Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಪಕ್ವತೆ ಹಾಗೂ ನಿಖರವಾಗಿ ಜಾನುವಾರುಗಳ ಗಣತಿ ಮಾಡಿ : ಎಡಿಸಿ ಬಿ.ಟಿ.ಕುಮಾರಸ್ವಾಮಿ

---Advertisement---

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 27 : ಜಾನುವಾರುಗಳ ಗಣತಿಯನ್ನು ಪಕ್ವತೆ ಹಾಗೂ ನಿಖರವಾಗಿ ಮಾಡಿದಾಗ ಸರ್ಕಾರ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಸುಲಭವಾಗುತ್ತದೆಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ವತಿಯಿಂದ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಜಾನುವಾರು ಗಣತಿದಾರರಿಗೆ ಹಾಗೂ  ಮೇಲ್ವಿಚಾರಕರಿಗೆ ಮಂಗಳವಾರ ಏರ್ಪಡಿಸಲಾಗಿದ್ದ ತರಬೇತಿ ಉದ್ಘಾಟಿಸಿ 21 ನೇ ಜಾನುವಾರು ಗಣತಿ ಸೂಚನಾ ಕೈಪಿಡಿ ಬಿಡುಗಡೆಗೊಳಿಸಿ ಮಾತನಾಡಿದರು.

ಯಾವುದೇ ಒಂದು ಗಣತಿ ದೇಶದ ಕಾರ್ಯ ಯೋಜನೆ ರೂಪಿಸಿ ಅನುಷ್ಠಾನಗೊಳಿಸಲು ಸಹಾಯವಾಗುತ್ತದೆ. ಹಾಗಾಗಿ ನಿಸ್ಪಕ್ಷಪಾತ, ನಿರ್ಧಿಷ್ಟವಾಗಿರಬೇಕು. ಆಗ ಮಾತ್ರ ಜನರ ಜೀವನ ಮಟ್ಟ ಸುಧಾರಿಸಲು ಸಾಧ್ಯ. ಆಧುನಿಕ ಯುಗದಲ್ಲಿ ಜಾನುವಾರುಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಜಾನುವಾರುಗಳು ಇಲ್ಲದಿದ್ದರೆ ರೈತರಿಲ್ಲ. ಕುರಿ, ಮೇಕೆ, ಹಸು, ಎಮ್ಮೆ ಇವುಗಳನ್ನು ಸಾಕುವುದರಿಂದ ಹಾಲು ಗೊಬ್ಬರ ಸಿಗುತ್ತದೆ. ಮನುಷ್ಯರೊಡನೆ ಪ್ರಾಣಿಗಳ ಬಾಂಧವ್ಯ ಮುಖ್ಯ ಎಂದು ತಿಳಿಸಿದರು.

ಕೃಷಿ ಪ್ರಧಾನ ದೇಶದಲ್ಲಿ ಜಾನುವಾರುಗಳಿಗೆ ಪ್ರಾಮುಖ್ಯತೆ ಕೊಡಬೇಕು. ಕಂದಾಯ ಹಾಗೂ ಪಶುಪಾಲನಾ ಇಲಾಖೆ ಒಂದಕ್ಕೊಂದು ಪೂರಕ. ಅಮೃತ ಮಹಲ್ ಕಾವಲು ಒತ್ತುವರಿಯಾಗುತ್ತಿರುವುದನ್ನು ರಕ್ಷಿಸಬೇಕಿದೆ. ಸೆ.1 ರಿಂದ ಡಿಸೆಂಬರ್‍ವರೆಗೆ ಜಾನುವಾರುಗಳ ಗಣತಿಯನ್ನು ಮಾಡಲು ಅವಕಾಶವಿದೆ. ಒಂದು ಮನೆಯನ್ನು ಬಿಡದೆ ಜಾನುವಾರುಗಳ ಗಣತಿಯಾಗಬೇಕು. ಪಶುಸಂಗೋಪನೆ ರೈತರ ಜೀವನಕ್ಕೆ ಅವಿಭಾಜ್ಯ ಅಂಗವಾಗಿರುವುದರಿಂದ ಎಲ್ಲಿಯೂ ಗೊಂದಲಕ್ಕೆ ಆಸ್ಪದ ಕೊಡದೆ ಗಣತಿ ಮಾಡಿ ಎಂದು ಜಾನುವಾರು ಗಣತಿದಾರರಿಗೆ ಹಾಗೂ ಮೇಲ್ವಿಚಾರಕರುಗಳಿಗೆ ಅಪರ ಜಿಲ್ಲಾಧಿಕಾರಿ ಕರೆ ನೀಡಿದರು.

ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ.ಎನ್.ಕುಮಾರ್ ಮಾತನಾಡುತ್ತ 1919 ರಲ್ಲಿ ಜಾನುವಾರು ಗಣತಿ ಆರಂಭಗೊಂಡಿದ್ದು, ಪ್ರತಿ ಐದು ವರ್ಷಗಳಿಗೊಮ್ಮೆ ಜಾನುವಾರುಗಳ ಗಣತಿ ಕಾರ್ಯ ನಡೆಯಲಿದೆ. ಗಣತಿ ಆಧಾರದ ಮೇಲೆ ಸರ್ಕಾರ ಬಜೆಟ್ ಸಿದ್ದಪಡಿಸಿ ಯೋಜನೆಗಳನ್ನು ರೂಪಿಸಲು ಸಹಕಾರಿಯಾಗಲಿದೆ. ಗಣತಿಗೆ ನಾಲ್ಕು ತಿಂಗಳ ಅವಧಿಯಿದ್ದು, ನಿಖರತೆಯಿಂದ ಕೂಡಿರಬೇಕು. ಕೃಷಿ ಪ್ರಧಾನವಾದ ಭಾರತದಲ್ಲಿ ಜಾನುವಾರುಗಳ ಅವಶ್ಯಕತೆ ಬಹಳಷ್ಟಿದೆ. ಪ್ರತಿ ಮನೆ ಮನೆಗೆ ಭೇಟಿ ನೀಡಿ ಆಪ್ ಮೂಲಕ ಮಾಹಿತಿ ಸಂಗ್ರಹಿಸಿ ಎಂದು ತಿಳಿಸಿದರು.

ಪಾಲಿ ಕ್ಲಿನಿಕ್ ಉಪನಿರ್ದೇಶಕ ಡಾ.ಹರೀಶ್ ಎಸ್.ಎನ್. ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ತಿಪ್ಪೇಸ್ವಾಮಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಅಂಕಿ ಅಂಶಗಳ ಸಹಾಯಕ ನಿರ್ದೇಶಕಿ ಶ್ರೀಮತಿ ನೂರ್‍ಜಾನ್ ವೇದಿಕೆಯಲ್ಲಿದ್ದರು.

 

 

 

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment