Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

‘ಭಾಗ್ಯಲಕ್ಷ್ಮೀ’ ಕುಸುಮಾಗೆ 3 ತಿಂಗಳು ಜೈಲು.. 40 ಲಕ್ಷ ದಂಡ..!

Facebook
Twitter
Telegram
WhatsApp

ಕನ್ನಡ ಕಿರುತೆರೆಯಾಗಲಿ.. ಹಿರಿತೆರೆಯಾಗಲಿ ಅಮ್ಮನ ಪಾತ್ರಕ್ಕೆ ಜೀವ ತುಂಬುವಲ್ಲಿ ಮನೆ ಮಾತಾಗಿರುವುದು ಪದ್ಮಜಾ ರಾವ್. ಬಹುಬೇಡಿಕೆಯ ನಟಿ. ಆದರೆ ಇದೀಗ ಚೆಕ್ ಬೌನ್ಸ್ ಕೇಸಲ್ಲಿ ನಟಿ ಪದ್ಮಜಾ ರಾವ್ ಅವರಿಗೆ ಮೂರು ತಿಂಗಳು ಜೈಲು ಶಿಕ್ಷೆಯಾಗಿದೆ. ಜೊತೆಗೆ 40 ಲಕ್ಷ ದಂಡವನ್ನು ವಿಧಿಸಲಾಗಿದೆ.

ಅಷ್ಟಕ್ಕೂ ಯಾವುದಿದು ಚೆಕ್ ಬೌನ್ಸ್ ಕೇಸ್ ಅಂದರೆ ಕೊಂಚ 2020ರ ಆಸುಪಾಸಿಗೆ ಮರಳಬೇಕಾಗುತ್ತದೆ. ಪದ್ಮಜಾ ರಾವ್ ಆ ಸಮಯದಲ್ಲಿ 40 ಲಕ್ಷ ಕೈ ಸಾಲ ಪಡೆದುಕೊಂಡಿದ್ದರು. ಅದಕ್ಕೆ ಭದ್ರತೆಯಾಗಿ ತಮ್ಮ ಖಾತೆಗೆ ಸಂಬಂಧಿಸಿದ ಚೆಕ್ ಅನ್ನು ನೀಡಿದ್ದರು. ವೀರೂ ಟಾಕೀಸ್ ಸಂಸ್ಥೆಯ ಮಾಲೀಕ ವಿರೇಂದ್ರ ಶೆಟ್ಟಿಗೆ ಈ ಚೆಕ್ ನೀಡಿದ್ದರು. ಚೆಕ್ ಬ್ಯಾಂಕಿಗೆ ಹಾಕಿದಾಗ ಬೌನ್ಸ್ ಆಗಿತ್ತು. ಪ್ರಕರಣದ ವಿರುದ್ಧ ವೀರೇಂದ್ರ ಶೆಟ್ಟಿ ಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣದ ವಿಚಾರಣೆಯನ್ನು ನಡೆಸಿದ್ದ ಮಂಗಳೂರು ಐದನೇ ಜೆಎಂಎಫ್ ನ್ಯಾಯಾಲಯ ಪದ್ಮಜಾ ರಾವ್ ಅವರಿಗೆ ನೋಟೀಸ್ ನೀಡಿತ್ತು. ಮೂರು ಬಾರಿ ನೋಟೀಸ್ ನೀಡಿದರು ಪದ್ಮಜಾ ರಾವ್ ಅವರು ನೋಟೀಸ್ ಗೆ ಯಾವುದೇ ರೀತಿಯ ಉತ್ತರ ನೀಡಿರಲಿಲ್ಲ. 2021ರಲ್ಲಿಯೇ ನ್ಯಾಯಾಲಯ ಪದ್ಮಜಾ ರಾವ್ ಅವರ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಹೊರಡಿಸಿತ್ತು. ಬಳಿಕ ಕೋರ್ಟ್ ಗೆ ಹಾಜರಾಗಿ ಜಾಮೀನನ್ನು ಪಡೆದಿದ್ದರು. ಅದೇ ಸಮಯದಲ್ಲಿ ಪದ್ಮಜಾ ರಾವ್ ಅವರ ಪರ ವಕೀಲರು, ಈ ಚೆಕ್ ಕಳವು ಮಾಡಿ, ಸಹಿಯನ್ನು ಫೋರ್ಜರಿ ಮಾಡಿದ್ದಾರೆ ಎಂದಿದ್ದರು. ಆದರೆ ಅದಕ್ಕೆ ಪೂರಕವಾದ ಸಾಕ್ಷಿಗಳನ್ನು ಒದಗಿಸಲು ವಿಫಲರಾದರು.

ಈ ಸಂಬಂಧ ಇದೀಗ ಪದ್ಮಜಾ ರಾವ್ ಅವರಿಗೆ 40 ಲಕ್ಷದ 20 ಸಾವಿರ ದಂಡ ವಿಧಿಸಿರುವ ಕೋರ್ಟ್ 40 ಲಕ್ಷದ 17 ಸಾವಿರ ದೂರುದಾರರಿಗೆ ಇನ್ನುಳಿದ 3 ಸಾವಿರ ಸರ್ಕಾರಕ್ಕೆ ಪಾವತಿಸಬೇಕೆಂದು ತಿಳಿಸಿದೆ. ಜೊತೆಗೆ ಮೂರು ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!