Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯೋಗ್ಯತೆಗೆ ತಕ್ಕ ಹುದ್ದೆ ಸಿಗದಿದ್ದರೆ ಪ್ರಜಾಪ್ರಭುತ್ವಕ್ಕೆ ಅರ್ಥವಿರುವುದಿಲ್ಲ : ರುದ್ರಪ್ಪ ಹನಗವಾಡಿ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 26 : ಪದವಿಯ ಜೊತೆ ಜ್ಞಾನ ಸಂಪಾದನೆ ಮುಖ್ಯ ಎಂದು ನಿವೃತ್ತ ಅರ್ಥಶಾಸ್ತ್ರ ಪ್ರಾಧ್ಯಾಪಕ ಕುವೆಂಪು ವಿಶ್ವವಿದ್ಯಾನಿಲಯದ ಪ್ರೊ.ಹೆಚ್.ಜಿ.ದೇವರಾಜ್ ಹೇಳಿದರು.

ಪ್ರೊ.ಹೆಚ್.ಜಿ.ದೇವರಾಜ್‍ರವರು ತಮ್ಮ 82 ನೇ ಜನ್ಮದಿನದ ಅಂಗವಾಗಿ ಪ್ರೊ.ಟಿ.ಹೆಚ್.ಕೃಷ್ಣಮೂರ್ತಿ, ಡಾ.ಟಿ.ಆರ್.ಮಂಜುನಾಥ್ ಹಾಗೂ ನೂರಾರು ಅರ್ಥಶಾಸ್ತ್ರ ಪ್ರಾಧ್ಯಾಪಕರು ಚಿಂತಕರ ಬಳಗದಿಂದ ದುರ್ಗದ ಸಿರಿಯಲ್ಲಿ ಗೌರವ ಸಮರ್ಪಣೆ ಸ್ವೀಕರಿಸಿ ಮಾತನಾಡಿದರು.

ನಾಡಿನ ಎಲ್ಲಾ ಕಾಲೇಜುಗಳಲ್ಲಿಯೂ ಅರ್ಥಶಾಸ್ತ್ರದ ಬಗ್ಗೆ ಉಪನ್ಯಾಸ ನೀಡಿದ್ದೇನೆ. ವಿದೇಶಿ ಕಂಪನಿಗಳು ನಮ್ಮ ದೇಶವನ್ನು ಹೇಗೆ ಶೋಷಣೆ ಮಾಡುತ್ತಿವೆ ಎನ್ನುವ ಬಗ್ಗೆ ವಿದ್ಯಾರ್ಥಿಗಳು ಹಾಗೂ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಿದ್ದೇನೆ. ಅಧ್ಯಯನಶೀಲರಾಗಬೇಕೆಂದು ತಿಳಿಸಿದರು.

ಕೆ.ಪಿ.ಎಸ್.ಸಿ. ಮಾಜಿ ಸದಸ್ಯ ಪ್ರೊ.ಎಂ.ಮಹದೇವ ಮಾತನಾಡಿ ಅರ್ಥಶಾಸ್ತ್ರ ಬೆಳೆಸುವುದರಲ್ಲಿ ಎಲ್ಲರ ಪಾತ್ರವಿದೆ. ಪ್ರೊ.ಹೆಚ್.ಜಿ.ದೇವರಾಜ್‍ರವರು ಅರ್ಥಶಾಸ್ತ್ರದಲ್ಲಿ ಎತ್ತರಕ್ಕೆ ಬೆಳೆದಿದ್ದಾರಲ್ಲದೆ ಮೈಸೂರು ವಿಶ್ವವಿದ್ಯಾನಿಲಯವನ್ನು ಎತ್ತರಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಪ್ರಾಥಮಿಕ ಶಾಲಾ ಶಿಕ್ಷಕರಾಗಿ ವೃತ್ತಿ ಆರಂಭಿಸಿದ ಅವರು ಅರ್ಥಶಾಸ್ತ್ರದಲ್ಲಿ ಅಪಾರ ಪಾಂಡಿತ್ಯ ಪಡೆದು ನೂರಾರು ಶಿಷ್ಯ ವೃಂದದವರನ್ನು ಹೊಂದಿದ್ದಾರೆಂದು ಗುಣಗಾನ ಮಾಡಿದರು.

ಪ್ರೊ.ಹೆಚ್.ಜಿ.ದೇವರಾಜ್‍ರವರಲ್ಲಿ ಬದ್ದತೆ, ಶ್ರೇಷ್ಠತೆ, ಪ್ರಾಮಾಣಿಕತೆಯಿದ್ದುದರಿಂದ ಆರ್ಥಶಾಸ್ತ್ರದಲ್ಲಿ ದೊಡ್ಡ ಹೆಮ್ಮರವಾಗಿ ಬೆಳೆಯಲು ಸಾಧ್ಯವಾಯಿತು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ನಿವೃತ್ತ ಹಿರಿಯ ಕೆ.ಎ.ಎಸ್.ಅಧಿಕಾರಿ ರುದ್ರಪ್ಪ ಹನಗವಾಡಿ ಮಾತನಾಡಿ ಪ್ರೊ.ಹೆಚ್.ಜಿ.ದೇವರಾಜ್‍ರವರ ಸಾಧನೆ ಹಿಂದೆ ಅವರ ಕುಟುಂಬದವರ ಕೊಡುಗೆಯಿದೆ. ವಿಶ್ವವಿದ್ಯಾನಿಲಯ, ದೇಶ ಕಟ್ಟುವ ಶಕ್ತಿ ಅವರಲ್ಲಿದೆ. ಮತ್ತೊಬ್ಬರಲ್ಲಿರುವ ಮೌಲ್ಯವನ್ನು ಗೌರವಿಸಬೇಕು. ಯೋಗ್ಯತೆಗೆ ತಕ್ಕ ಹುದ್ದೆ ಯಾರಿಗಾದರೂ ಸಿಗದಿದ್ದರೆ ಪ್ರಜಾಪ್ರಭುತ್ವಕ್ಕೆ ಅರ್ಥವಿರುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕುವೆಂಪು ವಿಶ್ವವಿದ್ಯಾನಿಲಯ ವಿಶ್ರಾಂತ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ, ಟಿ.ಆರ್.ಮಂಜುನಾಥ್ ವೇದಿಕೆಯಲ್ಲಿದ್ದರು.

ಡಾ.ರಾಘವೇಂದ್ರ, ಪ್ರೊ.ಹೆಚ್.ಲಿಂಗಪ್ಪ, ಪ್ರೊ.ನಾಗರಾಜ್, ಪ್ರೊ.ವೀರಭದ್ರಪ್ಪ ಜಿ.ಸಿ. ಆರ್ಥಿಕ ಚಿಂತಕ ಜಿ.ಎನ್.ಮಲ್ಲಿಕಾರ್ಜುನಪ್ಪ, ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಸದಸ್ಯ ದುಗ್ಗಪ್ಪ ಗೆಳೆಯರ ಬಳಗ ಹಾಗೂ ಪ್ರೊ.ಹೆಚ್.ಜಿ.ದೇವರಾಜ್‍ರವರ ಕುಟುಂಬದವರು ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿದ್ದರು.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

ದಾವಣಗೆರೆಯಲ್ಲಿ ಸೆಪ್ಟೆಂಬರ್ 20 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ,ಸೆಪ್ಟೆಂಬರ್.19 : ನ್ಯಾಷನಲ್ ಹೈವೇನಲ್ಲಿ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ಇರುವುದರಿಂದ ಸೆಪ್ಟೆಂಬರ್ 20 ರಂದು ಬೆಳ್ಳಿಗ್ಗೆ 10 ರಿಂದ ಸಂಜೆ 5 ರವರೆಗೆ ಶಾಮನೂರು, ಬನಶಂಕರಿ ಬಡಾವಣೆ, ಶಿವ ಪಾರ್ವತಿ ಬಡಾವಣೆ, ಜೆ.ಹೆಚ್ ಪಟೇಲ್

error: Content is protected !!