Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ : ಟೀ ಶರ್ಟ್.. ಗ್ಲಾಸ್ ನಿಂದ ಮತ್ತೆ ವಿವಾದ..!

Facebook
Twitter
Telegram
WhatsApp

ಬಳ್ಳಾರಿ: ನಟ ದರ್ಶನ್ ಗೆ ಒಂದೇ ಒಂದು ಸಿಗರೇಟ್ ನಿಂದ ಕಂಟಕ ಎದುರಾಯ್ತು. ಅಂದು ವಿಲ್ಸನ್ ಗಾರ್ಡ್ ನಾಗನ ಜೊತೆಗೆ ಕೂತು ಸಿಗರೇಟ್ ಸೇದಿರಲಿಲ್ಲ ಎಂದಿದ್ದರೆ ಪರಪ್ಪನ ಅಗ್ರಹಾರದಲ್ಲಿಯೇ ಇರುತ್ತಿದ್ದರು. ಈಗ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದಾರೆ.

ಪರಪ್ಪನ ಅಗ್ರಹಾರದಿಂದ ಇಂದು ಬೆಳಗ್ಗೆ 9.45ಕ್ಕೆ ಬಳ್ಳಾರಿ ತಲುಪಿದ್ದಾರೆ. ಬಳ್ಳಾರಿ ಜೈಲಿನ ಒಳಗೆ ಹೋಗಿದ್ದು, ಈಗ ಕೈದಿ ನಂಬರ್ ಕೂಡ ಬದಲಾಗಿದೆ. ಪರಪ್ಪನ ಅಗ್ರಹಾರದಲ್ಲಿದ್ದಾಗ ದರ್ಶನ್ ಅವರಿಗೆ 6106 ಕೈದಿ ನಂಬರ್ ನೀಡಲಾಗಿತ್ತು. ಆದರೆ ಬಳ್ಳಾರಿಗೆ ಶಿಫ್ಟ್ ಮಾಡಿದ ಮೇಲೆ ಆ ನಂಬರ್ ಬದಲಾಗಿದೆ‌. 511 ನಂಬರ್ ಅನ್ನು ನೀಡಲಾಗಿದೆ. ಈ ಹಿಂದೆ 6106 ಕೈದಿ ನಂಬರ್ ಅನ್ನು ಅಭಿಮಾನಿಗಳು ಎಲ್ಲಾ ಕಡೆ ಹಾಕಿಸಿಕೊಂಡಿದ್ದರು. ಈಗ ಕೈದಿ ನಂಬರ್ ಬದಲಾಗಿದೆ.

ಇನ್ನು ದರ್ಶನ್ ಅವರು ಬಳ್ಳಾರಿ ಜೈಲಿಗೆ ಶಿಫ್ಟ್ ಆಗುವಾಗಲೂ ವಿವಾದ ಹುಟ್ಟು ಹಾಕಿಕೊಂಡಿದ್ದಾರೆ. ಹಾಕಿದ್ದ ಪೂಮಾ ಟೀ ಶರ್ಟ್, ಸನ್ ಗ್ಲಾಸ್, ಬ್ರಾಂಡೆಡ್ ಜೀನ್ಸ್ ಎಲ್ಲವೂ ಚರ್ಚೆಗೆ ಗ್ರಾಸವಾಗಿದೆ. ಆದರೆ ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ ಆಗಿರುವುದರಿಂದ ಅವರ ಕುಟುಂಬಸ್ಥರಿಗೇನೆ ತೊಂದರೆಯಾಗಲಿದೆ. ಪರಪ್ಪನ ಅಗ್ರಹಾರ ಬೆಂಗಳೂರಿನಲ್ಲಿಯೇ ಇದ್ದಿದ್ದರಿಂದ ಆಗಾಗ ದರ್ಶನ್ ಅವರನ್ನು ನೋಡಿಕೊಂಡು ಬರಲು ಹೋಗುತ್ತಿದ್ದರು. ದರ್ಶನ್ ಅವರ ಸ್ನೇಹಿತರು ಕೂಡ ವಾರಕ್ಕೆ ಎರಡ್ಮೂರು ಮಂದಿ ಆದ್ರೂ ಭೇಟಿ ನೀಡುತ್ತಿದ್ದರು. ಆದರೀಗ ಬಳ್ಳಾರಿ ದೂರವಾಗುವ ಕಾರಣ, ಭೇಟಿಗೆ ಹೋಗುವುದಕ್ಕೆ ಕಷ್ಟ. ಫ್ಯಾಮಿಲಿಯವರು ಕೂಡ ಭೇಟಿಯನ್ನು ಕಡಿಮೆ ಮಾಡಲಿದ್ದಾರೆ. ಇದು ದರ್ಶನ್ ಅವರ ಕುಟುಂಬಕ್ಕೆ ನಷ್ಟವಾಗಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!