Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಐಸಿಸಿ ಅಧ್ಯಕ್ಷರಾದ ಜೈ ಶಾಗೆ ತಿಂಗಳ ಸಂಬಳ ಎಷ್ಟು ಗೊತ್ತಾ..? ಹೋದಲ್ಲಿ ಬಂದಲ್ಲಿ ಎಷ್ಟೆಲ್ಲಾ ಸೌಲಭ್ಯವಿದೆ..?

Facebook
Twitter
Telegram
WhatsApp

ಜೈ ಶಾ.. ಬಹಳ ಕಡಿಮೆ ವಯಸ್ಸಿಗೇನೆ ಉನ್ನತ ಹುದ್ದೆಗೆ ಏರಿರುವ ಹೆಗ್ಗಳಿಕೆ ಇವರದ್ದು. ಈಗಿನ್ನು 35 ವರ್ಷ. ಆದರೆ ಈಗಾಗಲೇ ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಗೆ ಜೈ ಶಾ ಅಧ್ಯಕ್ಷರಾಗಿದ್ದಾರೆ. ಅದರಲ್ಲೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 16 ದೇಶಗಳು ಇವರನ್ನು ಒಪ್ಪಿ ಆಯ್ಕೆ ಮಾಡಿದ್ದಾರೆ. ತಮ್ಮ 35ನೇ ವರ್ಷಕ್ಕೆ ಐಸಿಸಿ ಮುಖ್ಯಸ್ಥರಾಗಿರುವ 5ನೇ ಭಾರತೀಯ ಮತ್ತು ಅತ್ಯಂತ ಕಿರಿಯ ಎಂಬ ಹೆಗ್ಗಳಿಕೆ ಜೈಶಾ ಅವರದ್ದಾಗಿದೆ. ಐಸಿಸಿ ಅಧ್ಯಕ್ಷರಾಗಿ ಡಿಸೆಂಬರ್ ನಲ್ಲಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

ಐಸಿಸಿ ಅಧ್ಯಕ್ಷ ರಾಗಿರುವ ಜೈ ಶಾ ಅವರ ಸಂಬಳ ಎಷ್ಟಿರಬಹುದೆಂಬ ಕುತೂಹಲ ಎಲ್ಲರಲ್ಲೂ ಇದ್ದೆ ಇರುತ್ತದೆ. ಹಾಗೇ ಏನೆಲ್ಲಾ ಸೌಲಭ್ಯಗಳು ಸಿಗಬಹುದು ಎಂಬ ಪ್ರಶ್ನೆಯೂ ಕಾಡುತ್ತದೆ. ಯಾಕಂದ್ರೆ ಚಿಕ್ಕ ವಯಸ್ಸಿನಲ್ಲಿಯೇ ಹಲವು ಜವಾಬ್ದಾರಿಗಳನ್ನು ನಿಭಾಯಿಸಿದವರು ಅವರು. ಮಾಹಿತಿಗಳ ಪ್ರಕಾರ ಐಸಿಸಿ ಉನ್ನತ ಹುದ್ದೆಯಲ್ಲಿರುವ ವ್ಯಕ್ತಿಗಳಿಗೆ ಯಾವುದೇ ನಿರ್ದಿಷ್ಟ ವೇತನವನ್ನು ನಿಗಧಿ ಮಾಡುವುದಿಲ್ಲ. ಜವಾಬ್ದಾರಿ ಮತ್ತು ಕೆಲಸದ ಆಧಾರದ ಮೇಲೆ ಪಾವತಿ ಮಾಡುತ್ತದೆ ಎನ್ನಲಾಗಿದೆ. ಇನ್ನು ಐಸಿಸಿ ಸಭೆ, ಹೋಟೆಲ್ ವಸತಿ, ಪ್ರಯಾಣದ ಟಿಕೆಟ್ ಇವುಗಳ ಕುರಿತಾಗಿ ಐಸಿಸಿ ಇನ್ನು ಯಾವುದೇ ಮಾಹಿತಿಯನ್ನು ಬಹಿರಂಗ ಪಡಿಸಿಲ್ಲ.

ಜೈ ಶಾ ಬಿಸಿಸಿಐ ನಲ್ಲಿದ್ದಾಗ ದೇಶದಿಂದ ಅಂತರಾಷ್ಟ್ರೀಯ ಸಭೆಗಳಲ್ಲಿ ಭಾಗವಹಿಸಲು 82 ಸಾವಿರ, ಭಾರತದಲ್ಲಿಯೇ ನಡೆಯುವ ಸಭೆಗಳಲ್ಲಿ ಭಾಗವಹಿಸುವುದಕ್ಕೆ 40 ಸಾವಿರ, ಸಭೆಗಳನ್ನು ಹೊರತಾಗಿ ದೇಶದ ಒಳಗೆ ಪ್ರವೇಶಿಸಲು 30 ಸಾವಿರ ರೂಪಾಯಿ ನೀಡುತ್ತಾ ಇತ್ತು. ಇದನ್ನು ಹೊರತುಪಡಿಸಿ ಹೈಫೈ ಸೌಲಭ್ಯಗಳನ್ನು ನೀಡುತ್ತಾ ಇತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!