Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಪತ್ನಿಗೆ ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟು ಕೊಂದ ಕ್ರೂರಿ ಗಂಡ..!

---Advertisement---

ಚಿತ್ರದುರ್ಗ: ದಿನ ಬೆಳಗ್ಗೆಯಾದರೆ ವಿಚಿತ್ರ ಕೊಲೆಗಳ ಬಗ್ಗೆ ಸುದ್ದಿಗಳು ಬರುತ್ತಲೇ ಇರುತ್ತವೆ. ಚಿತ್ರದುರ್ಗ ಜಿಲ್ಲೆಯಲ್ಲೊಂದು ಅಮಾನುಷ ಕೊಲೆ ನಡೆದಿದೆ. ಪತ್ನಿಗೆ ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟು ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಣಕಾಲ್ಮೂರು ಪಟ್ಟಣದಲ್ಲಿ ನಡೆದಿದೆ.

ಪೂಜಾ ಎಂಬ ಮಹಿಳೆಯೇ ಕೊಲೆಯಾದ ದುರ್ದೈವಿ. ನಾಗೇಶ್ ಎಂಬಾತ ಕೊಲೆ ಮಾಡಿರುವ ಕ್ರೂರಿ. ಪತ್ನಿ ಪೂಜಾ ಮೇಲೆ ಅನುಮಾನಗೊಂಡು ಕ್ರೂರವಾಗಿ ಕೊಲೆ ಮಾಡಿದ್ದಾನೆ. ಅವಾಚ್ಯ ಶಬ್ಧಗಳಿಂದ ನಿಂದಿಸಿ, ಮುದ್ದೆ ಕೋಲಿನಿಂದ ಜೋರು ಹೊಡೆದು. ದೇಹದ ಹಲವು ಭಾಗಗಳಿಗೆ ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟಿದ್ದಾನೆ. ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದಾನೆ.

ಮದುವೆಯಾಗಿ ಆರಂಭದಲ್ಲಿ ಚೆನ್ನಾಗಿಯೇ ಸಂಸಾರ ನಡೆಸುತ್ತಿದ್ದರು ದಂಪತಿ. ಆದರೆ ಅದೇನಾಯ್ತೋ ಏನೊ ಪತ್ನಿ ಮೇಲೆ ಅನುಮಾನಗೊಂಡು ಜೀವನವನ್ನು ಕೊಲೆಯಲ್ಲಿ ಅಂತ್ಯ ಮಾಡಿಕೊಂಡಿದ್ದಾನೆ. ಸಂಬಂಧಗಳಲ್ಲಿ ಅನುಮಾನವೆಂಬ ಭೂತ ಯಾವತ್ತಿಗೂ ಬರಬಾರದು ಎಂಬ ಮಾತನ್ನ ಅನುಭವಸ್ಥರು ಸಾಕಷ್ಟು ಬಾರೀ ಹೇಳುತ್ತಾರೆ. ಸಣ್ಣ ಪುಟ್ಟ ಸಂಬಂಧದಲ್ಲಿ ಅನುಮಾನ ಹುಟ್ಟಿದರೇನೆ ಆ ಸಂಬಂಧಗಳು ಉಳಿಯುವುದಿಲ್ಲ. ಇನ್ನು ಸಂಸಾರದಲ್ಲಿ ಅನುಮಾನ ಎಂಬ ಭೂತ ಹುಟ್ಟಿಕೊಂಡರೆ ಸಂಸಾರದ ಸ್ಥಿತಿ ಅಧೋಗತಿಗೆ ತಲುಪಿ ಬಿಡುತ್ತದೆ. ಸಣ್ಣ ಅನುಮಾನವೇ ದೊಡ್ಡದಾಗುತ್ತಾ ಹೋಗುತ್ತದೆ. ಅದರಲ್ಲೂ ಗಂಡ-ಹೆಂಡತಿಯ ನಡುವೆ ಅನುಮಾನವೆಂಬುದು ಬಂದರೆ, ಹೊರಗೆ ಹೋಗಿ ಬಂದಾಗಲೂ, ಇನ್ಯಾವುದೋ ಸಣ್ಣ ಪುಟ್ಟ ತಪ್ಪಾದಾಗಲೂ ದೊಡ್ಡ ಮಟ್ಟಕ್ಕೆ ರಿಯಾಕ್ಟ್ ಆಗಲು ಶುರುವಾಗುತ್ತೆ. ಈಗ ನಾಗೇಶ್ ಮತ್ತು ಪೂಜಾ ಬದುಕಲ್ಲಿ ಅನುಮಾನ ಎಂಬ ಬಿರುಗಾಳಿ ಕೊಲೆಯನ್ನೇ ಮಾಡಿಸಿದೆ. ನಾಗೇಶ್ ವಿರುದ್ಧ ಮೊಣಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...