Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

KAS ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ : ಪರೀಕ್ಷೆ ಮುಂದೂಡಲು ಒತ್ತಾಯ..!

Facebook
Twitter
Telegram
WhatsApp

ಬಳ್ಳಾರಿ: ಇಂದು ನಡೆದ ಕೆಎಎಸ್ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಇದರ ಹಿನ್ನೆಲೆ ಪರೀಕ್ಷಾರ್ಥಿಗಳು ಕೆಪಿಎಸ್ಸಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಬಳ್ಳಾರಿಯ ಸೆಂಟ್ ಜಾನ್ಸ್ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಡೆದ ಪರೀಕ್ಷೆಯಲ್ಲು ಓಪನ್ ಆಗಿರುವ ಪ್ರಶ್ನೆ ಪತ್ರಿಕೆಯನ್ನು ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಪರೀಕ್ಷಾ ಕೇಂದ್ರಕ್ಕೆ ಬರುವ ಮುಂಚೆಯೇ ಪ್ರಶ್ನೆ ಪತ್ರಿಲೆ ಸೀಲ್ ಓಪನ್ ಆಗಿತ್ತು. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾರ್ಥಿಗಳು ಪ್ರಶ್ನೆ ಮಾಡಿದರು ಆಮೇಲೆ ನೋಡೋಣಾ ಎಂದು ಕೊಠಡಿ ಮೇಲ್ವಿಚಾರಕರಯ ಸಮಜಾಯಿಷಿ ನೀಡಿದ್ದರಂತೆ. ಹೀಗಾಗಿ ಪರೀಕ್ಷೆ ಬರೆದು ಹೊರಗೆ ಬಂದ ಮೇಲೆ ಪರೀಕ್ಷಾರ್ಥಿಗಳು ಕಿಡಿಕಾರಿದ್ದಾರೆ. ಸೆಂಟ್ ಜಾನ್ ಪದವಿ ಪೂರ್ವ ಕಾಲೇಜಿನ ರೂಂ ನಂಬರ್ 18 ಮತ್ತು 19 ಕೊಠಡಿಯಲ್ಲಿ ಓಪನ್ ಆಗಿರುವ ಪ್ರಶ್ನೆ ಪತ್ರಿಕೆಗಳು ಬಂದಿರುವ ಬಗ್ಗೆ ಆರೋಪಿಸಿದ್ದಾರೆ. ಹೀಗಾಗಿಯೇ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಅಭ್ಯರ್ಥಿಗಳು ಆರೋಪಿಸಿದ್ದಾರೆ.

ಇನ್ನು ಬೆಳಗಾವಿಯಲ್ಲೂ ಪರೀಕ್ಷೆಯಲ್ಲಿ ಯಡವಟ್ಟಾಗಿರುವುದು ಕಂಡು ಬಂದಿದೆ. ಕೆಎಎಸ್ ಎ ಮತ್ತು ಬಿ ವೃಂದದ ಪರೀಕ್ಷೆ ವೇಳೆ ಯಡವಟ್ಟಾಗಿದೆ. ಪ್ರಶ್ನೆ ಪತ್ರಿಕೆ ನೀಡುವುದಕ್ಕೆ 15 ನಿಮಿಷ ತಡ ಮಾಡಿದ್ದಾರಂತೆ. ಹೀಗಾಗಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಪ್ರಶ್ನೆ ಪತ್ರಿಕೆ ಅದಲು ಬದಲಾಗಿದೆ ಎಂದು ಅಭ್ಯರ್ಥಿಗಳು ಕಿಡಿಕಾರಿದ್ದು, ಕೆಲ ಕಾಲ ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಬೆಳಗಾವಿಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷಬ್ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

ದಾವಣಗೆರೆಯಲ್ಲಿ ಸೆಪ್ಟೆಂಬರ್ 20 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ,ಸೆಪ್ಟೆಂಬರ್.19 : ನ್ಯಾಷನಲ್ ಹೈವೇನಲ್ಲಿ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ಇರುವುದರಿಂದ ಸೆಪ್ಟೆಂಬರ್ 20 ರಂದು ಬೆಳ್ಳಿಗ್ಗೆ 10 ರಿಂದ ಸಂಜೆ 5 ರವರೆಗೆ ಶಾಮನೂರು, ಬನಶಂಕರಿ ಬಡಾವಣೆ, ಶಿವ ಪಾರ್ವತಿ ಬಡಾವಣೆ, ಜೆ.ಹೆಚ್ ಪಟೇಲ್

error: Content is protected !!