ಕೃಷ್ಣನ ಲೀಲೆಗಳನ್ನು ತಿಳಿಸಿದರು. ವಿವೇಕವಿದ್ದಲ್ಲಿ ಶ್ರೀ ಕೃಷ್ಣನು ಇರುತ್ತಾನೆ ಆದ್ದರಿಂದ ವಿದ್ಯಾರ್ಥಿಗಳು ವಿದ್ಯೆಯೊಂದಿಗೆ ವಿನಯ ವಿವೇಕಗಳನ್ನು ಬೆಳೆಸಿಕೊಳ್ಳಲು ಕರೆ ನೀಡಿದರು.

ಈ ಕಾರ್ಯಕ್ರಮಕ್ಕೆ ನಮ್ಮ ಶಾಲೆಯ ಅಧ್ಯಕ್ಷರಾದ ಶ್ರೀಯುತ ಎಂ.ಕೆ ರವೀಂದ್ರ ಕಾರ್ಯದರ್ಶಿಗಳಾದ ಶ್ರೀಯುತ ಎಂ.ಕಾರ್ತಿಕ್ ಸಹಕಾರ್ಯದರ್ಶಿಗಳಾದ ಶ್ರೀಯುತ ಟಿ.ಎನ್ ಮಾರುತಿ ಮೋಹನ್ ಖಜಾಂಚಿಗಳು ಮತ್ತು ಆಡಳಿತಾಧಿಕಾರಿಗಳಾದ ಶ್ರೀಮತಿ ಶ್ವೇತ ಕಾರ್ತಿಕ್ ಮತ್ತು ಟ್ರಸ್ಟಿಗಳಾದ ಶ್ರೀಯುತ ಡಾ ಮಧುಸೂದನ್ ರೆಡ್ಡಿ ಉಪಸ್ಥಿತರಿದ್ದರು.

ಈ ಕಾರ್ಯಕ್ರಮದ ನಿರೂಪಣೆಯನ್ನು ಶಾಲೆಯ ವಿದ್ಯಾರ್ಥಿಗಳಾದ ಕುಮಾರಿ ಕೃತಿಕ.ವಿ ಮತ್ತು ಕುಮಾರ ವರುಣ್ ಬಿ.ಆರ್ ಅಚ್ಚುಕಟ್ಟಾಗಿ ನಡೆಸಿಕೊಟ್ಟರು.

ಕಾರ್ಯಕ್ರಮವನ್ನು ಧನ್ಯ. ಎಲ್. ನಾಯ್ಡು ಮತ್ತು ದಿವ್ಯಶ್ರೀ ಬಿ.ಆರ್. ರವರು ಪ್ರಾರ್ಥಿಸಿದರು. ಶಿಕ್ಷಕಿ ಶ್ರೀಮತಿ ಸುಮನ. ಏ. ಸ್ವಾಗತಿಸಿದರು. ಕಾರ್ತಿಕ್. ಎಂ ರವರು ವಂದನಾರ್ಪಣೆಯನ್ನು ಮಾಡಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಚಾಣಕ್ಯನೀತಿ : ಬುದ್ಧಿವಂತಿಕೆ ಇದ್ದರೂ ಈ 5 ತಪ್ಪು ಮಾಡಬೇಡಿ; ಜೀವನದಲ್ಲಿ ಕಷ್ಟಗಳು ಎದುರಾಗಬಹುದು!

ಆಗಸ್ಟ್ 17ರ ದಿನ ಭವಿಷ್ಯ: ಈ ರಾಶಿಯವರಿಗೆ ಇಂದು ಶುಭಫಲ, ಹಣಕಾಸಿನಲ್ಲಿ ಲಾಭದ ಯೋಗ!

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

Leave a Comment