Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೂಡಲ ಸಂಗಮ ದೇವಸ್ಥಾನದ ಪ್ರದೇಶವನ್ನು ಪ್ರವಾಸೋದ್ಯಮ ಇಲಾಖೆಗೆ ಸೇರಿಸಿ ಅಭಿವೃದ್ದಿಪಡಿಸಿ : ಸೇವಾ ಸಮಿತಿ ಮನವಿ

---Advertisement---

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 27 : ಚಳ್ಳಕೆರೆ ತಾಲ್ಲೂಕು ಪರಶುರಾಂಪುರ ಹೋಬಳಿಯ ನಾಗಗೊಂಡನಹಳ್ಳಿ ಬಳಿ ಹರಿಯುತ್ತಿರುವ ವೇದಾವತಿ ನದಿ ಮತ್ತು ರಾಣಿಕೆರೆ ಗರಣಿ ಹಳ್ಳ ಇವು ಕೂಡಲ ಸಂಗಮ ದೇವಸ್ಥಾನದ ಹತ್ತಿರ ಎರಡು ಕೂಡುವುದರಿಂದ ಕೂಡಲಸಂಗಮವೆಂದು ನಾಮಕರಣ ಮಾಡಿದ್ದು, ಈ ಪ್ರದೇಶವನ್ನು ಪ್ರವಾಸೋದ್ಯಮ ಇಲಾಖೆಗೆ ಸೇರಿಸಿ ಅಭಿವೃದ್ದಿಪಡಿಸುವಂತೆ ಕೂಡಲಸಂಗಮೇಶ್ವರ ಸೇವಾ ಸಮಿತಿ ಹಾಗೂ ನಾಗಗೊಂಡನಹಳ್ಳಿ ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಪ್ರತಿ ಶನಿವಾರ ಹಾಗೂ ಸೋಮವಾರ ಈ ಪುಣ್ಯ ಕ್ಷೇತ್ರಕ್ಕೆ ಬರುವ ಭಕ್ತಾಧಿಗಳ ಸಂಖ್ಯೆ ಜಾಸ್ತಿಯಿದೆ. ಪುರಾತನ ಕಾಲದ ಶಿವಲಿಂಗಗಳಿವೆ. ಚಳ್ಳಕೆರೆ ತಾಲ್ಲೂಕು ಬುಡಕಟ್ಟು ಜನಾಂಗದ ದೇವರುಗಳು ಕೂಡಲ ಸಂಗಮ ನದಿಯಲ್ಲಿ ಪುಣ್ಯ ಸ್ನಾನ ಮಾಡಿಸಲು ರಂಗವ್ವನಹಳ್ಳಿ, ಕರಿಕೆರೆ, ಕಾಲುವೆಹಳ್ಳಿ, ಯಾದಲಗಟ್ಟೆ, ಕ್ಯಾತಗೊಂಡನಹಳ್ಳಿ, ಗುಡಿಹಳ್ಳಿ, ಬೂದಿಹಳ್ಳಿ, ದೊಡ್ಡುಳ್ಳಾರ್ತಿ, ಚಿತ್ರನಾಯಕನಹಳ್ಳಿ, ಘಟಪರ್ತಿ, ಬೋಗನಹಳ್ಳಿ, ಹೊನ್ನೂರು, ದೇವರೆಡ್ಡಿಹಳ್ಳಿ, ಬುಕ್ಕಾಂಬೂದಿ ಸೇರಿದಂತೆ 25 ಕ್ಕೂ ಹೆಚ್ಚು ಗ್ರಾಮಗಳಿಂದ ಭಕ್ತಾಧಿಗಳು ನೂರಾರು ಸಂಖ್ಯೆಯಲ್ಲಿ ಬರುತ್ತಿರುವುದರಿಂದ ಈ ಪ್ರದೇಶವನ್ನು ಅಭಿವೃದ್ದಿಪಡಿಸುವಂತೆ ಜಿಲ್ಲಾಧಿಕಾರಿಯಲ್ಲಿ ವಿನಂತಿಸಿದರು.

ಆರ್.ರಾಜಣ್ಣ, ಧನಂಜಯ, ಕೆ.ಪಿ.ಭೂತಯ್ಯ, ಎನ್.ಹೆಚ್.ಭೀಮಣ್ಣ, ಬಡೇಶ, ಮಂಜುನಾಥ, ಯರ್ರಿಸ್ವಾಮಿ, ನರಸಿಂಹಮೂರ್ತಿ, ಸಂಜೀವರೆಡ್ಡಿ, ರೇವಣ್ಣ, ಭೂತೇಶ್ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment