ಚಿತ್ರದುರ್ಗ | ಬೆಟ್ಟದ ನಾಗೇನಹಳ್ಳಿ ಬಳಿ ರೈಲಿಗೆ ಸಿಲುಕಿ ವ್ಯಕ್ತಿ ಸಾವು..!

0 Min Read

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 28 : ರೈಲಿನ ಹಳಿ ಮೇಲೆ ಮಲಗಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ನಿತಿನ್ ತೋಟದ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೃತ ನಿತಿನ್ ಗೆ ಈಗಿನ್ನು 35 ವರ್ಷ ವಯಸ್ಸಾಗಿತ್ತು.

ನಿತಿನ್ ತೋಟದ್ ಭೀಮಸಮುದ್ರ ಗ್ರಾಮದ ವ್ಯಕ್ತಿ. ಬೆಟ್ಟದ ನಾಗೇನಹಳ್ಳಿ ಬಳಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಚಿತ್ರದುರ್ಗ ರೈಲ್ವೆ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ. ಆದರೆ ವ್ಯಕ್ತಿಯ ಆತ್ಮಹತ್ಯೆಗೆ ಏನು ಕಾರಣ ಎಂಬುದು ತಿಳಿದು ಬಂದಿಲ್ಲ.

Share This Article
Leave a Comment

Leave a Reply

Your email address will not be published. Required fields are marked *