Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶ್ರೀಕೃಷ್ಣನ ತತ್ವ ಆದರ್ಶಗಳು ಸರ್ವಕಾಲಕ್ಕೂ ಪ್ರಸ್ತುತ : ಶಾಸಕ ಟಿ ರಘುಮೂರ್ತಿ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಆಗಸ್ಟ್. 26 : ಪಂಚಭೂತಗಳಿಂದ ಪಂಚೇಂದ್ರಿಯ ಮೂಲಕ ಅರಿಶಡ್ವರ್ಗಗಳನ್ನು ನಿಯಂತ್ರಿಸಿ ಸಮಾಜಕ್ಕೆ ಉತ್ತಮ ಸಂದೇಶ ನೀಡಲು ತಮ್ಮ ಜೀವನವನ್ನು ಮುಡುಪಾಗಿಟ್ಟು ಸಮಾಜದ ಏಳಿಗೆಗಾಗಿ ದಾರ್ಶನಿಕರು ಶ್ರಮಿಸಿದ್ದರಿಂದಲೇ ದೇಶದಲ್ಲಿ ರಾಮಾಯಣ ಮಹಾಭಾರತ ಕಾವ್ಯಗಳು ಸೃಷ್ಟಿಯಾಗಲು ಸಾಧ್ಯವಾಯಿತು ಎಂದು ಶಾಸಕ ಟಿ ರಘುಮೂರ್ತಿ ತಿಳಿಸಿದರು‌‌.

ನಗರದ ತಾಲೂಕು ಕಚೇರಿ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು ಎಲ್ಲಾ ಸಮುದಾಯಗಳಲ್ಲಿ ದಾರ್ಶನಿಕರು ಜನಿಸಿ ಆ ಸಮುದಾಯದ ಏಳಿಗೆಗಾಗಿ ಶ್ರಮಿಸಿದರೂ ಸಹ ಅವರ ತತ್ವ ಆದರ್ಶಗಳು ಜಾತಿ ರಹಿತವಾಗಿದ್ದುದರಿಂದ ಇಂದು ಮಹಾತ್ಮರಾಗಿದ್ದಾರೆ ಸರ್ಕಾರ ಎಲ್ಲಾ ಜಾತಿಗಳ ಮಹನೀಯರ ಜಯಂತಿಗಳನ್ನು ಆಚರಿಸುವ ಉದ್ದೇಶ ಅವರ ತತ್ವಗಳನ್ನು ನಾವು ಅಳವಡಿಸಿಕೊಂಡು ಜೀವನದಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂಬುದಾಗಿದೆ. ತಾಲೂಕಿನಲ್ಲಿ ಗೊಲ್ಲ ಸಮುದಾಯದ ಸಮುದಾಯ ಭವನ ನಿರ್ಮಾಣ ಹಂತದಲ್ಲಿದ್ದು ಶ್ರೀ ಕೃಷ್ಣ ವೃತ್ತ ನಿರ್ಮಿಸಲು ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕಾಡುಗೊಲ್ಲ ಸಮುದಾಯದ ತಾಲೂಕು ಅಧ್ಯಕ್ಷ ಎಸ್ ರವಿಕುಮಾರ್ ಮಾತನಾಡಿ ವಿಶ್ವದಲ್ಲೆಡೆ ಆಚರಿಸುವ ಏಕೈಕ ಹಬ್ಬವೆಂದರೆ ಶ್ರೀ ಕೃಷ್ಣ ಜನ್ಮಾಷ್ಟಮಿಯಾಗಿದೆ ಈ ಹಬ್ಬವನ್ನು ಜಾತಿ ಮತ ಧರ್ಮದ ಹಂಗಿಲ್ಲದೆ ಎಲ್ಲಾ ಸಮುದಾಯದ ಜನರು ಪಾಲ್ಗೊಂಡು ಆಚರಿಸುತ್ತಾರೆ ಇಂತಹ ಸಮುದಾಯದಲ್ಲಿ ಹುಟ್ಟಿರುವುದು ಹೆಮ್ಮೆ ಪಡುವಂತಹ ವಿಷಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ರೆಹಾನ್ ಪಾಷ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿವೃತ್ತ ಶಿಕ್ಷಕ ಮೂಡಲಗಿರಿಯಪ್ಪ ಶ್ರೀ ಕೃಷ್ಣ ಜಯಂತಿಯ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿ ಗಳಾದ ರೇಹಾನ್ ಪಾಷಾ, ನಗರಸಭೆ ಪೌರಾಯುಕ್ತರಾದ ಜಗ್ಗರೆಡ್ಡಿ, ಡಿವೈಎಸ್ಪಿ ರಾಜಣ್ಣ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ರವಿಕುಮಾರ್, ತಾಲೂಕು ಗ್ಯಾರೆಂಟಿ ಸಮಿತಿ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ನಗರಸಭೆ ಸದಸ್ಯರಾದ ಸಾವಿತ್ರಮ್ಮ, ರಮೇಶ್ ಗೌಡ, ರಾಘವೇಂದ್ರ, ನಾಮ ನಿರ್ದೇಶನ ಸದಸ್ಯರಾದ ವೀರಭದ್ರಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಯ್ಯ, ಶಶಿಧರ, ಮುಖಂಡರುಗಳಾದ ಸಿರಿಯಪ್ಪ, ಶಿವಣ್ಣ, ಮಂಜುನಾಥ್, ಮೂಡಲಗಿರಿಯಪ್ಪ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ಸಮುದಾಯದವರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!