Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಿಟ್ಟೂರು ರೈಲ್ವೆ ಗೇಟ್ ಮೇಲ್ಸೇತುವೆ ನಿರ್ಮಾಣ | ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ, ಪರಿಶೀಲನೆ

---Advertisement---

 

ಗುಬ್ಬಿ: ತಾಲೂಕಿನ ನಿಟ್ಟೂರು ರೈಲ್ವೆ ಗೇಟ್ ಬ್ರಿಡ್ಜ್ ಮಾಡುವುದಕ್ಕೆ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆ ಮಾಡಲಾಗಿದ್ದು ಸ್ಥಳಕ್ಕೆ ಕೇಂದ್ರ ಸಚಿವ ವಿ ಸೋಮಣ್ಣ ಭೇಟಿ ನೀಡಿ ಪರಿಶೀಲನೆ ಮಾಡಿದರು.

ರೈಲ್ವೆ ಬ್ರಿಡ್ಜ್ ಹಾಗೂ ಸ್ಥಳೀಯರು ಒಂದಷ್ಟು ಜಾಗವನ್ನು ಬಿಟ್ಟುಕೊಟ್ಟರೆ ಪಕ್ಕದಲ್ಲಿಯೇ ಸರ್ವಿಸ್ ರಸ್ತೆಯನ್ನು ಸಹ ಮಾಡಿ ಸಾರ್ವಜನಿಕರಿಗೆ ಅನುಕೂಲವಾಗುವಂತಹ ಕೆಲಸ ಮಾಡುತ್ತೇವೆ.ಯಾವುದೇ ಕಾರಣಕ್ಕೂ ಕಲ್ಲೇಶ್ವರ ಸ್ವಾಮಿ ದೇವಸ್ಥಾನ ತೆರವಾಗುವುದಿಲ್ಲ ಎಂದು ತಿಳಿಸಿದರು.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಶೇಖರ್ ಬಾಬು ಮಾತನಾಡಿ ನಿಟ್ಟೂರು ಕಡಬ ಮೈಸೂರಿಗೆ ತೆರಳುವಂತಹ ಭಾಗದಲ್ಲಿ ನಿಟ್ಟೂರು ರೈಲ್ವೆ ನಿಲ್ದಾಣ ಪಕ್ಕದಲ್ಲಿ ರೈಲ್ವೆ ಗೇಟ್ ಇದ್ದು ಸಾಕಷ್ಟು ರೀತಿಯ ಸಮಸ್ಯೆ ಈ ಭಾಗದಲ್ಲಿ ನಿರ್ಮಾಣವಾಗುತ್ತಿತ್ತು ಈಗ ರೈಲ್ವೆ ಬ್ರಿಡ್ಜ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಮತ್ತು ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಇದೆ ಸಂದರ್ಭದಲ್ಲಿ ಬ್ಯಾಟರಂಗೆ ಗೌಡ, ಮುಖಂಡರಾದ ಎಸ್ ಡಿ ದಿಲೀಪ್ ಕುಮಾರ್, ಎನ್ ಸಿ ಪ್ರಕಾಶ್, ಜಿ ಎನ್ ಬೆಟ್ಟ ಸ್ವಾಮಿ ಬಿಜೆಪಿ ಅಧ್ಯಕ್ಷ ಪಂಚಾಕ್ಷರಿ, ಡಿಸಿ ಸಿ ಬ್ಯಾಂಕ್ ನಿರ್ದೇಶಕ ಪ್ರಭಾಕರ್ ಸೇರಿದಂತೆ ಜೆಡಿಎಸ್ ಬಿಜೆಪಿ ಹಲವು ಮುಖಂಡರುಗಳು ಭಾಗಿಯಾಗಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment