Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೂಡಲ ಸಂಗಮ ದೇವಸ್ಥಾನದ ಪ್ರದೇಶವನ್ನು ಪ್ರವಾಸೋದ್ಯಮ ಇಲಾಖೆಗೆ ಸೇರಿಸಿ ಅಭಿವೃದ್ದಿಪಡಿಸಿ : ಸೇವಾ ಸಮಿತಿ ಮನವಿ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 27 : ಚಳ್ಳಕೆರೆ ತಾಲ್ಲೂಕು ಪರಶುರಾಂಪುರ ಹೋಬಳಿಯ ನಾಗಗೊಂಡನಹಳ್ಳಿ ಬಳಿ ಹರಿಯುತ್ತಿರುವ ವೇದಾವತಿ ನದಿ ಮತ್ತು ರಾಣಿಕೆರೆ ಗರಣಿ ಹಳ್ಳ ಇವು ಕೂಡಲ ಸಂಗಮ ದೇವಸ್ಥಾನದ ಹತ್ತಿರ ಎರಡು ಕೂಡುವುದರಿಂದ ಕೂಡಲಸಂಗಮವೆಂದು ನಾಮಕರಣ ಮಾಡಿದ್ದು, ಈ ಪ್ರದೇಶವನ್ನು ಪ್ರವಾಸೋದ್ಯಮ ಇಲಾಖೆಗೆ ಸೇರಿಸಿ ಅಭಿವೃದ್ದಿಪಡಿಸುವಂತೆ ಕೂಡಲಸಂಗಮೇಶ್ವರ ಸೇವಾ ಸಮಿತಿ ಹಾಗೂ ನಾಗಗೊಂಡನಹಳ್ಳಿ ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಪ್ರತಿ ಶನಿವಾರ ಹಾಗೂ ಸೋಮವಾರ ಈ ಪುಣ್ಯ ಕ್ಷೇತ್ರಕ್ಕೆ ಬರುವ ಭಕ್ತಾಧಿಗಳ ಸಂಖ್ಯೆ ಜಾಸ್ತಿಯಿದೆ. ಪುರಾತನ ಕಾಲದ ಶಿವಲಿಂಗಗಳಿವೆ. ಚಳ್ಳಕೆರೆ ತಾಲ್ಲೂಕು ಬುಡಕಟ್ಟು ಜನಾಂಗದ ದೇವರುಗಳು ಕೂಡಲ ಸಂಗಮ ನದಿಯಲ್ಲಿ ಪುಣ್ಯ ಸ್ನಾನ ಮಾಡಿಸಲು ರಂಗವ್ವನಹಳ್ಳಿ, ಕರಿಕೆರೆ, ಕಾಲುವೆಹಳ್ಳಿ, ಯಾದಲಗಟ್ಟೆ, ಕ್ಯಾತಗೊಂಡನಹಳ್ಳಿ, ಗುಡಿಹಳ್ಳಿ, ಬೂದಿಹಳ್ಳಿ, ದೊಡ್ಡುಳ್ಳಾರ್ತಿ, ಚಿತ್ರನಾಯಕನಹಳ್ಳಿ, ಘಟಪರ್ತಿ, ಬೋಗನಹಳ್ಳಿ, ಹೊನ್ನೂರು, ದೇವರೆಡ್ಡಿಹಳ್ಳಿ, ಬುಕ್ಕಾಂಬೂದಿ ಸೇರಿದಂತೆ 25 ಕ್ಕೂ ಹೆಚ್ಚು ಗ್ರಾಮಗಳಿಂದ ಭಕ್ತಾಧಿಗಳು ನೂರಾರು ಸಂಖ್ಯೆಯಲ್ಲಿ ಬರುತ್ತಿರುವುದರಿಂದ ಈ ಪ್ರದೇಶವನ್ನು ಅಭಿವೃದ್ದಿಪಡಿಸುವಂತೆ ಜಿಲ್ಲಾಧಿಕಾರಿಯಲ್ಲಿ ವಿನಂತಿಸಿದರು.

ಆರ್.ರಾಜಣ್ಣ, ಧನಂಜಯ, ಕೆ.ಪಿ.ಭೂತಯ್ಯ, ಎನ್.ಹೆಚ್.ಭೀಮಣ್ಣ, ಬಡೇಶ, ಮಂಜುನಾಥ, ಯರ್ರಿಸ್ವಾಮಿ, ನರಸಿಂಹಮೂರ್ತಿ, ಸಂಜೀವರೆಡ್ಡಿ, ರೇವಣ್ಣ, ಭೂತೇಶ್ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!